Don't Miss!
- Finance April 23 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Automobiles ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- News Helicopters Crash: ಸೇನೆಯ ಎರಡು ಹೆಲುಕಾಪ್ಟರ್ ಡಿಕ್ಕಿ: 10 ಜನರ ಸಾವು
- Technology Google Chrome: ಗೂಗಲ್ ಕ್ರೋಮ್ ಬಳಕೆದಾರರು ಹ್ಯಾಕಿಂಗ್ ಅಪಾಯದಲ್ಲಿ! ಸುರಕ್ಷಿತವಾಗಿರೋದು ಹೇಗೆ?
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್; ಅಂಪೈರಿಂಗ್ ವಿರುದ್ಧ ಕೆಂಡಕಾರಿದ ಮೊಹಮ್ಮದ್ ಕೈಫ್!
- Lifestyle ಮನೆಯಲ್ಲಿ ಘಮ ಘಮಿಸುವ ಮಲ್ಲಿಗೆ ಗಿಡ ಬೆಳೆಸೋದು ಹೇಗೆ..? ಇಲ್ಲಿದೆ ಮಾಹಿತಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಚ್ಚ ಬಿಡುಗಡೆ ಮಾಡಿದ ಹೊಸ ನಾಗರಹಾವು ಟೀಸರ್
ಸಾಹಸಸಿಂಹ, ಅಭಿನಯ ಭಾರ್ಗವ, ಮೈಸೂರು ರತ್ನ ಡಾ ವಿಷ್ಣುವರ್ಧನ್ ನಾಯಕನಾಗಿ ಅಭಿನಯದ ಚೊಚ್ಚಲ 'ನಾಗರಹಾವು' ಸಿನಿಮಾ ಹೊಸ ಅವತರಣಿಕೆಯಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಹಳೆ ಸಿನಿಮಾವನ್ನು ಹೊಸ ತಂತ್ರಜ್ಙಾನದಲ್ಲಿ ಬೆಳ್ಳೆ ತೆರೆ ಮೇಲೆ ನೋಡಲು ಅಭಿಮಾನಿಗಳು ಕಾತುರರಾಗಿದ್ದು ಇಂದು ಟ್ವಿಟ್ಟರ್ ಮೂಲಕ ಕಿಚ್ಚ ಸುದೀಪ್ ಹೊಸ ತಂತ್ರಜ್ಙಾನದಲ್ಲಿ ಸಿದ್ದವಾರುವ 'ನಾಗರಹಾವು' ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ.
ಹೊಸ ತಂತ್ರಜ್ಙಾನದೊಂದಿಗೆ 7.1 ಡಿಜಿಟಲ್ ಅಲ್ಟ್ರಾ ಸೌಂಡಿಂಗ್ ಎಫೆಕ್ಟ್ ನಲ್ಲಿ 'ನಾಗರಹಾವು' ಚಿತ್ರದ ಟೀಸರ್ ಝಲಕ್ ಅಭಿಮಾನಿಗಳ ಮುಂದೆ ಬಂದಿದೆ. ಹೊಸ ಅವತಾರದಲ್ಲಿ ವಿಷ್ಣುದಾದರನ್ನ ನೋಡಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
'ನಾಗರಹಾವು' ಸಿನಿಮಾವನ್ನು ನಿರ್ಮಾಪಕ ವೀರಸ್ವಾಮಿ ನಿರ್ಮಾಣ ಮಾಡಿದ್ದರು. ಈಗ ಅವರ ಎರಡನೇ ಪುತ್ರ, ರವಿಚಂದ್ರನ್ ಸಹೋದರ ಬಾಲಾಜಿ ಈ ಚಿತ್ರವನ್ನು ಮತ್ತೆ ರೀ ರಿಲೀಸ್ ಮಾಡಲು ಮುಂದಾಗಿದ್ದಾರೆ.
ಮತ್ತೆ ರೀ ರಿಲೀಸ್ ಆಗುತ್ತಿದೆ ಪುಟ್ಟಣ್ಣನ 'ನಾಗರಹಾವು' ಸಿನಿಮಾ
ಟ್ವಿಟ್ಟರ್ ಮೂಲಕ ಟೀಸರ್ ಬಿಡುಗಡೆ ಮಾಡಿರುವ ಸುದೀಪ್ "ವಿಷ್ಣುವರ್ಧನ್ ಅವರು ಅಪರೂಪದ ನಟರಲ್ಲಿ ಒಬ್ಬರು. ಇಂದಿಗೂ ಕೂಡ ಕೋಟ್ಯಾನುಕೋಟಿ ಅಭಿಮಾನಿ ಹೃದಯದಲ್ಲಿ ನೆಲೆಸಿರುವ ಕಲಾವಿದ. ನನ್ನ ಸ್ಫೂರ್ತಿಯಂತಿರುವ ವಿಷ್ಣುವರ್ಧನ್ ಅಭಿನಯದ ಟೀಸರ್ ಬಿಡುಗಡೆ ಮಾಡಲು ಸಂತೋಷವಾಗಿದೆ. ಹೊಸ ಅವತಾರದಲ್ಲಿ 'ನಾಗರಹಾವು' ಸಿನಿಮಾ. ರಾಮಚಾರಿ ಮರಳಿ ಬಂದಿದ್ದಾನೆ ದಾರಿ ಮಾಡಿ ಕೊಡಿ" ಎಂದಿದ್ದಾರೆ.
ಸದ್ಯ ಟೀಸರ್ ಬಿಡುಗಡೆ ಮಾಡಿರುವ ನಿರ್ಮಾಪಕ ಬಾಲಾಜಿ ಚಿತ್ರ ಬಿಡುಗಡೆಯ ಬಗ್ಗೆ ಯಾವುದೇ ಸುಳಿವು ಕೊಟ್ಟಿಲ್ಲ ಆದರೆ ಚಿತ್ರದ ಬಗ್ಗೆ ಕ್ರೇಜ್ ಮಾತ್ರ ಹೆಚ್ಚಾಗಿದೆ. ಅಭಿಮಾನಿಗಳು ಸಿನಿಮಾರಂಗದ ಕಲಾವಿದರು ಮತ್ತು ತಂತ್ರಜ್ಞರು ಚಿತ್ರ ನೋಡಲು ಕಾತುರರಾಗಿದ್ದಾರೆ.