Don't Miss!
- News ‘ದೇಶ ಸುರಕ್ಷಿತವಾಗಿರಲು ನರೇಂದ್ರ ಮೋದಿ ಅವರೇ ಪ್ರಧಾನಿ ಆಗಬೇಕು!’
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಕಷ್ಟದಲ್ಲಿರುವ ಶಿಕ್ಷಕರ ಸಹಾಯಕ್ಕೆ ಮುಂದಾದ ಕಿಚ್ಚ ಸುದೀಪ್
ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಕಡೆಯಿಂದ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಲಾಗುತ್ತಿದೆ. ಕಿಚ್ಚನ ಕೈ ತುತ್ತು ಅಭಿಯಾನದಡಿ ಹಸಿದವರಿಗೆ ಊಟ, ಆರ್ಥಿಕವಾಗಿ ಕಷ್ಟದಲ್ಲಿರುವವರಿಗೆ ಧನ ಸಹಾಯ ಹೀಗೆ ಹಲವು ರೀತಿಯಲ್ಲಿ ಸುದೀಪ್ ಅಭಯಹಸ್ತ ಚಾಚಿದ್ದಾರೆ.
Recommended Video
ಕನ್ನಡ ಇಂಡಸ್ಟ್ರಿಯ ಹಿರಿಯ ಕಲಾವಿದರ ಯೋಗಕ್ಷೇಮ ವಿಚಾರಿಸಿದ್ದರು. ಒಂದಿಷ್ಟು ಜನ ಹಿರಿಯ ಕಲಾವಿದರನ್ನು ಪಟ್ಟಿ ಮಾಡಿ, ಅವರ ಮನೆಗೆ ಖುದ್ದು ತಮ್ಮ ಆಪ್ತರನ್ನು ಕಳುಹಿಸಿ ವಿಶೇಷವಾದ ಗಿಫ್ಟ್ವೊಂದನ್ನು ಕೊಟ್ಟು ಆರೋಗ್ಯ ವಿಚಾರಿಸಿದ್ದರು.
ಹಿರಿಯ ಕಲಾವಿದರ ಸಹಾಯಕ್ಕೆ ನಿಂತ ಕಿಚ್ಚ: ಯೋಗಕ್ಷೇಮ ವಿಚಾರಿಸಲು ತಂಡ ರಚಿಸಿದ ಸುದೀಪ್
ಸುದೀಪ್ ಕಾಳಜಿಗೆ ಹಿರಿಯ ಕಲಾವಿದರೆಲ್ಲರು ಭಾವುಕರಾಗಿ ಧನ್ಯವಾದ ಅರ್ಪಿಸಿದರು. ಇದೀಗ, ಸಂಕಷ್ಟದಲ್ಲಿರುವ ಶಿಕ್ಷಕರಿಗೆ ಸಹಾಯ ಮಾಡಲು ಸುದೀಪ್ ನಿರ್ಧರಿಸಿದ್ದಾರೆ.
ಈ ಬಗ್ಗೆ ಸುದೀಪ್ ಚಾರಿಟೇಬಲ್ ಸೊಸೈಟಿ ಸದಸ್ಯರು ಮಾಹಿತಿ ನೀಡಿದೆ. ಮೊದಲ ಹಂತದಲ್ಲಿ ಸುಮಾರು 50 ಜನ ಶಿಕ್ಷಕರಿಗೆ ತಲಾ 2 ಸಾವಿರ ರೂಪಾಯಿ ನೀಡಲು ಸುದೀಪ್ ತೀರ್ಮಾನಿಸಿರುವ ವಿಚಾರ ಪ್ರಕಟಿಸಲಾಗಿದೆ.
ನಿಜವಾಗಲೂ ಕಷ್ಟದಲ್ಲಿರುವವರು, ನೆರವು ಬೇಕು ಎಂದುಕೊಂಡವರು ಸುದೀಪ್ ಚಾರಿಟೇಬಲ್ ಸೊಸೈಟಿಯನ್ನು ಸಂಪರ್ಕಿಸಿ ಸಹಾಯ ಪಡೆಯಬಹುದು ಎಂದು ತಿಳಿಸಿದೆ. ಅದಕ್ಕಾಗಿ ಫೋನ್ ನಂಬರ್ ಸಹ ನೀಡಲಾಗಿದೆ.