Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸ್ತ್ರೀಶಕ್ತಿ ಚಿತ್ರ
ಆಗಸ್ಟ್ 31ರಿಂದ ಸೆಪ್ಟಂಬರ್ 3ರವರೆಗೂ ಅಲಹಾಬಾದ್ ನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ನಿರ್ದೇಶಕ ಎಸ್.ವಿ.ಸುರೇಶ್ ಛಾಯಾಗ್ರಾಹಕ ಕೆ.ಶಶಿಧರ್ ಅವರೊಡನೆ ಅಲಹಾಬಾದ್ ಗೆ ತೆರಳಲಿದ್ದಾರೆ.
ಸ್ತ್ರೀಭ್ರೂಣ ಹತ್ಯೆ, ಸ್ವಯಂ ಉದ್ಯೋಗ ಹೀಗೆ ಅನೇಕ ವಿಚಾರಗಳನ್ನೊಳಗೊಂಡಿರುವ ಈ ಚಿತ್ರದ ಕಥೆಯನ್ನು ಸುದೀಪ್ ಅವರ ಬಳಿ ಹೇಳಿದಾಗ ಸಾಮಾಜಿಕ ಕಳಕಳಿಯಿರುವ ಈ ಚಿತ್ರದ ನಿರ್ಮಾಣಕ್ಕೆ ನನ್ನ ಬೆಂಬಲವಿದೆ ಎಂದು ತಿಳಿಸಿ ನನಗೆ ನಿರ್ದೇಶನ ಜವಾಬ್ದಾರಿ ವಹಿಸಿದರು.
ಈಗ ಚಿತ್ರ ಗಾಂಧಿನಗರ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿರುವುದು ನನಗೆ ಸಂತಸ ತಂದಿದೆ ಎನ್ನುವ ನಿರ್ದೇಶಕ ಎಸ್.ವಿ.ಸುರೇಶ್. ತಮ್ಮ ಮೇಲೆ ನಂಬಿಕೆಯಿಟ್ಟು ನಿರ್ದೇಶನದ ಜವಾಬ್ದಾರಿ ನೀಡಿದ ಸುದೀಪ್ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ವಿ.ಮನೋಹರ್ ಸಂಗೀತ ನೀಡಿರುವ ಈ ಚಿತ್ರಕ್ಕೆ ಬಿ.ಎಸ್.ಕೆಂಪರಾಜ್ ಅವರ ಸಂಕಲನವಿದೆ. ಹರ್ಷ ನೃತ್ಯ ನಿರ್ದೇಶನ, ಚಂದ್ರು ಸಾಹಸ ನಿರ್ದೇಶನ, ಅರುಣ್ ಸಾಗರ್ ಕಲಾನಿರ್ದೇಶನವಿರುವ ಈ ಚಿತ್ರಕ್ಕೆ ಹೊ.ನ.ಸತ್ಯ ಕಥೆ, ಸಂಭಾಷಣೆ ಬರೆದಿದ್ದಾರೆ.
ಅಚ್ಯುತರಾವ್ ಅವರ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ತಾರಾಬಳಗದಲ್ಲಿ ರಾಜೀವ್, ಸೋನು, ಶರತ್ ಲೋಹಿತಾಶ್ವ, ಸುಂದರರಾಜ್, ಗೋಪಿನಾಥ ಭಟ್, ತುಳಸಿ ಶಿವಮಣಿ, ಕಾಶಿ, ರಾಮಕೃಷ್ಣ ಮುಂತಾದವರಿದ್ದಾರೆ. (ಒನ್ ಇಂಡಿಯಾ ಕನ್ನಡ)