Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಚ್ಚ ಬಿಡುಗಡೆ ಮಾಡಿದ ಹೊಸ ನಾಗರಹಾವು ಟೀಸರ್
ಸಾಹಸಸಿಂಹ, ಅಭಿನಯ ಭಾರ್ಗವ, ಮೈಸೂರು ರತ್ನ ಡಾ ವಿಷ್ಣುವರ್ಧನ್ ನಾಯಕನಾಗಿ ಅಭಿನಯದ ಚೊಚ್ಚಲ 'ನಾಗರಹಾವು' ಸಿನಿಮಾ ಹೊಸ ಅವತರಣಿಕೆಯಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಹಳೆ ಸಿನಿಮಾವನ್ನು ಹೊಸ ತಂತ್ರಜ್ಙಾನದಲ್ಲಿ ಬೆಳ್ಳೆ ತೆರೆ ಮೇಲೆ ನೋಡಲು ಅಭಿಮಾನಿಗಳು ಕಾತುರರಾಗಿದ್ದು ಇಂದು ಟ್ವಿಟ್ಟರ್ ಮೂಲಕ ಕಿಚ್ಚ ಸುದೀಪ್ ಹೊಸ ತಂತ್ರಜ್ಙಾನದಲ್ಲಿ ಸಿದ್ದವಾರುವ 'ನಾಗರಹಾವು' ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ.
ಹೊಸ ತಂತ್ರಜ್ಙಾನದೊಂದಿಗೆ 7.1 ಡಿಜಿಟಲ್ ಅಲ್ಟ್ರಾ ಸೌಂಡಿಂಗ್ ಎಫೆಕ್ಟ್ ನಲ್ಲಿ 'ನಾಗರಹಾವು' ಚಿತ್ರದ ಟೀಸರ್ ಝಲಕ್ ಅಭಿಮಾನಿಗಳ ಮುಂದೆ ಬಂದಿದೆ. ಹೊಸ ಅವತಾರದಲ್ಲಿ ವಿಷ್ಣುದಾದರನ್ನ ನೋಡಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
'ನಾಗರಹಾವು' ಸಿನಿಮಾವನ್ನು ನಿರ್ಮಾಪಕ ವೀರಸ್ವಾಮಿ ನಿರ್ಮಾಣ ಮಾಡಿದ್ದರು. ಈಗ ಅವರ ಎರಡನೇ ಪುತ್ರ, ರವಿಚಂದ್ರನ್ ಸಹೋದರ ಬಾಲಾಜಿ ಈ ಚಿತ್ರವನ್ನು ಮತ್ತೆ ರೀ ರಿಲೀಸ್ ಮಾಡಲು ಮುಂದಾಗಿದ್ದಾರೆ.
ಮತ್ತೆ ರೀ ರಿಲೀಸ್ ಆಗುತ್ತಿದೆ ಪುಟ್ಟಣ್ಣನ 'ನಾಗರಹಾವು' ಸಿನಿಮಾ
ಟ್ವಿಟ್ಟರ್ ಮೂಲಕ ಟೀಸರ್ ಬಿಡುಗಡೆ ಮಾಡಿರುವ ಸುದೀಪ್ "ವಿಷ್ಣುವರ್ಧನ್ ಅವರು ಅಪರೂಪದ ನಟರಲ್ಲಿ ಒಬ್ಬರು. ಇಂದಿಗೂ ಕೂಡ ಕೋಟ್ಯಾನುಕೋಟಿ ಅಭಿಮಾನಿ ಹೃದಯದಲ್ಲಿ ನೆಲೆಸಿರುವ ಕಲಾವಿದ. ನನ್ನ ಸ್ಫೂರ್ತಿಯಂತಿರುವ ವಿಷ್ಣುವರ್ಧನ್ ಅಭಿನಯದ ಟೀಸರ್ ಬಿಡುಗಡೆ ಮಾಡಲು ಸಂತೋಷವಾಗಿದೆ. ಹೊಸ ಅವತಾರದಲ್ಲಿ 'ನಾಗರಹಾವು' ಸಿನಿಮಾ. ರಾಮಚಾರಿ ಮರಳಿ ಬಂದಿದ್ದಾನೆ ದಾರಿ ಮಾಡಿ ಕೊಡಿ" ಎಂದಿದ್ದಾರೆ.
ಸದ್ಯ ಟೀಸರ್ ಬಿಡುಗಡೆ ಮಾಡಿರುವ ನಿರ್ಮಾಪಕ ಬಾಲಾಜಿ ಚಿತ್ರ ಬಿಡುಗಡೆಯ ಬಗ್ಗೆ ಯಾವುದೇ ಸುಳಿವು ಕೊಟ್ಟಿಲ್ಲ ಆದರೆ ಚಿತ್ರದ ಬಗ್ಗೆ ಕ್ರೇಜ್ ಮಾತ್ರ ಹೆಚ್ಚಾಗಿದೆ. ಅಭಿಮಾನಿಗಳು ಸಿನಿಮಾರಂಗದ ಕಲಾವಿದರು ಮತ್ತು ತಂತ್ರಜ್ಞರು ಚಿತ್ರ ನೋಡಲು ಕಾತುರರಾಗಿದ್ದಾರೆ.