Don't Miss!
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಕಷ್ಟದಲ್ಲಿರುವ ಶಿಕ್ಷಕರ ಸಹಾಯಕ್ಕೆ ಮುಂದಾದ ಕಿಚ್ಚ ಸುದೀಪ್
ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಕಡೆಯಿಂದ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಲಾಗುತ್ತಿದೆ. ಕಿಚ್ಚನ ಕೈ ತುತ್ತು ಅಭಿಯಾನದಡಿ ಹಸಿದವರಿಗೆ ಊಟ, ಆರ್ಥಿಕವಾಗಿ ಕಷ್ಟದಲ್ಲಿರುವವರಿಗೆ ಧನ ಸಹಾಯ ಹೀಗೆ ಹಲವು ರೀತಿಯಲ್ಲಿ ಸುದೀಪ್ ಅಭಯಹಸ್ತ ಚಾಚಿದ್ದಾರೆ.
Recommended Video
ಕನ್ನಡ ಇಂಡಸ್ಟ್ರಿಯ ಹಿರಿಯ ಕಲಾವಿದರ ಯೋಗಕ್ಷೇಮ ವಿಚಾರಿಸಿದ್ದರು. ಒಂದಿಷ್ಟು ಜನ ಹಿರಿಯ ಕಲಾವಿದರನ್ನು ಪಟ್ಟಿ ಮಾಡಿ, ಅವರ ಮನೆಗೆ ಖುದ್ದು ತಮ್ಮ ಆಪ್ತರನ್ನು ಕಳುಹಿಸಿ ವಿಶೇಷವಾದ ಗಿಫ್ಟ್ವೊಂದನ್ನು ಕೊಟ್ಟು ಆರೋಗ್ಯ ವಿಚಾರಿಸಿದ್ದರು.
ಹಿರಿಯ ಕಲಾವಿದರ ಸಹಾಯಕ್ಕೆ ನಿಂತ ಕಿಚ್ಚ: ಯೋಗಕ್ಷೇಮ ವಿಚಾರಿಸಲು ತಂಡ ರಚಿಸಿದ ಸುದೀಪ್
ಸುದೀಪ್ ಕಾಳಜಿಗೆ ಹಿರಿಯ ಕಲಾವಿದರೆಲ್ಲರು ಭಾವುಕರಾಗಿ ಧನ್ಯವಾದ ಅರ್ಪಿಸಿದರು. ಇದೀಗ, ಸಂಕಷ್ಟದಲ್ಲಿರುವ ಶಿಕ್ಷಕರಿಗೆ ಸಹಾಯ ಮಾಡಲು ಸುದೀಪ್ ನಿರ್ಧರಿಸಿದ್ದಾರೆ.
ಈ ಬಗ್ಗೆ ಸುದೀಪ್ ಚಾರಿಟೇಬಲ್ ಸೊಸೈಟಿ ಸದಸ್ಯರು ಮಾಹಿತಿ ನೀಡಿದೆ. ಮೊದಲ ಹಂತದಲ್ಲಿ ಸುಮಾರು 50 ಜನ ಶಿಕ್ಷಕರಿಗೆ ತಲಾ 2 ಸಾವಿರ ರೂಪಾಯಿ ನೀಡಲು ಸುದೀಪ್ ತೀರ್ಮಾನಿಸಿರುವ ವಿಚಾರ ಪ್ರಕಟಿಸಲಾಗಿದೆ.
ನಿಜವಾಗಲೂ ಕಷ್ಟದಲ್ಲಿರುವವರು, ನೆರವು ಬೇಕು ಎಂದುಕೊಂಡವರು ಸುದೀಪ್ ಚಾರಿಟೇಬಲ್ ಸೊಸೈಟಿಯನ್ನು ಸಂಪರ್ಕಿಸಿ ಸಹಾಯ ಪಡೆಯಬಹುದು ಎಂದು ತಿಳಿಸಿದೆ. ಅದಕ್ಕಾಗಿ ಫೋನ್ ನಂಬರ್ ಸಹ ನೀಡಲಾಗಿದೆ.