Don't Miss!
- News ಅಚ್ಚೇದಿನಗಳಲ್ಲ-ದೌರ್ಭಾಗ್ಯದ ದಿನಗಳು: ಕಾಂಗ್ರೆಸ್ ಜಾಹೀರಾತು
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೂಟಿಂಗ್ ವೇಳೆ ರಜನಿ ತಂಡಕ್ಕೆ ಕಲ್ಲು ಎಸೆದ ವಿದ್ಯಾರ್ಥಿಗಳು
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 'ದರ್ಬಾರ್' ಚಿತ್ರ ಇತ್ತೀಚಿಗಷ್ಟೆ ಲಾಂಚ್ ಸೆಟ್ಟೆರಿತ್ತು. ಆದರೆ, ಇದೀಗ ಈ ಸಿನಿಮಾದ ಚಿತ್ರೀಕರಣ ನಡೆಯುವ ವೇಳೆ ಚಿತ್ರತಂಡಕ್ಕೆ ವಿರೋಧ ವ್ಯಕ್ತವಾಗಿದೆ.
ಮುಂಬೈನ ಕಾಲೇಜ್ ಒಂದರಲ್ಲಿ 'ದರ್ಬಾರ್' ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಕಾಲೇಜಿನ ವಿದ್ಯಾರ್ಥಿಗಳು ಕಲ್ಲು ಎಸೆದು ತಮ್ಮ ಆಕ್ರೋಶವನ್ನು ತೋರಿಸಿದ್ದಾರೆ.
ರಜನೀಕಾಂತ್ ನಟನೆಯ 'ದರ್ಬಾರ್' ಚಿತ್ರೀಕರಣ ವೇಳೆ ಕಲ್ಲೆಸೆತ
ಚಿತ್ರದ ಮುಖ್ಯ ದೃಶ್ಯಗಳ ಚಿತ್ರೀಕರಣ ಅಲ್ಲಿ ನಡೆಯುತ್ತಿದ್ದ ಕಾರಣ, ಅದರ ಫೋಟೋ ಹಾಗೂ ವಿಡಿಯೋ ಸೆರೆ ಹಿಡಿಯಬಾರದು ಎಂದು ಚಿತ್ರತಂಡ ಹೇಳಿತ್ತು. ಇದರಿಂದ ಬೇಸರಗೊಂಡ ವಿದ್ಯಾರ್ಥಿಗಳು ಚಿತ್ರೀಕರಣ ನಡೆಯುವ ಸ್ಥಳದಲ್ಲಿ ಕಲ್ಲು ಎಸೆದಿದ್ದಾರೆ. ಇದರ ವಿರುದ್ಧ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿರುವ ಚಿತ್ರತಂಡ ಚಿತ್ರೀಕರಣವನ್ನೇ ಬೇರೆಡೆ ನಡೆಸಲು ಚಿಂತಿಸುತ್ತಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಮುರುಗದಾಸ್ 'ದರ್ಬಾರ್' ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ರಜನಿಗೆ ಮುರುಗದಾಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದಲ್ಲಿ ರಜನಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಪ್ಪತ್ತೈದು ವರ್ಷಕ್ಕೂ ಹಿಂದೆ 'ಪಾಂಡಿಯನ್' ಎಂಬ ಸಿನಿಮಾದಲ್ಲಿ ರಜನೀಕಾಂತ್ ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದರು. ಆ ನಂತರ ಈಗಲೇ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ರಜನಿ - ಮುರುಗದಾಸ್ ಜೋಡಿಯ ಹೊಸ ಚಿತ್ರದ ಫಸ್ಟ್ ಲುಕ್ ರಿಲೀಸ್
'ದರ್ಬಾರ್' ಸಿನಿಮಾ ಈಗಾಗಲೇ ಪೋಸ್ಟರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಈ ಸಿನಿಮಾವನ್ನು ಸಂಕ್ರಾಂತಿಗೆ ಬಿಡುಗಡೆ ಮಾಡಲು ಪ್ಲಾನ್ ಚಿತ್ರತಂಡದಾಗಿದೆ. ನಯನಾತಾರ ಚಿತ್ರದ ನಾಯಕಿಯಾಗಿದ್ದಾರೆ.