Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಕ್ರಾಂತ್ ರೋಣ ಡಬ್ಬಿಂಗ್ ಮುಗಿಸಿ ಹಾಡಿನ ಚಿತ್ರೀಕರಣಕ್ಕೆ ಸಜ್ಜಾದ ಕಿಚ್ಚ ಸುದೀಪ್
ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷೆಯ ವಿಕ್ರಾಂತ್ ರೋಣ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಕೊಂಡಿದೆ. ಇದೀಗ ಸಿನಿಮಾದ ಡಬ್ಬಿಂಗ್ ಕೆಲಸ ನಡೆಯುತ್ತಿದ್ದು, ಪ್ರಮುಖ ಕಲಾವಿದರು ತಮ್ಮ ಪಾತ್ರಗಳ ಧ್ವನಿಮುದ್ರಿಕೆ ಮಾಡುತ್ತಿದ್ದಾರೆ. ಎರಡು ದಿನಗಳ ಹಿಂದಷ್ಟೆ ಡಬ್ಬಿಂಗ್ ಶುರು ಮಾಡಿದ್ದ ಕಿಚ್ಚ ಸುದೀಪ್ ಆಗಲೇ ತಮ್ಮ ಕೆಲಸ ಮುಗಿಸಿದ್ದಾರೆ.
ವಿಕ್ರಾಂತ್ ರೋಣ ಚಿತ್ರದ ಡಬ್ಬಿಂಗ್ ಕೆಲಸ ಮುಗಿದಿರುವ ಬಗ್ಗೆ ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಡಬ್ಬಿಂಗ್ ಮುಗಿಸಿ ಹಾಡಿನ ಚಿತ್ರೀಕರಣಕ್ಕೆ ಹೊರಬೇಕು ಎಂದು ಕಿಚ್ಚ ಟ್ವೀಟ್ ಮಾಡಿದ್ದಾರೆ. ಈಗಾಗಲೇ ಟಾಕಿ ಭಾಗ ಮುಗಿಸಿರುವ ವಿಕ್ರಾಂತ್ ರೋಣ ಬಹುನಿರೀಕ್ಷೆಯ ಹಾಡಿನ ಚಿತ್ರೀಕರಣ ಬಾಕಿಯುಳಿಸಿಕೊಂಡಿದೆ. ಇದೀಗ ಹಾಡಿನ ಚಿತ್ರೀಕರಣಕ್ಕೆ ಸಜ್ಜಾಗುತ್ತಿದ್ದಾರೆ ಕಿಚ್ಚ ಅಂಡ್ ಟೀಂ.
'ವಿಕ್ರಾಂತ್ ರೋಣ' ಡಬ್ಬಿಂಗ್ ಆರಂಭಿಸಿದ ನಟ ಕಿಚ್ಚ ಸುದೀಪ್
ಈ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್, "ವಿಕ್ರಾಂತ್ ರೋಣ ಚಿತ್ರದ ನನ್ನ ಡಬ್ಬಿಂಗ್ ಮುಕ್ತಾಯವಾಗಿದೆ. ಅದ್ಭುತವಾದ ಅನುಭವ. 3ಡಿ ವರ್ಷನ್ ನಲ್ಲಿ ಕೆಲವು ದೃಶ್ಯಗಳನ್ನು ನೋಡಿದೆ. ವಿಕ್ರಾಂತ್ ರೋಣನ ಪ್ರಪಂಚ ನೋಡಲು ಸಖತ್ ಥ್ರಿಲ್ ಆಗಿದೆ. ಈಗ ಹಾಡಿನ ಚಿತ್ರೀಕರಣಕ್ಕೆ ಎದುರು ನೋಡುತ್ತಿದ್ದೇನೆ" ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಅಂದಹಾಗೆ ವಿಕ್ರಾಂತ್ ರೋಣ ಚಿತ್ರದ ಹಾಡಿನಲ್ಲಿ ಕಿಚ್ಚನ ಜೊತೆ ಬಾಲಿವುಡ್ ಸುಂದರಿ ಜಾಕ್ವೆಲಿನ್ ಫರ್ನಾಂಡಿಸ್ ಹೆಜ್ಜೆಹಾಕುತ್ತಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಮೊದಲ ಬಾರಿಗೆ ಕನ್ನಡ ಸಿನಿಮಾದ ಹಾಡೊಂದರಲ್ಲಿ ಜಾಕ್ವೆಲಿನ್ ಕಾಣಿಸಿಕೊಳ್ಳುತ್ತಿದ್ದು ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ. ಅದ್ದೂರಿ ಸೆಟ್ ನಲ್ಲಿ ಈ ಹಾಡಿನ ಚಿತ್ರೀಕರಣ ಮಾಡಲು ಸಿನಿಮಾ ತಂಡ ಪ್ಲಾನ್ ಮಾಡಿದೆ.
Recommended Video
ಈಗಾಗಲೇ ಭಾರಿ ನಿರೀಕ್ಷೆ ಮೂಡಿಸಿರುವ ವಿಕ್ರಾಂತ್ ರೋಣ ಯಾವಾಗ ತೆೆರೆಗೆ ಬರುತ್ತೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಕೊರೊನಾ ಕಾರಣದಿಂದ ಬಿಡುಗಡೆ ದಿನಾಂಕ ಇನ್ನು ಅಧಿಕೃತವಾಗಿಲ್ಲ. ಅನೂಪ್ ಭಂಡಾರಿ ನಿರ್ದೇಶನದ ಈ ಸಿನಮಾದಲ್ಲಿ ಸುದೀಪ್ ಜೊತೆ ನಿರೂಪ್ ಭಂಡಾರಿ, ರವಿ ಶಂಕರ್, ನೀತಾ ಅಶೋಕ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.