Just In
Don't Miss!
- Sports
ಟೆಸ್ಟ್ ಸರಣಿ ಮುಗಿಯುತ್ತಲೇ ಕೆಜಿಎಫ್ನ "ರಾಕಿ ಭಾಯ್" ಅವತಾರವೆತ್ತಿದ ವಾರ್ನರ್
- Automobiles
ಅಮೆರಿಕಾ ಅಧ್ಯಕ್ಷರು ಪ್ರಯಾಣಿಸುವ ವಿಮಾನದ ಬಗೆಗಿನ ರೋಚಕ ಸಂಗತಿಗಳಿವು
- Finance
ದಿನದ ಗರಿಷ್ಠ ಮಟ್ಟದಿಂದ 500ಕ್ಕೂ ಹೆಚ್ಚು ಪಾಯಿಂಟ್ ಕುಸಿದ ಸೆನ್ಸೆಕ್ಸ್
- Lifestyle
ಎಷ್ಟೇ ಪ್ರಯತ್ನಿಸಿದರೂ ಸೊಂಟದ ಬೊಜ್ಜು ಕರಗದಿರಲು ಇದೇ ಕಾರಣ
- News
ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ ರು ದೇಣಿಗೆ ನೀಡಿದ ಗೌತಮ್ ಗಂಭೀರ್
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶೂಟಿಂಗ್ ವೇಳೆ ರಜನಿ ತಂಡಕ್ಕೆ ಕಲ್ಲು ಎಸೆದ ವಿದ್ಯಾರ್ಥಿಗಳು
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 'ದರ್ಬಾರ್' ಚಿತ್ರ ಇತ್ತೀಚಿಗಷ್ಟೆ ಲಾಂಚ್ ಸೆಟ್ಟೆರಿತ್ತು. ಆದರೆ, ಇದೀಗ ಈ ಸಿನಿಮಾದ ಚಿತ್ರೀಕರಣ ನಡೆಯುವ ವೇಳೆ ಚಿತ್ರತಂಡಕ್ಕೆ ವಿರೋಧ ವ್ಯಕ್ತವಾಗಿದೆ.
ಮುಂಬೈನ ಕಾಲೇಜ್ ಒಂದರಲ್ಲಿ 'ದರ್ಬಾರ್' ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಕಾಲೇಜಿನ ವಿದ್ಯಾರ್ಥಿಗಳು ಕಲ್ಲು ಎಸೆದು ತಮ್ಮ ಆಕ್ರೋಶವನ್ನು ತೋರಿಸಿದ್ದಾರೆ.
ರಜನೀಕಾಂತ್ ನಟನೆಯ 'ದರ್ಬಾರ್' ಚಿತ್ರೀಕರಣ ವೇಳೆ ಕಲ್ಲೆಸೆತ
ಚಿತ್ರದ ಮುಖ್ಯ ದೃಶ್ಯಗಳ ಚಿತ್ರೀಕರಣ ಅಲ್ಲಿ ನಡೆಯುತ್ತಿದ್ದ ಕಾರಣ, ಅದರ ಫೋಟೋ ಹಾಗೂ ವಿಡಿಯೋ ಸೆರೆ ಹಿಡಿಯಬಾರದು ಎಂದು ಚಿತ್ರತಂಡ ಹೇಳಿತ್ತು. ಇದರಿಂದ ಬೇಸರಗೊಂಡ ವಿದ್ಯಾರ್ಥಿಗಳು ಚಿತ್ರೀಕರಣ ನಡೆಯುವ ಸ್ಥಳದಲ್ಲಿ ಕಲ್ಲು ಎಸೆದಿದ್ದಾರೆ. ಇದರ ವಿರುದ್ಧ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿರುವ ಚಿತ್ರತಂಡ ಚಿತ್ರೀಕರಣವನ್ನೇ ಬೇರೆಡೆ ನಡೆಸಲು ಚಿಂತಿಸುತ್ತಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಮುರುಗದಾಸ್ 'ದರ್ಬಾರ್' ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ರಜನಿಗೆ ಮುರುಗದಾಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದಲ್ಲಿ ರಜನಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಪ್ಪತ್ತೈದು ವರ್ಷಕ್ಕೂ ಹಿಂದೆ 'ಪಾಂಡಿಯನ್' ಎಂಬ ಸಿನಿಮಾದಲ್ಲಿ ರಜನೀಕಾಂತ್ ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದರು. ಆ ನಂತರ ಈಗಲೇ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ರಜನಿ - ಮುರುಗದಾಸ್ ಜೋಡಿಯ ಹೊಸ ಚಿತ್ರದ ಫಸ್ಟ್ ಲುಕ್ ರಿಲೀಸ್
'ದರ್ಬಾರ್' ಸಿನಿಮಾ ಈಗಾಗಲೇ ಪೋಸ್ಟರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಈ ಸಿನಿಮಾವನ್ನು ಸಂಕ್ರಾಂತಿಗೆ ಬಿಡುಗಡೆ ಮಾಡಲು ಪ್ಲಾನ್ ಚಿತ್ರತಂಡದಾಗಿದೆ. ನಯನಾತಾರ ಚಿತ್ರದ ನಾಯಕಿಯಾಗಿದ್ದಾರೆ.