twitter
    For Quick Alerts
    ALLOW NOTIFICATIONS  
    For Daily Alerts

    ಚಾಮರಾಜನಗರ ದುರಂತ: ಮೃತ ಕುಟುಂಬಗಳ ನೆರವಿಗೆ ಧಾವಿಸಿದ ಸುದೀಪ್

    |

    ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಜನರು ಮೃತಪಟ್ಟಿರುವ ಘಟನೆ ವರದಿಯಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

    ಸರ್ಕಾರದಿಂದ ಮೃತ ಕುಟುಂಬಗಳಿಗೆ ಯಾವುದೇ ಪರಿಹಾರ, ಸಾಂತ್ವನವೂ ಸಿಕ್ಕಿಲ್ಲ. ಆದರೆ, ಚಲನಚಿತ್ರ ನಟ ಕಿಚ್ಚ ಸುದೀಪ್ ಅವರು ಮೃತ ಕುಟುಂಬಗಳ ಸಹಾಯಕ್ಕೆ ಮುಂದಾಗಿದ್ದಾರೆ.

    ಚಾಮರಾಜನಗರ ಆಸ್ಪತ್ರೆ ದುರಂತ; ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

    ಕಿಚ್ಚ ಸುದೀಪ್ ಚಾರಿಟಬಲ್ ಸೊಸೈಟಿ ಮೂಲಕ ಮೃತ ಕುಟುಂಬಗಳಿಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ ನಟ ಸುದೀಪ್.

    Sudeep Helps Families of Charamarajanagar Oxygen Tragedy Victims

    ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಪ್ರಾಣ ಕಳೆದುಕೊಂಡ ಎಲ್ಲಾ 24 ಮೃತರ ಮನೆಗಳಿಗೆ ಭೇಟಿ ನೀಡಿದ ಕಿಚ್ಚ ಸುದೀಪ್ ಚಾರಿಟಬಲ್ ಸೊಸೈಟಿ ಸದಸ್ಯರು, ಸುದೀಪ್ ಪರವಾಗಿ ಸಾಂತ್ವನ ತಿಳಿಸಿದ್ದಾರೆ.

    ಮೃತ ಕುಟುಂಬಗಳಿಗೆ ಎಲ್ಲಾ ರೀತಿಯಲ್ಲೂ ಸಹಾಯ ಮಾಡುವುದಾಗಿ, ಕುಟುಂಬದ ಜೊತೆ ಸದಾ ಇರುವುದಾಗಿ ಸುದೀಪ್ ಭರವಸೆ ನೀಡಿದ್ದಾರೆ. ಮೃತ ಕುಟುಂಬಕ್ಕೆ ಆರ್ಥಿಕವಾಗಿ, ಕುಟುಂಬದ ಮಕ್ಕಳ ವಿದ್ಯಾಭ್ಯಾಸದ ವಿಚಾರದಲ್ಲಿ ನೆರವು ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

    Recommended Video

    ಶಂಖನಾದ ಅರವಿಂದ್ ಸಾವಿಗೆ ಭಾವುಕರಾದ ಪುನೀತ್ ರಾಜಕುಮಾರ್ | Filmibeat Kannada

    ಎರಡು ವಾರಗಳಿಂದ ಸುದೀಪ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಖಾಸಗಿ ಕಾರ್ಯಕ್ರಮದ ನಿರೂಪಣೆಯಿಂದಲೂ ಹಿಂದೆ ಸರಿದಿದ್ದರು. ಇನ್ನುಳಿದಂತೆ ಕಿಚ್ಚ ಸುದೀಪ್ ಚಾರಿಟಬಲ್ ಸೊಸೈಟಿ ಮೂಲಕ ಸುದೀಪ್ ಅವರು ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದಾರೆ.

    English summary
    Kichcha Sudeep Charitable Society Helps Families of Charamarajanagar Oxygen Tragedy Victims.
    Saturday, May 8, 2021, 15:36
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X