Don't Miss!
- Sports KKR vs RR IPL 2024: ಜೋಸ್ ದಿ ಬಾಸ್ ಬಟ್ಲರ್ ಆರ್ಭಟಕ್ಕೆ ಕೆಕೆಆರ್ ಹೈರಾಣ; ರಾಯಲ್ ಆಗಿ ಗೆದ್ದ ರಾಜಸ್ಥಾನ
- Lifestyle ಬೇಸಿಗೆಯಲ್ಲಿ ಇಡ್ಲಿ, ದೋಸೆಯ ಹಿಟ್ಟು ಹುಳಿ ಬಂದರೆ ಹುಳಿ ಕಡಿಮೆಯಾಗಲು ಏನು ಮಾಡಬೇಕು?
- News Dwarakish: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ದ್ವಾರಕೀಶ್ ಪಡೆದಿದ್ದ ಮತಗಳೆಷ್ಟು?
- Automobiles ಪೆಟ್ರೋಲ್ ಎಂಜಿನ್ಗಳಲ್ಲಿ ಮಾತ್ರ ಬರಲಿದೆ ರೆನಾಲ್ಟ್ನ ಬ್ರಹ್ಮಾಸ್ತ್ರ ಡಸ್ಟರ್
- Finance ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಷೇರು ಪೇಟೆಯಲ್ಲಿ ಭಾರಿ ನಷ್ಟ
- Technology YouTube: ಯೂಟ್ಯೂಬ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್! ಆಡ್ ಬ್ಲಾಕರ್ ವಿರುದ್ಧ ಸಮರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ನಟ ಸುದೀಪ್ ಸಂತಾಪ
ಖ್ಯಾತ ರಂಗಭೂಮಿ ನಟ ಮಾಸ್ಟರ್ ಹಿರಣ್ಣಯ್ಯ ನಿಧನ ಹೊಂದಿದ್ದಾರೆ. ನಾಟಕ ಜಗತ್ತಿನ ದೈತ್ಯ ನಟನನ್ನು ಕಳೆದುಕೊಂಡು ಎಲ್ಲರೂ ನೋವಿನಲ್ಲಿ ಇದ್ದಾರೆ. ರಂಗಭೂಮಿ, ಸಿನಿಮಾ, ಸಾಹಿತ್ಯ ಸೇರಿದಂತೆ ಅನೇಕ ಕ್ಷೇತ್ರದ ಗಣ್ಯರು ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ.
ಬದುಕಿಗೆ ಬೇಕಷ್ಟು ಲಂಚ ತಿಂದ್ರೆ ತಪ್ಪೇನಿಲ್ಲ : ಮಾಸ್ಟರ್ ಹಿರಣ್ಣಯ್ಯ ಸಂದರ್ಶನ
ನಟ ಸುದೀಪ್ ಕೂಡ ಮಾಸ್ಟರ್ ಹಿರಣ್ಣಯ್ಯರನ್ನು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ನೆನೆದಿದ್ದಾರೆ. 'ನಂ 73 ಶಾಂತಿ ನಿವಾಸ' ಸಿನಿಮಾದಲ್ಲಿ ಮಾಸ್ಟರ್ ಹಿರಣ್ಣಯ್ಯರವರ ಜೊತೆಗೆ ಕೆಲಸ ಮಾಡುವ ಅವಕಾಶವನ್ನು ಸುದೀಪ್ ಪಡೆದಿದ್ದರು. ಈ ಸಿನಿಮಾದಲ್ಲಿ ತಾತನ ಪಾತ್ರದಲ್ಲಿ ಹಿರಣ್ಣಯ್ಯ ನಟಿಸಿದ್ದರು.
ಈ ಚಿತ್ರದ ನಿರ್ದೇಶನ ಮಾಡಿದ್ದ ಸುದೀಪ್, ಸಿನಿಮಾದ ತಾತನ ಪಾತ್ರಕ್ಕೆ ಮಾಸ್ಟರ್ ಹಿರಣ್ಣಯ್ಯರವರೇ ಬೇಕು ಎಂದು ಆ ಪಾತ್ರವನ್ನು ಅವರ ಕೈ ನಲ್ಲಿ ಮಾಡಿದ್ದರು. ಇನ್ನು ಮಾಸ್ಟರ್ ಹಿರಣ್ಣಯ್ಯ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್ ಅವರ ಜೊತೆಗೆ ಕೆಲಸ ಮಾಡಿದ ದಿನಗಳನ್ನು ಮರೆಯುವುದಿಲ್ಲ ಎಂದಿದ್ದಾರೆ.
ಹಿರಿಯ ರಂಗಕರ್ಮಿ ಮಾಸ್ಟರ್ ಹಿರಯಣ್ಣಯ್ಯ ಇನ್ನಿಲ್ಲ
''ಸರ್ ನೀವು ಯಾವಾಗಲೂ ನಮ್ಮ ಹೃದಯಕ್ಕೆ ಹತ್ತಿರ ಆಗಿರುತ್ತೀರಿ. ನಂ 73 ಶಾಂತಿ ನಿವಾಸ ಸಿನಿಮಾದಲ್ಲಿ ನಾನು ಅವರ ಜೊತೆಗೆ ಕೆಲಸ ಮಾಡಿದ ಪ್ರತಿ ದೃಶ್ಯ ಕೂಡ ನೆನಪಿನಲ್ಲಿ ಉಳಿಯುವಂತದ್ದು. ಇಂತಹ ದೊಡ್ಡ ಪ್ರತಿಭೆಯ ಬಗ್ಗೆ ಏನೇ ಹೇಳಿದರೂ ಅದು ಚಿಕ್ಕದು. ಕಲೆ ಜಗತ್ತಿಗೆ ಅವರ ಕೊಡುಗೆ ಅಪಾರ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ''
#SirMasterHiranaaiah Wil always be very close to my heart. Every frame I worked wth him during #73Shantinivasa is fresh n memorable. Anythn said Wil be very Lil about this bundle of talent who's contribution to field of art knew no boundaries. Rest in peace Sir.
— Kichcha Sudeepa (@KicchaSudeep) May 2, 2019
ಹಿರಿಯ ರಂಗಕರ್ಮಿ, ಮಾಸ್ಟರ್ ಹಿರಿಯಣ್ಣಯ್ಯ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು 10 ಗಂಟೆ ಸುಮಾರಿಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬನಶಂಕರಿಯ ಅವರ ನಿವಾಸದಲ್ಲಿ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿದೆ