Don't Miss!
- Sports IPL 2024: ಸೋತು ಸುಣ್ಣವಾದರೂ ಪಾರ್ಟಿ ಮಾಡಿದ ಆರ್ಸಿಬಿ ಪ್ಲೇಯರ್ಸ್; ಕೊಹ್ಲಿ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್
- News ನೇಹಾ ಹತ್ಯೆ: ಸಾವಿನ ಮನೆಯಲ್ಲಿ ರಾಜಕಾರಣ ಸರಿಯಲ್ಲ, 90 ದಿನದಲ್ಲಿ ನ್ಯಾಯ ಸಿಗಲಿದೆ: ಸುರ್ಜೇವಾಲ
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸುದೀಪ್ ಸರ್ ಈ ತಂಗಿ ಜೀವ ಉಳಿಸಿ': ಬದುಕಿಗಾಗಿ ಚೈತ್ರಾ ಕೂಗು
ಚೈತ್ರಾ ಎಂಬ 23 ವರ್ಷದ ಯುವತಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಗರ್ಭೀಣಿ ಆಗಿದ್ದಾಗ ಈಕೆಯ ಸಣ್ಣ ಕರುಳನ್ನ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಈಗ ಅದು ಪ್ರಾಣಕ್ಕೆ ಅಪಾಯ ತಂದಿದೆ. ಹೀಗಾಗಿ, ಶಸ್ತ್ರ ಚಿಕಿತ್ಸೆ ಮಾಡಬೇಕಾಗಿದೆ. ಈ ಆಪರೇಷನ್ ಗೆ ಬರೋಬ್ಬರಿ 34 ಲಕ್ಷ ಹಣ ಬೇಕಾಗಿದೆ.
ಈಗಾಗಲೇ ಕೆಲವು ಸ್ನೇಹಿತರು, ಆಪ್ತರು ಸೇರಿದಂತೆ ಹಲವರು ಅನೇಕರು ಸಹಾಯ ಮಾಡುತ್ತಿದ್ದಾರೆ. ಇವರ ಖಾತೆಗೆ ಹಣ ಜಮಾಯಿಸುತ್ತಿದ್ದಾರೆ. ಈ ವಿವರವನ್ನ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ಅವರು ತಮ್ಮ ಫೇಸ್ ಬುಕ್ ನಲ್ಲಿ ನೀಡುತ್ತಿದ್ದಾರೆ.
ಚೈತ್ರಾ ಅವರ ಸ್ಥಿತಿ ತುಂಬ ಗಂಭೀರವಾಗಿದೆ. ಮಾತನಾಡಲು ಕಷ್ಟವಾಗುತ್ತಿದೆ. ಹೀಗಿರುವಾಗ, ತನ್ನ ಜೀವವನ್ನು ಉಳಿಸುವಂತೆ ನಟ ಸುದೀಪ್ ಅವರಿಗೆ ಸಹಾಯ ಹಸ್ತ ಬೇಡುತ್ತಿದ್ದಾರೆ. ಚೈತ್ರಾ ಅವರಿಗೆ ಕಿಚ್ಚ ಸುದೀಪ್ ಅವರಂದ್ರೆ ತುಂಬ ಇಷ್ಟವಂತೆ. ಅವರ ಸಿನಿಮಾಗಳನ್ನ ನೋಡಿ ಬೆಳದಿದ್ದಾರಂತೆ. ಹೀಗಾಗಿ, ತಂಗಿ ಎಂಬ ಮಮಕಾರದಿಂದ ನನಗೆ ಸಹಾಯ ಮಾಡಿ ಎಂದು ಚೈತ್ರಾ ಅವರು ಸುದೀಪ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸುದೀಪ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ತಲುಪಿಸಬೇಕು ಎಂಬ ಆಶಯದಿಂದ ಶೇರ್ ಮಾಡುತ್ತಿದ್ದಾರೆ. ಸಾಧ್ಯವಾದ್ರೆ, ನೀವು ಸಹಾಯ ಮಾಡಿ, ಮತ್ತು ಸುದೀಪ್ ಅವರ ಗಮನಕ್ಕೆ ತನ್ನಿ.....
ಚೈತ್ರಾ ಅವರ ಮನಕುಲುಕುವ ವಿಡಿಯೋ ನೋಡಿ