Just In
Don't Miss!
- News
Mood Of The Nation ಸಮೀಕ್ಷೆ: ಈಗ ಚುನಾವಣೆ ನಡೆದರೂ ಗೆಲ್ಲೋದು ಎನ್ಡಿಎ
- Sports
ಐಎಸ್ಎಲ್: ಈಸ್ಟ್ ಬೆಂಗಾಲ್ ಅಜೇಯ ನಡೆಗೆ ಬೆಸ್ಟ್ ಮುಂಬೈ ಸವಾಲು
- Finance
ಬಜೆಟ್ 2021: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಜನವರಿ 30ರಂದು ಸರ್ವ ಪಕ್ಷಗಳ ಸಭೆ
- Lifestyle
ಗಣರಾಜ್ಯೋತ್ಸವ 2021: ಇಲ್ಲಿದೆ ಶುಭಾಶಯಗಳು, ಕೋಟ್ಸ್, ವಾಟ್ಸಾಪ್ ಸ್ಟೇಟಸ್
- Automobiles
ಬಿಡುಗಡೆಗೆ ಸಜ್ಜಾದ ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ ಬೈಕುಗಳು
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಬಿಗ್ ಬಾಸ್' ರನ್ನರ್ ಕೀರ್ತಿಗೆ 10ಲಕ್ಷ ಕೊಟ್ಟ ಕಿಚ್ಚ ಸುದೀಪ್!
ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ 'ಬಿಗ್ ಬಾಸ್ ಕನ್ನಡ 4' ಯಶಸ್ವಿಯಾಗಿ ಮುಗಿದಿದೆ. ನಿರ್ದೇಶಕ 'ಒಳ್ಳೆ ಹುಡುಗ' ಪ್ರಥಮ್ ಈ ಬಾರಿಯ 'ಬಿಗ್ ಬಾಸ್' ವಿನ್ನರ್ ಆದ್ರೆ, ಕಿರಿಕ್ ಕೀರ್ತಿ ಎರಡನೇ ಸ್ಥಾನ ಪಡೆದು ರನ್ನರ್ ಎನಿಸಿಕೊಂಡರು.['ಬಿಗ್ ಬಾಸ್ ಕನ್ನಡ-4' ಗೆದ್ದ ಪ್ರಥಮ್: ಆರ್ಡರ್ ಈಸ್ ಪಾಸ್ಡ್.!]
'ಬಿಗ್ ಬಾಸ್' ಗೆದ್ದ ಪ್ರಥಮ್ ಗೆ ಕಲರ್ಸ್ ಕನ್ನಡ ವಾಹಿನಿ ಕಡೆಯಿಂದ 50 ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಯಿತು. ಇನ್ನೂ ರನ್ನರ್ ಅಪ್ ಆದ ಕೀರ್ತಿ ಅವರಿಗೆ ಸರ್ಪ್ರೈಸ್ ಎಂಬಂತೆ ಕಿಚ್ಚ ಸುದೀಪ್ ಕಡೆಯಿಂದ 10 ಲಕ್ಷ ರೂಪಾಯಿ ವಿಶೇಷವಾಗಿ ನೀಡಲಾಯಿತು.[ಒಂದೇ ಒಂದು ರೂಪಾಯಿ ಪ್ರಶಸ್ತಿ ಮೊತ್ತ ಬೇಡ : 'ಲಾರ್ಡ್' ಪ್ರಥಮ್]
ಕಿರಿಕ್ ಕೀರ್ತಿ ತಮಗೆ ಸಿಗುವ ಸಂಭಾವನೆಯಲ್ಲಿ 8/1 ಭಾಗವನ್ನ ಸಾಮಾಜಿಕ ಕೆಲಸಗಳಿಗೆ ಬಳಸುವುದಾಗಿ ವೇದಿಕೆಯಲ್ಲಿ ಘೋಷಿಸಿದರು. ಈ ವೇಳೆ ಕೀರ್ತಿ ಅವರ ಆಟದ ವೈಖರಿ ಹಾಗೂ ಅವರ ಸಾಮಾಜಿಕ ಕಾರ್ಯಕ್ರಮಗಳನ್ನ ಮೆಚ್ಚಿದ ನಟ, ನಿರೂಪಕ ಸುದೀಪ್ ಅವರು ತಮ್ಮ ಕಡೆಯಿಂದ 10 ಲಕ್ಷ ರೂ ಘೋಷಿಸಿದರು.
ಸುದೀಪ್ ಅವರ ಮಾತು ಕೇಳಿದ ಕಿರಿಕ್ ಕೀರ್ತಿ, 'ಬಿಗ್ ಬಾಸ್' ಗೆದ್ದಿದ್ದಕ್ಕಿಂತ ಹೆಚ್ಚು ಖುಷಿ ಆಗುತ್ತಿದೆ ಎಂದು ಕಿಚ್ಚನಿಗೆ ಅಭಿನಂದನೆ ಸಲ್ಲಿಸಿದರು.