twitter
    For Quick Alerts
    ALLOW NOTIFICATIONS  
    For Daily Alerts

    ಶ್ರೀ ಕುಮಾರ ಶಿವಯೋಗಿ ಆತ್ಮಚರಿತ್ರೆಯಲ್ಲಿ ಸುಚೇಂದ್ರ ಪ್ರಸಾದ್: ಬೃಹತ್ ರಥಯಾತ್ರೆ!

    |

    ನಟ ಸುಚೇಂದ್ರ ಪ್ರಸಾದ್ ಹಾನಗಲ್ ಶ್ರೀ ಕುಮಾರ ಶಿವಯೋಗಿ ಸ್ವಾಮಿ ಆತ್ಮಚರಿತ್ರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾವನ್ನು ರಾಷ್ಟ್ರ ಪ್ರಶಸ್ತಿ ಗೆದ್ದಿರೋ ನಿರ್ದೇಶಕ ಬಿ ಎಸ್ ಲಿಂಗದೇವರು ಆಕ್ಷನ್ ಕಟ್ ಹೇಳಿದ್ದಾರೆ.

    ಮಹಾಪುರುಷ ಹಾನಗಲ್ಲ ಶ್ರೀ ಕುಮಾರ ಶಿವಯೋಗಿ ಆತ್ಮಚರಿತ್ರೆ 'ವಿರಾಟಪುರ ವಿರಾಗಿ' ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಮಹಾಪುರುಷ ಹಾನಗಲ್ ಶ್ರೀ ಕುಮಾರ ಶಿವಯೋಗಿ ಅವರ ನೆನಪಿನಲ್ಲಿ ವಿರಾಗಿ ಶ್ರೀ ಕುಮಾರೇಶ್ವರ ರಥಯಾತ್ರೆ ಮಾಡುವುದಕ್ಕೆ ಮುಂದಾಗಿದೆ.

    ವಿರಾಗಿ ಶ್ರೀ ಕುಮಾರೇಶ್ವರ ಬೃಹತ್ ರಥಯಾತ್ರೆಯಲ್ಲಿ ಸುಮಾರು 6 ರಥ, 13 ದಿನ, 7000 ಕಿಮೀ, 360 ಸಭೆ, 1 ಕೋಟಿ ಜನರ ಉಪಸ್ಥಿತಿ ಇರುವ ಈ ಬೃಹತ್ ರಥಯಾತ್ರೆ ಡಿಸೆಂಬರ್ 20ರಂದು ಆರಂಭಗೊಳ್ಳಲಿದ್ದು, 2023ಯ ಜನವರಿ 1ರಂದು ಗದಗದಲ್ಲಿ ಮುಕ್ತಾಯಗೊಳ್ಳಲಿದೆ.

    Suchendra Prasad In Hanagal Sri Kumara Shivayogi Swamy Biopic

    ಶ್ರೀ ಕುಮಾರ ಶಿವಯೋಗಿಗಳು ದಂತಕಥೆಯನ್ನು ತೆರೆಮೇಲೆ ತೋರಿಸುವುಕ್ಕೆ ಬಿ ಎಸ್ ಲಿಂಗದೇವರು ಸಜ್ಜಾಗಿದ್ದಾರೆ. ಈಗಾಗಲೇ ಸಿನಿಮಾ ಕೂಡ ರೆಡಿಯಾಗಿದೆ. ಶ್ರೀ ಕುಮಾರ ಶಿವಯೋಗಿ ಅವರ ಪಾತ್ರದಲ್ಲಿ ಕನ್ನಡ ಹಿರಿಯ ನಟ ಸುಚೇಂದ್ರ ಪ್ರಸಾದ್ ಕಾಣಿಸಿಕೊಂಡಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಲಿಂಗದೇವರು ಆಕ್ಷನ್ ಕಟ್ ಹೇಳಿದ್ದರಿಂದ ಸಿನಿಮಾ ನಿರೀಕ್ಷೆ ದುಪ್ಪಟ್ಟಾಗಿದೆ.

