Don't Miss!
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೀಮೇಕ್ ಚಿತ್ರಗಳಿಗೆ ಸಬ್ಸಿಡಿ ಕೂಡದು- ಕೃಷ್ಣಗೆ ನಿರ್ದೇಶಕರ ಮನವಿ ಪತ್ರ
ಬೆಂಗಳೂರು : ರೀಮೇಕ್ ಕನ್ನಡ ಚಿತ್ರಗಳಿಗೆ ಕೊಡುತ್ತಿರುವ ಸಬ್ಸಿಡಿಯನ್ನು ರದ್ದು ಮಾಡುವಂತೆ ಕನ್ನಡ ಚಲನಚಿತ್ರ ನಿರ್ದೇಶಕರ ಸಂಘ ಬುಧವಾರ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಮನವಿ ಪತ್ರ ಸಲ್ಲಿಸಿದೆ.
ರೀಮೇಕ್ ಚಿತ್ರಗಳಿಗೆ ಸಬ್ಸಿಡಿ ಕೊಟ್ಟು, ಬೆನ್ನು ತಟ್ಟುತ್ತಿರುವುದರಿಂದ, ನಮ್ಮೂರಿನ ಕನ್ನಡ ಕಲಾವಿದರು ಹಾಗೂ ತಂತ್ರಜ್ಞರು ಮೂಲೆಗುಂಪಾಗುವುದರ ಜೊತೆಗೆ ಸರ್ಕಾರದ ಬೊಕ್ಕಸಕ್ಕೆ ಈವರೆಗೆ ಸರಿ ಸುಮಾರು 100 ಕೋಟಿ ರುಪಾಯಿ ನಷ್ಟವಾಗಿದೆ. ಕಳೆದೊಂದು ವರ್ಷದ ಅವಧಿಯಲ್ಲಿ ಸ್ಯಾಂಡಲ್ವುಡ್ ಕನ್ನಡ ಬಾರದ 25 ನಿರ್ದೇಶಕರನ್ನು ಕಂಡಿದೆ! ಅವರನ್ನು ಕರೆ ತಂದ ನಿರ್ಮಾಪಕರಿಗೆ ಧನ್ಯವಾದಗಳು. ರೀಮೇಕ್ ಚಿತ್ರಗಳಿಗೆ ಸರ್ಕಾರ ಹೀಗೇ ಸಹಾಯಧನ ನೀಡುತ್ತಾ ಹೋದರೆ ಬೊಕ್ಕಸ ಇನ್ನಷ್ಟು ಕಳೆದುಕೊಳ್ಳಲಿದೆ ಎಂದು ಸಂಘದ ಪದಾಧಿಕಾರಿಗಳಲ್ಲೊಬ್ಬರಾದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಎಚ್ಚರಿಕೆಯ ಮಾತುಗಳನ್ನಾಡಿದರು.
ಬಾಬು ಜೊತೆಗೆ ನಿರ್ದೇಶಕರಾದ ಕೂಡ್ಲು ರಾಮಕೃಷ್ಣ, ಭಾರ್ಗವ, ತಿಪಟೂರು ರಘು, ಬಿ.ವಿ.ರಾಜಾರಾಂ ಹಾಗೂ ಬೂದಾಳ್ ಕೃಷ್ಣಮೂರ್ತಿ ಮೊದಲಾದವರು ಮುಖ್ಯಮಂತ್ರಿ ಕೃಷ್ಣ ಅವರಿಗೆ ಮನವಿ ಸಲ್ಲಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಸ್ಯಾಂಡಲ್ವುಡ್