Don't Miss!
- News 'ಚೊಂಬು' ವಾಗ್ದಾದ: ಕಾವೇರಿ ನೀರು ಹರಿಸಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟಿದ್ದು ನೀವು: ಬಿಜೆಪಿ ತಿರುಗೇಟು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೈತರಿಗಾಗಿ ಕಾರನ್ನೇ ಮಾರಿದ ನಟ ಕಿಚ್ಚ ಸುದೀಪ್
Recommended Video
ಕಿಚ್ಚ ಸುದೀಪ್ ಬಡವರಿಗೆ ಹಾಗೂ ಕಷ್ಟದಲ್ಲಿರುವವರ ಪಾಲಿಗೆ ಆಶಾಕಿರಣ ಆಗುತ್ತಾರೆ ಅನ್ನೋದನ್ನ ಮತ್ತೆ ನಿರೂಪಿಸಿದ್ದಾರೆ. ಸದಾ ಒಂದಲ್ಲ ಒಂದು ಉಪಯುಕ್ತವಾಗುವಂತಹ ಕೆಲಸಗಳನ್ನ ಮಾಡಿ ವಾವ್ಹ್ ಕಿಚ್ಚ ಎನ್ನುವ ಭಾವನೆ ಮೂಡಿಸೋ ಸುದೀಪ್ ರೈತರ ಸಂಕಷ್ಟದಲ್ಲಿ ಪಾಲುದಾರರಾಗಿದ್ದಾರೆ.
'ವಿ ರೆಸ್ಪೆಕ್ಟ್ ಫಾರ್ಮರ್ಸ್ ಟ್ರಸ್ಟ್' ರೈತ ಸ್ನೇಹಿ ಯೋಜನೆಯ ಲಾಂಛನ ಲೋಕಾರ್ಪಣೆ ಹಾಗೂ ಸಾರ್ಥಕ ನೇಗಿಲ ಯೋಗಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನ ಇಂದು (ಡಿ.13) ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ನಟ ಕಿಚ್ಚ ಸುದೀಪ್ ಕಾರ್ಯಕ್ರಮದಲ್ಲಿ ಭಾಗಿಯಾಗಿ 'ವಿ ರೆಸ್ಪೆಕ್ಟ್ ಫಾರ್ಮರ್ಸ್ ಟ್ರಸ್ಟ್' ನ ಲೋಗೋವನ್ನ ಬಿಡುಗಡೆ ಮಾಡಿದ್ರು.
ಲಕ್ಷಾಂತರ ಅಭಿಮಾನಿಗಳಿರುವ ಕಿಚ್ಚ ಫಾಲೋ ಮಾಡೋದು ಈ ಇಬ್ಬರನ್ನ !
ಇದೇ ಸಮಯದಲ್ಲಿ ರೈತರ ಬಗ್ಗೆ ಮಾತನಾಡಿದ ಅಭಿನಯ ಚಕ್ರವರ್ತಿ ಸುದೀಪ್ "ಸಾಮಾನ್ಯವಾಗಿ ಕಲಾವಿದರಾದ ನಾವುಗಳು ಇಂತಹ ಕಾರ್ಯಕ್ರಮಕ್ಕೆ ಅಥಿತಿಗಳಂತೆ ಬಂದು ಹೋಗಿ ಬಿಡುತ್ತೇವೆ. ರೈತರ ಕಷ್ಟ ಮಾತ್ರ ಹಾಗೆಯೇ ಇರುತ್ತೆ. ನನಗೆ ರೈತರಿಗೆ ಹೇಗೆ ಸಹಾಯ ಮಾಡಬೇಕೆಂದು ತಿಳಿಯುತ್ತಿಲ್ಲ. ಆದರೆ ನನ್ನ ಬಳಿ ಕಾರ್ ಗಳಿವೆ ಅದರಲ್ಲಿ ನಾನು ಅತ್ಯಂತ ಪ್ರೀತಿ ಮಾಡೋ 'ಬಿ ಎಂ ಡ್ಲ್ಯೂ' ಕಾರನ್ನ ಮಾರಾಟ ಮಾಡಿ ಅದರಿಂದ ಬಂದ ಹಣವನ್ನ 'ವಿ ರೆಸ್ಪೆಕ್ಟ್ ಫಾರ್ಮರ್ಸ್ ಟ್ರಸ್ಟ್' ಗೆ ನೀಡುತ್ತೇನೆ" ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಹಾಗೂ ಸನ್ಮಾನ ಸ್ವೀಕರಿಸಲು ನಿರಾಕರಿಸಿದ ಸುದೀಪ್ "ನಾನು ಭಾಷಣ ಮಾಡಲು ರಾಜಕೀಯ ವ್ಯಕ್ತಿ ಅಲ್ಲ ನಾನು ರಾಜಕೀಯಕ್ಕೆ ಬರುವುದಿಲ್ಲ" ಎಂದಿದ್ದಾರೆ.
'ಅಯೋಧ್ಯೆ' ರಾಮಮಂದಿರ ಮಾದರಿಯಲ್ಲಿ 'ವಿಷ್ಣು ಪುಣ್ಯಭೂಮಿ' ನಿರ್ಮಾಣವಾಗುತ್ತಾ ?
ಒಟ್ಟಾರೆ ಕನ್ನಡದ ಕಲಾವಿದರು ಸ್ವಯಂ ಪ್ರೇರಣೆಯಿಂದ ದೇಶದ ಬೆನ್ನೆಲುಬು ಅಂತಾರೆ ಕರೆಸಿಕೊಳ್ಳೊ ರೈತರಿಗೆ ಯಾವುದೋ ಒಂದು ರೀತಿಯಲ್ಲಿ ನೆರವಾಗುತ್ತಿರೋದು ಸಂತಸ ತರುವಂತ ವಿಚಾರ. ಇಂದು ಸುದೀಪ್ ಮಾಡಿರೋ ನಿರ್ಧಾರ ಮತ್ತಷ್ಟು ಜನರಿಗೆ ಸ್ಫೂತಿಯಾಗಲಿದೆ.