Don't Miss!
- Technology ಬಜೆಟ್ ಬೆಲೆಗೆ ಲಭ್ಯವಿರುವ ಈ ಫೋನ್ಗಳ ಫೀಚರ್ಸ್ ತಿಳಿದ್ರೆ, ವಾವ್ ಅಂತೀರಾ!
- Automobiles ಸಾಯಿಬಾಬಾ ಭಕ್ತರಿಗೆ ಸಿಹಿಸುದ್ದಿ: ಇಲ್ಲಿಂದ ಶಿರಡಿಗೆ ಪಲ್ಲಕ್ಕಿ ಬಸ್.. ಕಡಿಮೆ ಖರ್ಚಿನಲ್ಲಿ ಹೋಗಬಹುದು!
- Lifestyle ವೀಲ್ಚೇರ್ನಲ್ಲಿ ಮಾವನ ಹೆಣವಿಟ್ಟು ಬ್ಯಾಂಕ್ಗೆ ತಂದ ಸೊಸೆ..! ಲೋನ್ ಮಾಡಿಸುವಾಗ ಸಿಕ್ಕಿಬಿದ್ಲು..!
- Finance ಅಂಬುಜಾ ಸಿಮೆಂಟ್ ಮೇಲೆ ಅದಾನಿ ಗ್ರೂಪ್ನಿಂದ 8,339 ಕೋಟಿ ರೂ. ಹೂಡಿಕೆ
- News ಕರ್ನಾಟಕದಲ್ಲಿ ಮೋದಿ, ಯೋಗಿ, ಅಮಿತ್ ಶಾ, ಜೆಪಿ ನಡ್ಡಾ ಪ್ರಚಾರ: ಯಾವಾಗ, ಎಲ್ಲೆಲ್ಲಿ? ಇಲ್ಲಿದೆ ಮಾಹಿತಿ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸ್ತ್ರೀಶಕ್ತಿ ಚಿತ್ರ
ಆಗಸ್ಟ್ 31ರಿಂದ ಸೆಪ್ಟಂಬರ್ 3ರವರೆಗೂ ಅಲಹಾಬಾದ್ ನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ನಿರ್ದೇಶಕ ಎಸ್.ವಿ.ಸುರೇಶ್ ಛಾಯಾಗ್ರಾಹಕ ಕೆ.ಶಶಿಧರ್ ಅವರೊಡನೆ ಅಲಹಾಬಾದ್ ಗೆ ತೆರಳಲಿದ್ದಾರೆ.
ಸ್ತ್ರೀಭ್ರೂಣ ಹತ್ಯೆ, ಸ್ವಯಂ ಉದ್ಯೋಗ ಹೀಗೆ ಅನೇಕ ವಿಚಾರಗಳನ್ನೊಳಗೊಂಡಿರುವ ಈ ಚಿತ್ರದ ಕಥೆಯನ್ನು ಸುದೀಪ್ ಅವರ ಬಳಿ ಹೇಳಿದಾಗ ಸಾಮಾಜಿಕ ಕಳಕಳಿಯಿರುವ ಈ ಚಿತ್ರದ ನಿರ್ಮಾಣಕ್ಕೆ ನನ್ನ ಬೆಂಬಲವಿದೆ ಎಂದು ತಿಳಿಸಿ ನನಗೆ ನಿರ್ದೇಶನ ಜವಾಬ್ದಾರಿ ವಹಿಸಿದರು.
ಈಗ ಚಿತ್ರ ಗಾಂಧಿನಗರ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿರುವುದು ನನಗೆ ಸಂತಸ ತಂದಿದೆ ಎನ್ನುವ ನಿರ್ದೇಶಕ ಎಸ್.ವಿ.ಸುರೇಶ್. ತಮ್ಮ ಮೇಲೆ ನಂಬಿಕೆಯಿಟ್ಟು ನಿರ್ದೇಶನದ ಜವಾಬ್ದಾರಿ ನೀಡಿದ ಸುದೀಪ್ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ವಿ.ಮನೋಹರ್ ಸಂಗೀತ ನೀಡಿರುವ ಈ ಚಿತ್ರಕ್ಕೆ ಬಿ.ಎಸ್.ಕೆಂಪರಾಜ್ ಅವರ ಸಂಕಲನವಿದೆ. ಹರ್ಷ ನೃತ್ಯ ನಿರ್ದೇಶನ, ಚಂದ್ರು ಸಾಹಸ ನಿರ್ದೇಶನ, ಅರುಣ್ ಸಾಗರ್ ಕಲಾನಿರ್ದೇಶನವಿರುವ ಈ ಚಿತ್ರಕ್ಕೆ ಹೊ.ನ.ಸತ್ಯ ಕಥೆ, ಸಂಭಾಷಣೆ ಬರೆದಿದ್ದಾರೆ.
ಅಚ್ಯುತರಾವ್ ಅವರ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ತಾರಾಬಳಗದಲ್ಲಿ ರಾಜೀವ್, ಸೋನು, ಶರತ್ ಲೋಹಿತಾಶ್ವ, ಸುಂದರರಾಜ್, ಗೋಪಿನಾಥ ಭಟ್, ತುಳಸಿ ಶಿವಮಣಿ, ಕಾಶಿ, ರಾಮಕೃಷ್ಣ ಮುಂತಾದವರಿದ್ದಾರೆ. (ಒನ್ ಇಂಡಿಯಾ ಕನ್ನಡ)