Don't Miss!
- News Women voters: ರಾಜ್ಯದ 17 ಲೋಕಸಭಾ ಕ್ಷೇತ್ರಗಳಲ್ಲಿ ಮಹಿಳೆಯರದ್ದೇ ಪಾರುಪತ್ಯ!
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚುಂಚನಕಟ್ಟೆ ಜಲಪಾತೋತ್ಸವದಲ್ಲಿ ನಟ ಸುದೀಪ್
Recommended Video
ಒಂದೆಡೆ ಬಣ್ಣ ಬಣ್ಣದ ಬೆಳಕಿನ ನಡುವೆ ಹೊಸ ಹೊಸ ಸೊಬಗಿನಿಂದ ಹರಿಯುವ ಜಲಪಾತ, ಮತ್ತೊಂದೆಡೆ ಜನ ಸಾಗರ. ಇವುಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ರಸದೌತಣ.
ಇಂಪಾದ ಸಂಗೀತ, ತಂಪೆರೆಯುತ್ತಿರುವ ಮಳೆ. ಮಳೆಯ ನಡುವೆಯೂ ಕೊಡೆ ಹಿಡಿದು ಸಂಭ್ರಮವನ್ನು ಕಣ್ತುಂಬಿಕೊಂಡ ಪ್ರವಾಸಿಗರು, ಸುತ್ತಮುತ್ತಲಿನ ಗ್ರಾಮಸ್ಥರು. ಇದು ಚುಂಚನಕಟ್ಟೆಯ ಧನುಷ್ಕೋಟಿ ಜಲಪಾತೋತ್ಸವ ಸಮಾರೋಪ ಸಮಾರಂಭದಲ್ಲಿ ಕಂಡು ಬಂದ ದೃಶ್ಯಗಳು.
ಕಣ್ಮನ ಸೆಳೆದ ಚುಂಚನಕಟ್ಟೆ ಜಲಪಾತೋತ್ಸವದ ವೈಭವ
ಜನಮನ ಸೂರೆಗೊಂಡಿದ್ದ ಚುಂಚನಕಟ್ಟೆಯ ಜಲಪಾತೋತ್ಸವ ಕಾರ್ಯಕ್ರಮ ಭಾನುವಾರ ಸಂಜೆ ಮಳೆಯ ಸಿಂಚನದ ನಡುವೆಯೂ ವರ್ಣರಂಜಿತವಾಗಿ ಸಮಾರೋಪಗೊಂಡಿತು. ಸಮಾರೋಪ ಸಮಾರಂಭಕ್ಕೆ ಚಲನಚಿತ್ರನಟರು ಬಂದು ಮೆರುಗು ನೀಡಿದರು.
ನವವಧುವಿನಂತೆ ಸಿಂಗಾರಗೊಂಡಿದ್ದ ಇಲ್ಲಿನ ಶ್ರೀರಾಮದೇವಾಲಯ, ಬಸವನ ವೃತ್ತದಲ್ಲಿನ ಬಣ್ಣ ಬಣ್ಣಗಳ ವಿದ್ಯುತ್ ಬೆಳಕಿನ ಚಿತ್ತಾರ ಉತ್ಸವಕ್ಕೆ ವಿಶೇಷ ಕಳೆ ತಂದಿತ್ತು.
ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಚಿತ್ರ ನಟ ಕಿಚ್ಚ ಸುದೀಪ್, ಸಚಿವ ಸಾ.ರಾ.ಮಹೇಶ್ ಅವರ ಜನಪರ ಕಾರ್ಯಕ್ರಮಗಳು ಹೆಚ್ಚು ಜನಮನ್ನಣೆ ಗಳಿಸಲಿ, ಇನ್ನೂ ಹೆಚ್ಚಿನ ಅಧಿಕಾರವನ್ನು ಅವರಿಗೆ ಕರುಣಿಸಲಿ. ಮುಂದಿನ ವರ್ಷಗಳಲ್ಲಿ ಜಲಪಾತೋತ್ಸವ ಮತ್ತಷ್ಟು ವಿಜೃಂಭಣೆಯಿಂದ ನಡೆಯಲಿ ಎಂದು ಆಶಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಮಾತನಾಡಿ, ತಾಲ್ಲೂಕಿನ ಜನತೆಯ ಪ್ರೀತಿ ವಿಶ್ವಾಸ ನಮ್ಮ ಮೇಲೆ ಇರಲಿ. ನಾನು ಇರುವವರೆಗೂ ನಿಮ್ಮಗಳ ಸೇವೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಹೇಳಿದರು.
ವೀರಭದ್ರನ ಕುಣಿತ, ನೃತ್ಯ ರೂಪಕ, ಚಲನ ಚಿತ್ರ ಹಿನ್ನೆಲೆ ಗಾಯಕ ಅರ್ಜುನ್ ಜನ್ಯ ಮತ್ತು ತಂಡದವರ ಸುಗಮ ಸಂಗೀತ, ಡಾ.ಪಿ.ಕೆ. ರಾಜಶೇಖರ್ ಹಾಗೂ ತಂಡದವರಿಂದ ಜಾನಪದ ಗೀತೆ ಗಾಯನ, ಜ್ಯೋಗಿ ಖ್ಯಾತಿಯ ಸುನೀತಾ, ನಾಗೇಶ್ ಕಂದೇಗಾಲ, ವಿನಯ್ ನಾಡಿಗರ್, ಮಂಗಳ ರವಿ, ಮಹೇಂದ್ರ ಮತ್ತು ಶುಭ ರಾಘವೇಂದ್ರ ತಂಡ ನಡೆಸಿಕೊಟ್ಟ ಸಂಗೀತ ಕಾರ್ಯಕ್ರಮ ನೆರೆದಿದ್ದವರ ಮನಸೂರೆಗೊಂಡಿತು. ನಿರೂಪಣೆಯನ್ನು ಅನುಶ್ರೀ ನೆರವೇರಿಸಿದರು.