Don't Miss!
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಚ್ಚ ಸುದೀಪ್ ಬ್ಯಾಟಿಂಗ್, ಸೆಂಚುರಿ ಸ್ಟಾರ್ ಶಿವಣ್ಣ ಬೌಲಿಂಗ್
Recommended Video
ಐಪಿಎಲ್ ಅಬ್ಬರದ ನಡುವೆ ಸ್ಯಾಂಡಲ್ ವುಡ್ ನಲ್ಲಿ ಕೆಸಿಸಿ (ಕನ್ನಡ ಚಲನಚಿತ್ರ ಕಪ್) ಟೂರ್ನಮೆಂಟ್ ಆರಂಭವಾಗುತ್ತಿದೆ. ಏಪ್ರಿಲ್ 7 ಮತ್ತು 8 ರಂದು ಸ್ಯಾಂಡಲ್ ವುಡ್ ತಾರೆಯರೆಲ್ಲ ಕ್ರಿಕೆಟ್ ಮೈದಾನಕ್ಕೀಳಿಯಲಿದ್ದಾರೆ. ಹೀಗಾಗಿ, ಕಳೆದ ಒಂದು ವಾರದಿಂದ ಸತತವಾಗಿ ಅಭ್ಯಾಸ ಮಾಡ್ತಿದ್ದಾರೆ.
ಸುದೀಪ್, ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ರಕ್ಷಿತ್ ಶೆಟ್ಟಿ, ದಿಗಂತ್ ಸೇರಿದಂತೆ ಹಲವು ನಟರು ಕೆಸಿಸಿ ಆಡಲಿದ್ದು, ಎಲ್ಲರೂ ಪ್ರಾಕ್ಟೀಸ್ ಮಾಡ್ತಿದ್ದಾರೆ.
ಇಂದಿನ ಪ್ರಾಕ್ಟೀಸ್ ನಲ್ಲಿ ವಿಶೇಷವಾಗಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕಿಚ್ಚ ಸುದೀಪ್ ಗಮನ ಸೆಳೆದರು. ನೆಟ್ ಪ್ರಾಕ್ಟೀಸ್ ಮಾಡಿದ ಇಬ್ಬರು ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡಿ ಖುಷಿ ಪಟ್ಟರು. ಶಿವಣ್ಣ ಮಾಡಿದ ಬೌಲಿಂಗ್ ಗೆ ಕಿಚ್ಚ ಸುದೀಪ್ ಬ್ಯಾಟಿಂಗ್ ಮಾಡಿದ್ದು ಎಲ್ಲರಿಗೂ ಖುಷಿ ಕೊಟ್ಟಿತ್ತು.
ಸ್ಯಾಂಡಲ್ ವುಡ್ ನಲ್ಲಿ 'T-10' ಕ್ರಿಕೆಟ್ ಟೂರ್ನಿ
ಮತ್ತೊಂದೆಡೆ ಅದೇ ದಿನ ಐಪಿಎಲ್ 11ನೇ ಆವೃತ್ತಿ ಕೂಡ ಆರಂಭವಾಗುತ್ತಿದ್ದು, 'ಬೆಂಗಳೂರು ರಾಯಲ್ ಚಾಲೆಂಜರ್ಸ್' ತಂಡಕ್ಕೆ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ರಾಯಭಾರಿ ಆಗಿದ್ದಾರೆ.
ಕಿಚ್ಚ ಸುದೀಪ್ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ್ದು ಯಾಕೆ?
ಒಟ್ನಲ್ಲಿ, ಸತತ ಸಿನಿಮಾಗಳಿಂದ ಅಭಿಮಾನಿಗಳನ್ನ ರಂಜಿಸುತ್ತಿದ್ದ ಶಿವಣ್ಣ ಈಗ ಬ್ಯಾಟ್ ಹಿಡಿದು ಕ್ರೀಡಾಂಗಣದಲ್ಲಿ ಎಂಟರ್ ಟೈನ್ ಮಾಡಲಿದ್ದಾರೆ. ಇದೇ ಶನಿವಾರ ಮತ್ತು ಭಾನುವಾರ ಕೆಸಿಸಿ ಉದ್ಘಾಟನೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗುವ ಸಾಧ್ಯತೆ ಇದೆ.