Don't Miss!
- Lifestyle 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- Finance 2023 ಡಿಸೆಂಬರ್ ವೇಳೆಗೆ 160 ಲಕ್ಷ ಕೋಟಿ ರೂ. ದಾಟಿದ ಸರ್ಕಾರದ ಸಾಲ!
- Automobiles Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- News Karnataka Lok Sabha: 28 ಕ್ಷೇತ್ರಗಳ ಜಾತಿವಾರು ಅಭ್ಯರ್ಥಿಗಳು ಯಾರು? ಮಾಹಿತಿ ಇಲ್ಲಿದೆ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಿಗಂತ್-ಐಂದ್ರಿತಾ ದಂಪತಿಗೆ ವಿಶ್ ಮಾಡಿದ ಕಿಚ್ಚ ಸುದೀಪ್
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ದೂದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೇ ದಂಪತಿಗೆ ಶುಭಕೋರಿದ್ದಾರೆ. ಅಷ್ಟಕ್ಕು ಕಿಚ್ಚ ವಿಶ್ ಮಾಡಿದ್ದೇಕೆ? ದಿಗಂತ್ ಅಥವಾ ಐಂದ್ರಿತಾ ಅವರ ಹುಟ್ಟಹಬ್ಬನಾ ಅಥವಾ ಮದುವೆ ವಾರ್ಷಿಕೋತ್ಸವವೇನಾ ಎಂದು ಯೋಚಿಸುತ್ತಿದ್ದೀರಾ? ಯಾವುದು ಅಲ್ಲ ಸುದೀಪ್ ಶುಭಕೋರಿದ್ದು, ಇಬ್ಬರ ಹೊಸ ಸಿನಿಮಾಗಾಗಿ.
ಹೌದು, ದಿಗಂತ್ ಮತ್ತು ಐಂದ್ರಿತಾ ಇಬ್ಬರು ವರ್ಷಗಳ ಬಳಿಕ ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 8 ವರ್ಷಗಳ ನಂತರ ತೆರೆಮೇಲೆ ಒಂದಾಗಿರುವ ದಿಗಂತ್ ಮತ್ತು ಐಂದ್ರಿತಾಗೆ ಸುದೀಪ್ ಬೆಸ್ಟ್ ವಿಶಸ್ ಹೇಳಿದ್ದಾರೆ. ಅಂದಹಾಗೆ ದಿಗಂತ್ ದಂಪತಿ ಒಟ್ಟಿಗೆ ನಟಿಸುತ್ತಿರುವುದು 'ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ' ಚಿತ್ರದಲ್ಲಿ.
'ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ' ಎನ್ನುತ್ತಿದ್ದಾರೆ ನಟ ದಿಗಂತ್
ಈ ಸಿನಿಮಾದ ದಿಗಂತ್ ಮತ್ತು ಐಂದ್ರಿತಾ ಇಬ್ಬರು ಇರುವ ಪೋಸ್ಟರ್ ರಿಲೀಸ್ ಆಗಿದೆ. ಈ ಪೋಸ್ಟರ್ ಅನ್ನು ಐಂದ್ರಿತಾ ಶೇರ್ ಮಾಡಿ, 'ಮಲೆನಾಡಿನ ಮೋಹಕ ತಾಣದಲ್ಲಿ ಚಿತ್ರೀಕರಣ ನಡೆಯುತ್ತಿದೆ. 8 ವರ್ಷದ ಬಳಿಕ ತೆರೆ ಹಿಂದಿನ ನನ್ನ ಪ್ರೀತಿ ದಿಗಂತ್ ಜೊತೆ ಮತ್ತೆ ನಟಿಸುತ್ತಿದ್ದೀನಿ' ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಈ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ಕಿಚ್ಚ ಸುದೀಪ್, ಇಬ್ಬರು ಮತ್ತೆ ಒಟ್ಟಿಗೆ ನಟಿಸುತ್ತಿರುವುದು ಸೂಪರ್. ಒಳ್ಳೆಯದಾಗಲಿ ದಿಗಂತ್ ಮತ್ತು ಐಂದ್ರಿತಾ' ಎಂದು ಹೇಳಿದ್ದಾರೆ.
ಕ್ಷಮಿಸಿ ನನ್ನ ಖಾತೆಯಲ್ಲಿ ಹಣವಿಲ್ಲ, ಚಿತ್ರದಲ್ಲಿ ದಿಗಂತ್ ಅಡಿಕೆ ಬೆಳೆಗಾರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಬಾರಿಗೆ ದಿಗಂತ್ ಇಂಥ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಮಲೆನಾಡಿನ ಸುಂದರ ಪ್ರದೇಶಗಳಲ್ಲಿ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಸಾಗರದ ಪುಟ್ಟ ಹಳ್ಳಿಯಲ್ಲಿ ನಡೆಯುವ ಕಥೆ ಇದಾಗಿದ್ದು, ಈಗಾಗಲೇ ಬಹುತೇಕ ಚಿತ್ರೀಕರಣ ಮಾಡಿ ಮುಗಿಸಿದ್ದಾರೆ.
ಚಿತ್ರದಲ್ಲಿ ಮತ್ತೋರ್ವ ನಾಯಕಿಯಾಗಿ ರಂಜಿನಿ ರಾಘವನ್ ನಟಿಸುತ್ತಿದ್ದಾರೆ. ಚಿತ್ರಕ್ಕೆ ವಿನಾಯಕ ಕೊಡ್ಸರ ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ವಿನಾಯಕ ಎರಡು ಕಿರುಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ.
Recommended Video
ಇದೀಗ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಸದ್ಯ ಪೋಸ್ಟರ್ ಮೂಲಕ ಎಲ್ಲರ ಗಮನ ಸೆಳೆಯುತ್ತಿರುವ ಈ ಸಿನಿಮಾ ಹೇಗೆ ಮೂಡಿಬರಲಿದೆ ಎನ್ನುವುದು ಅಭಿಮಾನಿಗಳ ಕುತೂಹಲ.