Don't Miss!
- News Big Offer for Bengaluru Voters: ಮತದಾರರಿಗೆ ಗುಡ್ ನ್ಯೂಸ್.. ರಿಯಾಯಿತಿ ದರದಲ್ಲಿ ತಿಂಡಿ ವ್ಯವಸ್ಥೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೃದ್ಧ ದಂಪತಿ ಬಾಳಿಗೆ ಬೆಳಕಾದ ಸುದೀಪ್ ಚಾರಿಟೇಬಲ್ ಟ್ರಸ್ಟ್
ನಟ ಕಿಚ್ಚ ಸುದೀಪ್ ಅವರ ಸಾಮಾಜಿಕ ಕಳಕಳಿ ಹಿಂದೆಂದಿಗಿಂತಲೂ ಈಗ ಹೆಚ್ಚಾಗಿದ್ದಂತೆ ತೋರುತ್ತಿದೆ. ಸಮಾಜ ಸೇವೆಯಲ್ಲಿ ಸಮಕಾಲೀನ ನಟರಿಗಿಂತ ತಾವೂ ಸಹ ಕಡಿಮೆ ಇಲ್ಲ ಎಂಬುದನ್ನು ಸುದೀಪ್ ಈಗಾಗಲೇ ತೋರಿಸಿದ್ದಾರೆ.
Recommended Video
ಲಾಕ್ಡೌನ್ ಸಮಯದಲ್ಲಿ ಸಂಕಷ್ಟದಲ್ಲಿರುವವರಿಗೆ ಸ್ಯಾಂಡಲ್ವುಡ್ನ ಹಲವರು ನೆರವಿನ ಹಸ್ತ ಚಾಚಿದರು. ಅದರಲ್ಲಿ ಸುದೀಪ್ ಸಹ ಒಬ್ಬರು.
ಸುದೀಪ್ ಅವರು ಬೆನ್ನೆಲುಬಾಗಿ ನಿಂತಿರುವ ಅವರದ್ದೇ ಹೆಸರಿನ ಕೆಲವು ಟ್ರಸ್ಟ್ಗಳು, ಅಭಿಮಾನಿ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಸಂಘಗಳ ಮೂಲಕ ತೆರೆಮರೆಯಲ್ಲಿ ನಿಂತು ಸಮಾಜ ಸೇವೆ ಮಾಡಿಸುತ್ತಾರೆ ಸುದೀಪ್.
ವಿದ್ಯುತ್ ಸಂಪರ್ಕ ಇಲ್ಲದೆ ಕತ್ತಲಲ್ಲಿ ಬದುಕು
ತುಮಕೂರು ಜಿಲ್ಲೆ, ಮಧುಗಿರಿ ತಾಲ್ಲೂಕಿನ ಸಿದ್ಧಾಪುರ ಗ್ರಾಮದಲ್ಲಿ ವೃದ್ಧ ದಂಪತಿ ಮೂರು ವರ್ಷಗಳ ಹಿಂದೆ ಮನೆ ಕಟ್ಟಿಸಿಕೊಂಡಿದ್ದರು. ಆದರೆ ಅದಕ್ಕೆ ವಿದ್ಯುತ್ ಸಂಪರ್ಕ ಮಾಡಿಕೊಳ್ಳಲಾಗದೆ ಕತ್ತಲಲ್ಲಿಯೇ ಜೀವನ ಸಾಗಿಸುತ್ತಿತ್ತು.
ವಿಕಲಾಂಗ ಮೊಮ್ಮಗನೊಂದಿಗೆ ವೃದ್ಧ ದಂಪತಿ ವಾಸ
ಈ ವಿಷಯ ಸುದೀಪ್ ಚಾರಿಟೇಬಲ್ ಟ್ರಸ್ಟ್ ಗಮನಕ್ಕೆ ಬಂದಿದ್ದು, ವೃದ್ಧ ದಂಪತಿಗಳಾದ ರಾಧಮ್ಮ ಹಾಗೂ ನಾಗರಾಜು ಅವರ ಮನೆಗೆ ಭೇಟಿ ನೀಡಿ, ಅವರಿಂದ ಸಮಸ್ಯೆಯನ್ನು ಆಲಿಸಿ, ವಿಕಲಾಂಗ ಮೊಮ್ಮಗನೊಂದಿಗೆ ವಾಸಿಸುತ್ತಿರುವ ಅವರಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿತು.
ಮೊದಲು ಮಾನವನಾಗು ಘೋಷವಾಕ್ಯ
'ಮೊದಲು ಮಾನವನಾಗು' ಘೋಷವಾಕ್ಯದಡಿ ಕಾರ್ಯನಿರ್ವಹಿಸುತ್ತಿರುವ ಈ ಚಾರಿಟೇಬಲ್ ಟ್ರಸ್ಟ್, ವೃದ್ಧ ದಂಪತಿಯ ಮನೆಗೆ ತಾವೇ ತಮ್ಮ ಖರ್ಚಿನಲ್ಲಿ ವಿದ್ಯುತ್ ಸಂಪರ್ಕ ಹಾಕಿಸಿಕೊಟ್ಟಿದ್ದಾರೆ. ವಿದ್ಯುತ್ ಸಂಪರ್ಕಕ್ಕೆ ಬೇಕಾದ ಅನುಮತಿಗಳನ್ನೂ ಸಹ ಅವರೇ ತೆಗೆದುಕೊಂಡಿದ್ದಾರೆ.
ಬಡ ವಿದ್ಯಾರ್ಥಿನಿಯ ಶಿಕ್ಷಣದ ಜವಾಬ್ದಾರಿ
ಕೆಲವು ದಿನಗಳ ಹಿಂದೆ ಇದೇ ಸುದೀಪ್ ಚಾರಿಟೇಬಲ್ ಟ್ರಸ್ಟ್, ಬಡ ಪ್ರತಿಭಾವಂತ ವಿದ್ಯಾರ್ಥಿನಿಯ ಫೀಸು ತುಂಬಿ ಓದಲು ಸಹಾಯ ಮಾಡಿತ್ತು. ಆ ಹುಡುಗಿಯ ಶಿಕ್ಷಣದ ಜವಾಬ್ದಾರಿಯನ್ನು ಸುದೀಪ್ ವಹಿಸಿಕೊಂಡಿದ್ದರು. ಇಂಥಹಾ ಹಲವು ಕಾರ್ಯಗಳನ್ನು ಸುದೀಪ್ ಮತ್ತು ಅವರ ಚಾರಿಟೇಬಲ್ ಟ್ರಸ್ಟ್ ಮಾಡುತ್ತಿದೆ.