Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ಸಹಾಯ ನೆನೆದು ಕಣ್ಣೀರಿಟ್ಟ ಮಹಿಳೆ
ನಟ ಸುದೀಪ್ ಅವರು ತಮ್ಮ ಚಾರಿಟೇಬಲ್ ಸೊಸೈಟಿ ಮೂಲಕ ಹಲವಾರು ಮಂದಿಗೆ ಸ್ವಂತ ಹಣದಲ್ಲಿ ಸಹಾಯ ಮಾಡುತ್ತಿದ್ದಾರೆ.
Recommended Video
ಇದೀಗ ಸೌಮ್ಯ ಎಂಬುವರು ಸುದೀಪ್ ಅವರು ತಮಗೆ ಮಾಡಿರುವ ಸಹಾಯದ ಬಗ್ಗೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. 'ನನ್ನ ಪತಿ ಉಳಿಯಲು ಸುದೀಪ್ ಮಾಡಿದ ಸಹಾಯ ಕಾರಣ' ಎಂದಿದ್ದಾರೆ.
ಮಹಿಳೆ ಸೌಮ್ಯ ಮೊದಲಿನಿಂದಲೂ ಸುದೀಪ್ ಅಭಿಯಾನಿಯಂತೆ. ಇತ್ತೀಚೆಗೆ ಅವರ ಪತಿಗೆ ತೀವ್ರ ಆರೋಗ್ಯ ಸಮಸ್ಯೆ ಎದುರಾಗಿ ಆಸ್ಪತ್ರೆಗೆ ದಾಖಲಾಗಿ ಇತ್ತೀಚೆಗಷ್ಟೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬಂದಿದ್ದರು. ಅವರು ಬಂದ ಕೆಲವೇ ದಿನಗಳಲ್ಲಿ ಅವರಿಗೆ ಕೊರೊನಾ ಸೋಂಕು ತಗುಲಿತು. ಸೌಮ್ಯ ಕುಟುಂಬ ಇತರರಿಗೂ ಸೋಂಕು ತಗುಲಿದೆ.
ಮೊದಲೇ ಬೇರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸೌಮ್ಯ ಪತಿಗೆ ಕೊರೊನಾದಿಂದ ಸಮಸ್ಯೆ ಹೆಚ್ಚಾಗಿದೆ. ಬ್ಲಾಕ್ ಮಾರ್ಕೆಟ್ನಲ್ಲಿ ರೆಮ್ಡೆಸಿವಿರ್ ಚುಚ್ಚುಮದ್ದನ್ನು ಲಕ್ಷಾಂತರ ಹಣ ಕೊಟ್ಟು ಬ್ಲಾಕ್ನಲ್ಲಿ ಖರೀದಿಸಿದ್ದಾರೆ. ಆಸ್ಪತ್ರೆಗೆ ದಾಖಲಿಸುವಾಗ 50,000 ಹಣ ಕೊಟ್ಟಿದ್ದಾರೆ. ಆದರೆ ಕೊನೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬೇಕಾದರೆ ಮತ್ತೆ ಲಕ್ಷಕ್ಕೂ ಹೆಚ್ಚು ಹಣ ಕಟ್ಟುವಂತೆ ಆಸ್ಪತ್ರೆಯವರು ಒತ್ತಾಯಿಸಿದ್ದಾರೆ.
ಇದರಿಂದ ಕಂಗಾಲಾದ ಸೌಮ್ಯ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ಗೆ ಕರೆ ಮಾಡಿ ಮನವಿ ಮಾಡಿದಾಗ ಸುದೀಪ್ ಕಡೆಯಿಂದ ನೆರವು ದೊರಕಿದೆ. ಈ ವಿಷಯವನ್ನು ಕಣ್ಣೀರು ಹಾಕುತ್ತಾ ಹೇಳಿರುವ ಸೌಮ್ಯ. 'ಸುದೀಪ್ ಅವರು ನನ್ನ ತಾಳಿಭಾಗ್ಯ ಉಳಿಸಿದ್ದಾರೆ' ಎಂದಿದ್ದಾರೆ.
'ಸುದೀಪ್ ಅವರ ಅಭಿಮಾನಿಯಾಗಿದ್ದಕ್ಕೆ ನಾನು ಹೆಮ್ಮೆ ಪಡುತ್ತೇನೆ. ಮುಂದಿನ ಜನ್ಮದಲ್ಲಿ ಸಹ ನಾನು ಸುದೀಪ್ ಅವರ ಅಭಿಮಾನಿಯಾಗಿಯೇ ಹುಟ್ಟಬೇಕೆಂದು ಕೋರಿಕೊಳ್ಳುತ್ತೇನೆ' ಎಂದಿದ್ದಾರೆ.