Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತದಾನ ಮಾಡಿದ ಕಿಚ್ಚನಿಗೆ ಸಿಕ್ಕಿತು ಉಡುಗೊರೆ
ರಾಜ್ಯದ ಎಲ್ಲೆಡೆ ಮತದಾನ ನಡೆಯುತ್ತಿದೆ. ಕಳೆದ ಬಾರಿಗೆ ಹೋಲಿಕೆ ಮಾಡಿಕೊಂಡರೆ ಈ ಸಲ ಜನರು ಮನೆಯಿಂದ ಹೊರಬಂದು ವೋಟ್ ಮಾಡಲು ಹಿಂದೆಟು ಹಾಕುತ್ತಿದ್ದಾರೆ. ಆದರೆ ಸಿನಿಮಾ ಕಲಾವಿದರು ಮಾತ್ರ ತಮ್ಮ ಹಕ್ಕನ್ನು ಚಲಾಯಿಸಲು ಕೆಲಸದ ಮಧ್ಯೆ ಬಿಡುವು ಮಾಡಿಕೊಂಡು ಬಂದಿದ್ದಾರೆ.
ನಟ ಕಿಚ್ಚ ಸುದೀಪ್ ತಮ್ಮ ಪತ್ನಿ ಪ್ರಿಯ ಅವರ ಜೊತೆಯಲ್ಲಿ ಬಂದು ಮತಗಟ್ಟೆ ಸಂಖ್ಯೆ 175 ಬೊಮ್ಮನಹಳ್ಳಿಯಲ್ಲಿ ಮತಚಲಾಯಿಸಿದರು. ಇದೇ ವೇಳೆ ಮಾತನಾಡಿದ ಕಿಚ್ಚ "ಎಲ್ಲೆಡೆ ಮತದಾನ ಕಡಿಮೆಯಾಗಿದೆ ಎಂದು ಕೇಳ್ಪಟ್ಟೆ, ನಾನು ಪತ್ನಿ ಜೊತೆ ಮತದಾನ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸ ಆಗಿಲ್ಲ ಎಂದು ದೂರಬೇಡಿ. ಇಂದೇ ಮತ ಚಲಾಯಿಸಿ, ಅಭಿವೃದ್ಧಿಗೆ ನಾಂದಿ ಹಾಡಿ ಎಂದರು.
ಹಕ್ಕು ಚಲಾಯಿಸಿದ ಕಿರುತೆರೆಯ ಕಲಾವಿದರು
ಮತದಾನ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮತದಾನ ಮಾಡಿದ ಕಿಚ್ಚ ಸುದೀಪ್ ಹಾಗೂ ಪತ್ನಿಗೆ ಪ್ರಿಯಾ ಅವರಿಗೆ ತುಳಸಿ ಗಿಡವನ್ನ ಉಡುಗೊರೆಯಾಗಿ ನೀಡಿಲಾಯ್ತು. ಕಳೆದ ಒಂದು ತಿಂಗಳಿನಿಂದ ಬಿ ಪ್ಯಾಕ್ ಸಂಸ್ಥೆ ಯಿಂದ ಗಿಡಗಳ ಹಂಚಿಕೆ ಮಾಡುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.
ಬಿ ಪ್ಯಾಕ್ ಸಂಸ್ಥೆಯಿಂದ ಪ್ರಥಮ ಬಾರಿಗೆ ಮತ ಚಲಾಯಿಸುವವರಿಗೂ ಹಾಗೂ ಹಿರಿಯ ನಾಗರಿಕರಿಗೆ ಗಿಡಗಳನ್ನ ವಿತರಿಸಲಾಗುತ್ತಿದ್ದು, ೧೦೦೦ ತುಳಸಿ ಮತ್ತು ಹೂವಿನ ಗಿಡಗಳನ್ನ ಹಂಚಿಕೆ ಮಾಡಲಾಗುತ್ತಿದೆ. ಮತದಾನವನ್ನ ಜಾಗೃತಿ ಮಾಡಿಕೊಂಡು ಬಂದಿರುವ ಬಿ ಪ್ಯಾಕ್ ಸಂಸ್ಥೆ ಬಸವನಗುಡಿ, ಶಿವಾಜಿನಗರ, ಗೋವಿಂದ ರಾಜನಗರ , ಮಲ್ಲೇಶ್ವರಂ ಬಿಟಿಎಂ ಲೇಔಟ್ ನಲ್ಲಿ ಗಿಡಗಳನ್ನ ಹಂಚುತ್ತಿದ್ದಾರೆ.