Don't Miss!
- News Gold Rates Today: ನಿನ್ನೆಗಿಂತ ಕೊಂಚ ಇಳಿಕೆಯಾದ ಚಿನ್ನದ ಬೆಲೆ, ಯಾವ ನಗರದಲ್ಲಿ ಎಷ್ಟು?
- Finance ನೂಡಲ್ಸ್ ಪ್ಯಾಕೆಟ್ ಒಳಗಿತ್ತು ವಜ್ರಗಳ ರಾಶಿ, ಬರೋಬ್ಬರಿ 6.46 ಕೋಟಿ ರೂ. ಮೌಲ್ಯದ ಚಿನ್ನ, ಡೈಮಂಡ್ ವಶ!
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ಸಹಾಯ ನೆನೆದು ಕಣ್ಣೀರಿಟ್ಟ ಮಹಿಳೆ
ನಟ ಸುದೀಪ್ ಅವರು ತಮ್ಮ ಚಾರಿಟೇಬಲ್ ಸೊಸೈಟಿ ಮೂಲಕ ಹಲವಾರು ಮಂದಿಗೆ ಸ್ವಂತ ಹಣದಲ್ಲಿ ಸಹಾಯ ಮಾಡುತ್ತಿದ್ದಾರೆ.
Recommended Video
ಇದೀಗ ಸೌಮ್ಯ ಎಂಬುವರು ಸುದೀಪ್ ಅವರು ತಮಗೆ ಮಾಡಿರುವ ಸಹಾಯದ ಬಗ್ಗೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. 'ನನ್ನ ಪತಿ ಉಳಿಯಲು ಸುದೀಪ್ ಮಾಡಿದ ಸಹಾಯ ಕಾರಣ' ಎಂದಿದ್ದಾರೆ.
ಮಹಿಳೆ ಸೌಮ್ಯ ಮೊದಲಿನಿಂದಲೂ ಸುದೀಪ್ ಅಭಿಯಾನಿಯಂತೆ. ಇತ್ತೀಚೆಗೆ ಅವರ ಪತಿಗೆ ತೀವ್ರ ಆರೋಗ್ಯ ಸಮಸ್ಯೆ ಎದುರಾಗಿ ಆಸ್ಪತ್ರೆಗೆ ದಾಖಲಾಗಿ ಇತ್ತೀಚೆಗಷ್ಟೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬಂದಿದ್ದರು. ಅವರು ಬಂದ ಕೆಲವೇ ದಿನಗಳಲ್ಲಿ ಅವರಿಗೆ ಕೊರೊನಾ ಸೋಂಕು ತಗುಲಿತು. ಸೌಮ್ಯ ಕುಟುಂಬ ಇತರರಿಗೂ ಸೋಂಕು ತಗುಲಿದೆ.
ಮೊದಲೇ ಬೇರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸೌಮ್ಯ ಪತಿಗೆ ಕೊರೊನಾದಿಂದ ಸಮಸ್ಯೆ ಹೆಚ್ಚಾಗಿದೆ. ಬ್ಲಾಕ್ ಮಾರ್ಕೆಟ್ನಲ್ಲಿ ರೆಮ್ಡೆಸಿವಿರ್ ಚುಚ್ಚುಮದ್ದನ್ನು ಲಕ್ಷಾಂತರ ಹಣ ಕೊಟ್ಟು ಬ್ಲಾಕ್ನಲ್ಲಿ ಖರೀದಿಸಿದ್ದಾರೆ. ಆಸ್ಪತ್ರೆಗೆ ದಾಖಲಿಸುವಾಗ 50,000 ಹಣ ಕೊಟ್ಟಿದ್ದಾರೆ. ಆದರೆ ಕೊನೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬೇಕಾದರೆ ಮತ್ತೆ ಲಕ್ಷಕ್ಕೂ ಹೆಚ್ಚು ಹಣ ಕಟ್ಟುವಂತೆ ಆಸ್ಪತ್ರೆಯವರು ಒತ್ತಾಯಿಸಿದ್ದಾರೆ.
ಇದರಿಂದ ಕಂಗಾಲಾದ ಸೌಮ್ಯ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ಗೆ ಕರೆ ಮಾಡಿ ಮನವಿ ಮಾಡಿದಾಗ ಸುದೀಪ್ ಕಡೆಯಿಂದ ನೆರವು ದೊರಕಿದೆ. ಈ ವಿಷಯವನ್ನು ಕಣ್ಣೀರು ಹಾಕುತ್ತಾ ಹೇಳಿರುವ ಸೌಮ್ಯ. 'ಸುದೀಪ್ ಅವರು ನನ್ನ ತಾಳಿಭಾಗ್ಯ ಉಳಿಸಿದ್ದಾರೆ' ಎಂದಿದ್ದಾರೆ.
'ಸುದೀಪ್ ಅವರ ಅಭಿಮಾನಿಯಾಗಿದ್ದಕ್ಕೆ ನಾನು ಹೆಮ್ಮೆ ಪಡುತ್ತೇನೆ. ಮುಂದಿನ ಜನ್ಮದಲ್ಲಿ ಸಹ ನಾನು ಸುದೀಪ್ ಅವರ ಅಭಿಮಾನಿಯಾಗಿಯೇ ಹುಟ್ಟಬೇಕೆಂದು ಕೋರಿಕೊಳ್ಳುತ್ತೇನೆ' ಎಂದಿದ್ದಾರೆ.