    "ಕುಮಾರ ಶಿವಯೋಗಿಗಳು ಒಂದು ದಂತಕಥೆ. ಒಬ್ಬ ಮನುಷ್ಯ ತನ್ನ ಜೀವಿತಾಧಿಯಲ್ಲಿ ಏನೇನು ಮಾಡಲು ಅಸಾಧ್ಯವೋ ಅದನ್ನೆಲ್ಲಾ ಸಾಧ್ಯ ಮಾಡಿದ್ದಾರೆ. ಗಾಂಧೀಜಿಯವರು ಭಾರತಕ್ಕೆ ಬರುವ ಕೆಲವು ವರ್ಷಗಳ ಮೊದಲೇ ಗಾಂಧೀಜಿ ಅವರು ಆದರ್ಶ ಅಂದುಕೊಂಡಿದ್ದ ಬಹುತೇಕ ಕೆಲಸಗಳನ್ನು ಮಾಡಿ ತೋರಿಸಿದವರು ಹಾನಗಲ್ಲ ಗುರುಕುಮಾರ ಶಿವಯೋಗಿಗಳು" ಎಂದು ಪದ್ಮಶ್ರೀ ಪುರಸ್ಕೃತಡಾ. ಗಿರೀಶ್ ಕಾಸರವಳ್ಳಿ ಅಭಿಪ್ರಾಯಪಟ್ಟಿದ್ದಾರೆ.

    Suchendra Prasad In Hanagal Sri Kumara Shivayogi Swamy Biopic

    ಹಾನಗಲ್ಲ ಗುರುಕುಮಾರ ಶಿವಯೋಗಿಗಳು ತಮ್ಮ ಜೀವಿತಾವಧಿಯಲ್ಲಿ ಹೊಸ ಮನ್ವಂತರಕ್ಕೆ ಬುನಾದಿ ಹಾಕಿದ್ದರು. ಸಮ ಸಮಾಜ ನಿರ್ಮಾಣ. ಸರ್ವರಿಗೂ ಶಿಕ್ಷಣ. ಅಂಧರ ಬಾಳಿಗೆ ಸಂಗೀತ ಶಿಕ್ಷಣ. ಮಹಿಳಾ ಶಿಕ್ಷಣ ಮತ್ತು ಸ್ತ್ರೀ ಸಬಲೀಕರಣ. ಅಧುನಿಕ ಕೃಷಿ ಪದ್ಧತಿ ಮತ್ತು ಗೋಶಾಲೆ ಸ್ಥಾಪನೆ. ಹತ್ತಿ ಕರ್ಖಾನೆಯ ಸ್ಥಾಪನೆ. ಆಯುರ್ವೇದ ಚಿಕಿತ್ಸಾಲಯ ಸ್ಥಾಪನೆ. ಚಿತ್ರಮಂದಿರಗಳ ಪ್ರಾರಂಭ, ಪ್ರಾಣಿ ಬಲಿ ನಿಷೇಧ. ಹೀಗೆ ಹತ್ತು ಹಲವಾರು ಕಾರ್ಯಕ್ರಮಗಳನ್ನು ಸಾಧ್ಯವಾಗಿಸಿದ್ದಾರೆ.

    ಹಾನಗಲ್ಲ ಗುರುಕುಮಾರ ಶಿವಯೋಗಿಗಳ ಆತ್ಮಚರಿತ್ರೆಯೇ 'ವಿರಾಟಪುರ ವಿರಾಗಿ' ಸಿನಿಮಾವಾಗಿದೆ. ಈ ಸಿನಿಮಾಗೆ ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನವಿದೆ. ಅಶೋಕ್ ವಿ ರಾಮನ್ ಕ್ಯಾಮರಾ, ಎಸ್ ಗುಣಶೇಖರನ್ ಎಡಿಟಿಂಗ್ ಮಾಡಿದ್ದಾರೆ.

    English summary
    Suchendra Prasad In Hanagal Sri Kumara Shivayogi Swamy Biopic, Know More.
    Sunday, December 18, 2022, 23:47
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X