Don't Miss!
- Automobiles ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- Finance Gold rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟಿವಿ9, ಸುವರ್ಣ, ಪಬ್ಲಿಕ್ ಟಿವಿಗೆ ಚಾಲೆಂಜ್ ಹಾಕಿದ ಸುದೀಪ್
ಒಂದ್ಕಡೆ ಕೇಂದ್ರ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಆರಂಭಿಸಿರುವ 'ಹಮ್ ಫಿಟ್ ತೋ ಇಂಡಿಯಾ ಫಿಟ್' ಚಾಲೆಂಜ್...ಮತ್ತೊಂದೆಡೆ ಕಿಚ್ಚ ಸುದೀಪ್ ಚಾಲನೆ ಕೊಟ್ಟಿರುವ 'ಬ್ರಿಂಗ್ ಔಟ್ ದಿ ಪೈಲ್ವಾನ್ ಇನ್ ಯು' ಚಾಲೆಂಜ್.
ಈ ಎರಡು ಚಾಲೆಂಜ್ ಗಳು ಸದ್ಯ ಸೋಶಿಯಲ್ ಮಿಡಿಯಾದಲ್ಲಿ ದೊಡ್ಡ ಸದ್ದು ಮಾಡುತ್ತಿದೆ. ಅದರಲ್ಲೂ ಸುದೀಪ್ ಆರಂಭಿಸಿರುವ ಚಾಲೆಂಜ್ ಸ್ಯಾಂಡಲ್ ವುಡ್ ನಲ್ಲಿ ಹೆಚ್ಚು ಸುದ್ದಿಯಾಗಿದೆ.
ಚಿತ್ರರಂಗದವರಿಗೆ ಹೊಸ ಸವಾಲು ಹಾಕಿದ ಕಿಚ್ಚ ಸುದೀಪ್
ಇಷ್ಟು ದಿನ ಕನ್ನಡದ ಸ್ಟಾರ್ ನಟರಿಗೆ ಚಾಲೆಂಜ್ ಹಾಕಿದ್ದ ಸುದೀಪ್ ಇದೀಗ, ಕನ್ನಡ ಸುದ್ದಿ ವಾಹಿನಿಗಳಿಗೆ ಚಾಲೆಂಜ್ ಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಸವಾಲೆಸಿದಿರುವ ಸುದೀಪ್ ''ಟಿವಿ9, ಸುವರ್ಣ, ಪಬ್ಲಿಕ್ ಟಿವಿಗೆ 'ಬ್ರಿಂಗ್ ಔಟ್ ದಿ ಪೈಲ್ವಾನ್ ಇನ್ ಯು' ಚಾಲೆಂಜ್ ನೀಡುತ್ತಿದ್ದೇನೆ. ನೋಡೋಣ ಹೇಗೆ ಸ್ವೀಕರಿಸುತ್ತಾರೋ'' ಎಂದಿದ್ದಾರೆ.
ಇದು ಅಭಿಮಾನಿಗಳಿಗೆ ಮತ್ತಷ್ಟು ಖುಷಿ ಕೊಟ್ಟಿದೆ. ಈಗ ಸುದೀಪ್ ಅವರ ಎಸೆದಿರುವ ಚೆಂಡು ಕನ್ನಡ ನ್ಯೂಸ್ ಚಾನಲ್ ಗಳ ಅಂಗಳದಲ್ಲಿದೆ. ಅದನ್ನ ಹೇಗೆ ತಗೋಳ್ತಾರೆ, ಅಥವಾ ಅಸಡ್ಡೆ ತೋರ್ತಾರಾ ಗೊತ್ತಿಲ್ಲ. ಒಟ್ನಲ್ಲಿ ಇದಂತೂ ತುಂಬಾ ಇಂಟ್ರೆಸ್ಟಿಂಗ್ ಆಗಿದೆ.
ರಿಯಲ್ ಸ್ಟಾರ್ ಉಪೇಂದ್ರಗೆ ಸುದೀಪ್ ಹಾಕಿದರು ಚಾಲೆಂಜ್
ಸದ್ಯ, ಸುದೀಪ್ 'ಕೋಟಿಗೊಬ್ಬ-3' ಚಿತ್ರದ ಚಿತ್ರೀಕರಣ ಕಾರಣದಿಂದ ಸರ್ಬಿಯಾದ ಬೆಲ್ ಗ್ರೇಡ್ ಗೆ ತೆರೆಳಿದ್ದಾರೆ. ಸುಮಾರು 25 ದಿನಗಳ ಕಾಲ ಅಲ್ಲೆ ಉಳಿಯಲಿದ್ದು, ನಂತರ ಭಾರತಕ್ಕೆ ವಾಪಸ್ ಆಗಲಿದ್ದಾರೆ.
Throwing the #BringOutThePailwaanInYou challenge to @Tv9kannadanews @publictvnews @suvarnanewstv ...
— Kichcha Sudeepa (@KicchaSudeep) June 15, 2018
Hoping to see few responses...
🤗who wil do better ???
ಈಗಷ್ಟೇ 'ಅಂಬಿ ನಿಂಗೆ ವಯಸ್ಸಾಯ್ತೋ' ಹಾಗೂ 'ಪೈಲ್ವಾನ್' ಚಿತ್ರಗಳ ಚಿತ್ರೀಕರಣ ಮುಗಿಸಿರುವ ಸುದೀಪ್ ಹೊಸ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಕಾರ್ತಿಕ್ ಈ ಚಿತ್ರವನ್ನ ನಿರ್ದೇಶನ ಮಾಡುತ್ತಿದ್ದು, ಸೂರಪ್ಪ ಬಾಬು ನಿರ್ಮಾಣ ಮಾಡುತ್ತಿದ್ದಾರೆ.