Don't Miss!
- Sports ರೋಹಿತ್ ಶರ್ಮಾ ಬಳಿಕ ಭಾರತ ತಂಡದ ನಾಯಕನಾರು?; ಅಚ್ಚರಿ ಹೆಸರು ತಿಳಿಸಿದ ಹರ್ಭಜನ್ ಸಿಂಗ್!
- News ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ: ಸಿದ್ದರಾಮಯ್ಯ ಗರಂ
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಹಸ ಕಲಾವಿದರ 'ಕನಸಿನ ಭವನ'ಕ್ಕೆ 10 ಲಕ್ಷ ನೀಡಿದ ಕಿಚ್ಚ ಸುದೀಪ್
Recommended Video
ಕನ್ನಡ ಚಲನಚಿತ್ರ ಕಲಾವಿದರ ಸಂಘಕ್ಕೊಂದು ಭವನ, ನಿರ್ದೇಶಕ ಸಂಘಕ್ಕೊಂದು ಭವನ, ನಿರ್ಮಾಪಕ ಸಂಘಕ್ಕೊಂದು ಭವನ ಇದೆ. ಇದೀಗ, ಕರ್ನಾಟಕ ಚಲನಚಿತ್ರ ಸಾಹಸ ಕಲಾವಿದರ ಸಂಘಕ್ಕೊಂದು ಭವನ ಬೇಕು ಎಂಬ ಉದ್ದೇಶದಿಂದ ನೂತನ ಕಟ್ಟಡ ನಿರ್ಮಿಸಲಾಗುತ್ತಿದೆ.
ಈ ಕಟ್ಟಡ ನಿರ್ಮಾಣಕ್ಕೆ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಜೊತೆಯಾಗಿದ್ದಾರೆ. ಸಾಹಸ ಕಲಾವಿದರ ಭವನ ನಿರ್ಮಾಣ ಕೆಲಸಕ್ಕೆ 10 ಲಕ್ಷ ರೂಪಾಯಿ ನೀಡುವ ಮೂಲಕ ಬೆಂಬಲವಾಗಿ ನಿಂತಿದ್ದಾರೆ.
ಈ ವಿಷಯವನ್ನ ಹಿರಿಯ ಸಾಹಸ ನಿರ್ದೇಶಕ, ನಟ ಥ್ರಿಲ್ಲರ್ ಮಂಜು ಅವರು ತಮ್ಮ ಟ್ವಿಟ್ಟರ್, ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇದೇ ವಿಚಾರವಾಗಿ ಸಾಹಸ ನಿರ್ದೇಶಕ ರವಿವರ್ಮ ಕೂಡ ಟ್ವೀಟ್ ಮಾಡಿದ್ದಾರೆ.
ದರ್ಶನ್-ಸುದೀಪ್ ಇಬ್ಬರು ಇಷ್ಟ, ಆದರೆ....: ದುನಿಯಾ ರಶ್ಮಿ ನೆಚ್ಚಿನ ನಟ ಯಾರು?
ಈ ಬಗ್ಗೆ ಫಿಲ್ಮಿಬೀಟ್ ಕನ್ನಡ ಜೊತೆ ಮಾತನಾಡಿದ ಥ್ರಿಲ್ಲರ್ ಮಂಜು ''ಸುಮಾರು 30 ವರ್ಷದಿಂದ ಸಾಹಸ ಕಲಾವಿದರ ಭವನ ಕಟ್ಟಲು ಹೋರಾಡುತ್ತಿದ್ದೇವೆ. ಆ ಘಳಿಗೆ ಈಗ ಕೂಡಿಬಂದಿದೆ. ಕೆಲವು ದಿನಗಳ ಹಿಂದೆ ಸುದೀಪ್ ಅವರನ್ನ ನಮ್ಮ ಸಂಘದ ಪದಾಧಿಕಾರಿಗಳು ಭೇಟಿ ಮಾಡಿದ್ದರು. ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ ತಿಳಿಸಲಾಗಿತ್ತು. ಈ ವಿಷಯ ಕೇಳಿ ಸಂತಸದಿಂದ, ಹೃದಯಪೂರ್ವಕವಾಗಿ 10 ಲಕ್ಷ ನೀಡಿದ್ದಾರೆ. ಈಗಾಗಲೇ ಹಣ ನಮ್ಮ ಸಂಘದ ಖಾತೆಗೆ ಜಮಾ ಆಗಿದೆ'' ಎಂದು ತಿಳಿಸಿದರು.
''ಕಳೆದ ಏಳೆಂಟು ವರ್ಷದಿಂದ ಬಸವನಗುಡಿ ಬಳಿ ಬಾಡಿಗಿಗೆ ಸಂಘದ ಕಛೇರಿ ಮಾಡಿಕೊಳ್ಳಲಾಗಿತ್ತು. ಈಗ ನಾಯಂಡಹಳ್ಳಿ ಬಳಿ ಜಾಗ ಖರೀದಿಸಿ ಕಟ್ಟಡ ನಿರ್ಮಿಸಲಾಗುತ್ತಿದೆ. ನಮ್ಮ ಸಂಘದ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ'' ಎಂದು ಸಂತಸ ಹಂಚಿಕೊಂಡಿದ್ದಾರೆ.
ಒಂದು ತಿಂಗಳ ಹಿಂದೆಯೇ ಕಾಮಗಾರಿ ಆರಂಭವಾಗಿದೆ. ಮುಂದಿನ ವರ್ಷಕ್ಕೆ ಕಟ್ಟಡ ನಿರ್ಮಾಣ ಮಾಡಿ, ಉದ್ಘಾಟನೆ ಮಾಡುವ ಗುರಿ ಹೊಂದಿದ್ದಾರಂತೆ ಸಾಹಸ ಕಲಾವಿದ ಸಂಘದ ಸದಸ್ಯರು. ಸದ್ಯ ಸಾಹಸ ಕಲಾವಿದರ ಸಂಘದ ಅಧ್ಯಕ್ಷರಾಗಿ ವಿನೋದ್ ಕಾರ್ಯನಿರ್ವಹಿಸುತ್ತದ್ದು, ಕಾರ್ಯದರ್ಶಿಯಾಗಿ ರಾಜ್ ಕುಮಾರ್ ಇದ್ದಾರೆ.