Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ನಟ ಸುದೀಪ್ ಸಂತಾಪ
ಖ್ಯಾತ ರಂಗಭೂಮಿ ನಟ ಮಾಸ್ಟರ್ ಹಿರಣ್ಣಯ್ಯ ನಿಧನ ಹೊಂದಿದ್ದಾರೆ. ನಾಟಕ ಜಗತ್ತಿನ ದೈತ್ಯ ನಟನನ್ನು ಕಳೆದುಕೊಂಡು ಎಲ್ಲರೂ ನೋವಿನಲ್ಲಿ ಇದ್ದಾರೆ. ರಂಗಭೂಮಿ, ಸಿನಿಮಾ, ಸಾಹಿತ್ಯ ಸೇರಿದಂತೆ ಅನೇಕ ಕ್ಷೇತ್ರದ ಗಣ್ಯರು ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ.
ಬದುಕಿಗೆ ಬೇಕಷ್ಟು ಲಂಚ ತಿಂದ್ರೆ ತಪ್ಪೇನಿಲ್ಲ : ಮಾಸ್ಟರ್ ಹಿರಣ್ಣಯ್ಯ ಸಂದರ್ಶನ
ನಟ ಸುದೀಪ್ ಕೂಡ ಮಾಸ್ಟರ್ ಹಿರಣ್ಣಯ್ಯರನ್ನು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ನೆನೆದಿದ್ದಾರೆ. 'ನಂ 73 ಶಾಂತಿ ನಿವಾಸ' ಸಿನಿಮಾದಲ್ಲಿ ಮಾಸ್ಟರ್ ಹಿರಣ್ಣಯ್ಯರವರ ಜೊತೆಗೆ ಕೆಲಸ ಮಾಡುವ ಅವಕಾಶವನ್ನು ಸುದೀಪ್ ಪಡೆದಿದ್ದರು. ಈ ಸಿನಿಮಾದಲ್ಲಿ ತಾತನ ಪಾತ್ರದಲ್ಲಿ ಹಿರಣ್ಣಯ್ಯ ನಟಿಸಿದ್ದರು.
ಈ ಚಿತ್ರದ ನಿರ್ದೇಶನ ಮಾಡಿದ್ದ ಸುದೀಪ್, ಸಿನಿಮಾದ ತಾತನ ಪಾತ್ರಕ್ಕೆ ಮಾಸ್ಟರ್ ಹಿರಣ್ಣಯ್ಯರವರೇ ಬೇಕು ಎಂದು ಆ ಪಾತ್ರವನ್ನು ಅವರ ಕೈ ನಲ್ಲಿ ಮಾಡಿದ್ದರು. ಇನ್ನು ಮಾಸ್ಟರ್ ಹಿರಣ್ಣಯ್ಯ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್ ಅವರ ಜೊತೆಗೆ ಕೆಲಸ ಮಾಡಿದ ದಿನಗಳನ್ನು ಮರೆಯುವುದಿಲ್ಲ ಎಂದಿದ್ದಾರೆ.
ಹಿರಿಯ ರಂಗಕರ್ಮಿ ಮಾಸ್ಟರ್ ಹಿರಯಣ್ಣಯ್ಯ ಇನ್ನಿಲ್ಲ
''ಸರ್ ನೀವು ಯಾವಾಗಲೂ ನಮ್ಮ ಹೃದಯಕ್ಕೆ ಹತ್ತಿರ ಆಗಿರುತ್ತೀರಿ. ನಂ 73 ಶಾಂತಿ ನಿವಾಸ ಸಿನಿಮಾದಲ್ಲಿ ನಾನು ಅವರ ಜೊತೆಗೆ ಕೆಲಸ ಮಾಡಿದ ಪ್ರತಿ ದೃಶ್ಯ ಕೂಡ ನೆನಪಿನಲ್ಲಿ ಉಳಿಯುವಂತದ್ದು. ಇಂತಹ ದೊಡ್ಡ ಪ್ರತಿಭೆಯ ಬಗ್ಗೆ ಏನೇ ಹೇಳಿದರೂ ಅದು ಚಿಕ್ಕದು. ಕಲೆ ಜಗತ್ತಿಗೆ ಅವರ ಕೊಡುಗೆ ಅಪಾರ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ''
#SirMasterHiranaaiah Wil always be very close to my heart. Every frame I worked wth him during #73Shantinivasa is fresh n memorable. Anythn said Wil be very Lil about this bundle of talent who's contribution to field of art knew no boundaries. Rest in peace Sir.
— Kichcha Sudeepa (@KicchaSudeep) May 2, 2019
ಹಿರಿಯ ರಂಗಕರ್ಮಿ, ಮಾಸ್ಟರ್ ಹಿರಿಯಣ್ಣಯ್ಯ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು 10 ಗಂಟೆ ಸುಮಾರಿಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬನಶಂಕರಿಯ ಅವರ ನಿವಾಸದಲ್ಲಿ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿದೆ