Don't Miss!
- Finance Zero Shadow Day: ಬೆಂಗಳೂರಿನಲ್ಲಿ ಇಂದು ಪ್ರಕೃತಿಯ ಅಚ್ಚರಿ
- News ರಾಜ್ಯದ ವಿವಿಧೆಡೆ ವರುಣದೇವನ ಆರ್ಭಟ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು ?
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಚ್ಚ ಸುದೀಪ್ ನಿರ್ದೇಶನ ಮಾಡುತ್ತಿರುವುದು ರಿಮೇಕ್ ಚಿತ್ರವಲ್ಲ ಸ್ವಮೇಕ್
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತೆ ನಿರ್ದೇಶಕನಕ್ಕೆ ಮರಳುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಸುದೀಪ್ ನಿರ್ದೇಶನದ ಸುದ್ದಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಸುದೀಪ್ ಒಬ್ಬ ನಟ ಮಾತ್ರವಲ್ಲ. ಉತ್ತಮ ನಿರ್ದೇಶಕ ಕೂಡ. ಈಗಾಗಲೆ ಸಾಕಷ್ಟು ಸಿನಿಮಾಗಳನ್ನು ನಿರ್ದೇಶನ ಮಾಡಿ ಉತ್ತಮ ನಿರ್ದೇಶಕ ಅನ್ನೋದನ್ನು ಪ್ರೂವ್ ಮಾಡಿದ್ದಾರೆ.
'ಮೈ ಆಟೋಗ್ರಾಫ್', '#73 ಶಾಂತಿನಿವಾಸ', 'ವೀರ ಮದಕರಿ', 'ಜಸ್ಟ್ ಮಾತ್ ಮಾತಲ್ಲಿ', 'ಕೆಂಪೇಗೌಡ' ಮತ್ತು 'ಮಾಣಿಕ್ಯ' ಚಿತ್ರಗಳು ಕಿಚ್ಚನ ಸಾರಥ್ಯದಲ್ಲಿ ಮೂಡಿಬಂದ ಸಿನಿಮಾಗಳು. ಈಗ ಮತ್ತೆ ಸುದೀಪ್ ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಈ ಬಾರಿಯೂ ಸುದೀಪ್ ರಿಮೇಕ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ, ತೆಲುಗಿನ 'ಭರತ್ ಅನೇ ನೇನು' ಚಿತ್ರವನ್ನು ಕನ್ನಡಕ್ಕೆ ತರಲಿದ್ದಾರೆ ಎನ್ನುವ ಮಾತುಗಳು ಸದ್ದು ಮಾಡುತ್ತಿತ್ತು.
ಕರ್ನಾಟಕದ ಅತೀ ಹೆಚ್ಚು ಚಿತ್ರಮಂದಿರಗಳಲ್ಲಿ 'ದಬಾಂಗ್-3' ರಿಲೀಸ್
ಆದರೀಗ ಇದಕ್ಕೆಲ್ಲ ಸುದೀಪ್ ಅವರೆ ಉತ್ತರಿಸಿದ್ದಾರೆ. ಈ ಬಾರಿ ನಿರ್ದೇಶನ ಮಾಡುತ್ತಿರುವುದು ರಿಮೇಕ್ ಚಿತ್ರಕ್ಕಲ್ಲ ಸ್ವಮೇಕ್ ಚಿತ್ರಕ್ಕೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಸುದೀಪ್, "ಸದ್ಯ ಹರಿದಾಡುತ್ತಿರುವ ಸುದ್ದಿಯ ಬಗ್ಗೆ ನಾನು ಸ್ಪಷ್ಟಪಡಿಸುತ್ತೇನೆ. ಇದು ಸ್ವಮೇಕ್ ಸಿನಿಮಾ. ಈ ಬಗ್ಗೆ ನಾನು ಮತ್ತು ನನ್ನ ತಂಡ ಉತ್ಸುಕರಾಗಿದ್ದೇವೆ. ಅತಿ ಶೀಘ್ರದಲ್ಲೆ ಸಿನಿಮಾ ಸೆಟ್ಟೇರಲಿದೆ" ಎಂದು ಹೇಳುವ ಮೂಲಕ ರಿಮೇಕ್ ಸಿನಿಮಾ ಎನ್ನುವ ಸುದ್ದಿಗಳಿಗೆ ಬ್ರೇಕ್ ಹಾಕಿದ್ದಾರೆ.
ಸ್ವಮೇಕ್ ಸಿನಿಮಾ ಅಂದಮೇಲೆ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮತ್ತಷ್ಟು ಹೆಚ್ಚಾಗಿದೆ. ಸುದೀಪ್ ಸದ್ಯ 'ಕೋಟಿಗೊಬ್ಬ-3' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಬಾಲಿವುಡ್ ನ 'ದಬಾಂಗ್-3' ಸಿನಿಮಾ ಕೂಡ ರಿಲೀಸ್ ಗೆ ರೆಡಿಯಾಗುತ್ತಿದೆ. ಇದರ ಜೊತೆಗೆ ಮುಂದಿನ ತಿಂಗಳಿಂದ ಸುದೀಪ್, ಅನೂಪ್ ಬಂಡಾರಿ ನಿರ್ದೇಶನದ 'ಪ್ಯಾಂಟಮ್' ಚಿತ್ರದಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಎಲ್ಲಾ ಕಮಿಟ್ ಮೆಂಟ್ ಮುಗಿದ ಬಳಿಕ ಸುದೀಪ್ ನಿರ್ದೇಶಕರಾಗಿ ಕಾಣಿಸಿಕೊಳ್ಳಲಿದ್ದಾರೆ.