Don't Miss!
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ಚುನಾವಣಾ ಪ್ರಚಾರದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದವರು ಯಾರು ?
ಕಳೆದ ಎರಡು ದಿನಗಳಿಂದ ಕಿಚ್ಚ ಸುದೀಪ್ ಸಿ ಎಂ ಸಿದ್ದರಾಮಯ್ಯ ಅವರ ಪರವಾಗಿ ಪ್ರಚಾರ ಮಾಡುತ್ತಾರೆ. ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಿ ಅಲ್ಲಿನ ಜನತೆಯ ಬಳಿ ಸಿದ್ದರಾಮಯ್ಯ ಅವರಿಗೆ ಮತ ಹಾಕುವಂತೆ ಮನವಿ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
ಆದರೆ ಎಲ್ಲಿಯೂ ಸುದೀಪ್ ನಾನು ಚುನಾವಣಾ ಪ್ರಚಾರದಲ್ಲಿ ಭಾಗಿ ಆಗುತ್ತೇನೆ ಎನ್ನುವುದನ್ನು ತಿಳಿಸಿಲ್ಲ. ಆದರೆ ಕಾಂಗ್ರೆಸ್ ಪಕ್ಷದ ಅಂಗಳದಲ್ಲಿ ಮಾತ್ರ ಸುದೀಪ್ ನಮ್ಮ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುತ್ತಾರೆ ಎನ್ನುವ ಮಾತಿದೆ. ಬಾದಾಮಿ ಕ್ಷೇತ್ರದಲ್ಲಿ ಸುದೀಪ್ ಸಿ ಎಂ ಪರವಾಗಿ ಪ್ರಚಾರ ಮಾಡುತ್ತಾರೆ ಎನ್ನುವುದನ್ನ ತಿಳಿದ ತಕ್ಷಣ ಅಲ್ಲಿಯ ಜನರು ಇದಕ್ಕೆ ವಿರೋಧ ವ್ಯಕ್ತ ಪಡಿಸಿದ್ದರು.
ಸಿಎಂ ಸಿದ್ದರಾಮಯ್ಯ ಪರ ಸುದೀಪ್ ಪ್ರಚಾರಕ್ಕೆ ವಿಘ್ನ
ಇವೆಲ್ಲಾ ಬೆಳವಣಿಗೆಯನ್ನ ತಿಳಿದ ಸುದೀಪ್ ಅಭಿಮಾನಿ ಸಂಘಟನೆಯ ಸದಸ್ಯರು ಈ ಬಗ್ಗೆ ಅಧಿಕೃತ ಮಾಹಿತಿಯನ್ನ ಹೊರ ಹಾಕಿದ್ದಾರೆ. ಕಿಚ್ಚ ಸುದೀಪ್ ಬಾದಾಮಿ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿ ಆಗುವುದಿಲ್ಲ ಎಂದಿದ್ದಾರೆ. ಹಾಗಾದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಾರಾ? ಈ ಪ್ರಶ್ನೆಗೆ ಇನ್ನು ಉತ್ತರ ಸಿಕ್ಕಿಲ್ಲ.
ಆದರೆ ಬಾದಾಮಿಯಲ್ಲಿ ಮಾತ್ರ ಪ್ರಚಾರ ಮಾಡುವುದಿಲ್ಲ ಎನ್ನುವುದು ಕನ್ಫರ್ಮ್ ಆಗಿದೆ. ಸುದೀಪ್ ಯಾವುದೇ ಪಕ್ಷದ ಪರವಾಗಿ ಮತಯಾಚನೆ ಮಾಡುವುದಿಲ್ಲ. ತಮಗೆ ಆತ್ಮೀಯ ಹಾಗೂ ಉತ್ತಮ ಎನ್ನಿಸುವವರ ಜೊತೆಯಲ್ಲಿ ಹೋಗಿ ಜನರಿಗೆ ಒಳ್ಳೆ ವ್ಯಕ್ತಿಗೆ ಮತ ನೀಡಿ ಎಂದು ಕೇಳಿಕೊಳ್ಳಲಿದ್ದಾರೆ.
ಶ್ರೀರಾಮುಲು ಪರ 'ಮಾಸ್ಟರ್ ಪೀಸ್' ಯಶ್ ಮತಯಾಚನೆ