Don't Miss!
- Lifestyle ಸರ್ಕಸ್ನಿಂದ ತಪ್ಪಿಸಿಕೊಂಡು ಓಡಿದ ಆನೆ..! ಆಮೇಲೆ ಆಗಿದ್ದೇನು..?
- Automobiles Tata Punch: ಟಾಟಾ ಪಂಚ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- News Eedina pre-poll Survey: ವಿಧಾನಸಭೆ ಫಲಿತಾಂಶ ನಿಖರವಾಗಿ ಕೊಟ್ಟ 'ಈದಿನ' ಸಮೀಕ್ಷೆ ಲೋಕಸಭಾ ಚುನಾವಣೆಯಲ್ಲಿ ಜೈ ಎಂದಿದ್ದು ಯಾರಿಗೆ?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Sports T20 World Cup: ಆರಂಭಿಕ ಸ್ಥಾನಕ್ಕಾಗಿ ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್ ಪೈಪೋಟಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮದಕರಿ ನಾಯಕ'ನ ನಂತರ ಮತ್ತೊಬ್ಬ ವೀರನ ಬಗ್ಗೆ ಸುದೀಪ್ ಸಿನಿಮಾ.!
Recommended Video
'ಮದಕರಿ ನಾಯಕ'ನ ಬಗ್ಗೆ ಕಿಚ್ಚ ಸುದೀಪ್ ಅವರೇ ಸಿನಿಮಾ ಮಾಡಬೇಕು ಎಂಬುದು ವಾಲ್ಮೀಕಿ ಸಮಯದಾಯದ ಸ್ವಾಮಿಗಳ ಒತ್ತಾಯ ಮತ್ತು ಬೇಡಿಕೆಯಾಗಿದೆ. ಈ ನಡುವೆ ಸುದೀಪ್ ಮತ್ತು ದರ್ಶನ್ ಇಬ್ಬರು ಮದಕರಿ ನಾಯಕನಾಗುತ್ತಿರುವುದು ವಿಶೇಷ.
ಈ ಮಧ್ಯೆ ಮದಕರಿ ನಾಯಕನ ನಂತರ ಮತ್ತೊಬ್ಬ ವೀರಾ ಹೋರಾಟಗಾರನ ಬಗ್ಗೆ ಸುದೀಪ್ ಸಿನಿಮಾ ಮಾಡಬೇಕು ಎಂಬುದು ಈಗ ಅದೇ ಸ್ವಾಮಿಜಿಗಳ ಆಸೆಯಾಗಿದೆ.
ಸುದೀಪ್-ದರ್ಶನ್ ಗೂ ಮೊದಲೇ ಈ ನಟ 'ಮದಕರಿ ನಾಯಕ' ಆಗಬೇಕಿತ್ತಂತೆ.!
ಈ ಬಗ್ಗೆ ಮಾತನಾಡಿರುವ ವಾಲ್ಮೀಕಿ ಗುರುಪೀಠದ ಪ್ರಸನಾನಂದ ಪುರಿ ಸ್ವಾಮೀಜಿ 'ಮದಕರಿ ನಾಯಕನ ಕುರಿತು ಸುದೀಪ್ ಸಿನಿಮಾ ಮಾಡಿದ್ರೆ ನಾವು ಒಪ್ಪುತ್ತೇವೆ, ಅದಲ್ಲದೇ ಬೇರೆ ಯಾರೇ ಮಾಡಿದ್ರು ನಾವು ಒಪ್ಪುವುದಿಲ್ಲ. ಅದಾದ ಬಳಿಕ ಮತ್ತೊಬ್ಬ ವೀರನ ಸಿನಿಮಾ ಬಗ್ಗೆ ಸಿನಿಮಾ ಮಾಡಲು ಸುದೀಪ್ ಜೊತೆ ಚರ್ಚೆ ಕೂಡ ಮಾಡಲಿದ್ದೇವೆ ಎಂದಿದ್ದಾರೆ.? ಅಷ್ಟಕ್ಕೂ ಆ ವೀರ ಯಾರು.? ಮುಂದೆ ಓದಿ......
ಸುದೀಪ್ 'ವೀರ ಸಿಂಧೂರ ಲಕ್ಷ್ಮಣ'
'ಮದಕರಿ ನಾಯಕ' ಚಿತ್ರವನ್ನ ಸುದೀಪ್ ಅವರೇ ಮಾಡಲಿ ಎಂಬ ಅಭಿಪ್ರಾಯದ ಬೆನ್ನಲ್ಲೆ ಸ್ವಾಮೀಜಿಗಳು ಮತ್ತೊಂದು ಆಸೆಯನ್ನ ಹೊರಹಾಕಿದ್ದಾರೆ. ಮದಕರಿ ಸಿನಿಮಾದ ನಂತರ 'ವೀರ ಸಿಂಧೂರ ಲಕ್ಷ್ಮಣ' ಅವರ ಬಗ್ಗೆ ಸುದೀಪ್ ಸಿನಿಮಾ ಮಾಡಲಿ. ಈ ಬಗ್ಗೆ ಅವರ ಜೊತೆ ನಾವು ಮಾತನಾಡುತ್ತೇವೆ ಎಂದು ವಾಲ್ಮೀಕಿ ಗುರುಪೀಠದ ಪ್ರಸನಾನಂದ ಪುರಿ ಸ್ವಾಮೀಜಿ ಹೇಳಿಕೊಂಡಿದ್ದಾರೆ.
'ಮದಕರಿ ನಾಯಕ' ಚಿತ್ರದ ಬಗ್ಗೆ ಸುದೀಪ್ ಹೇಳಿದ್ದನ್ನೇ ದರ್ಶನ್ ಹೇಳಿದ್ರಂತೆ.!
ವೀರ ಸಿಂಧೂರ ಲಕ್ಷ್ಮಣನ ಇತಿಹಾಸ
ವೀರ ಸಿಂಧೂರ ಲಕ್ಷ್ಮಣ ಒಬ್ಬ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ. ತನ್ನದೇ ಆದ ಹಿಂಸಾತ್ಮಕ ರೀತಿಯಲ್ಲಿ ಆಂಗ್ಲ ಸರಕಾರದ ವಿರುದ್ಧ ಸಮರ ಸಾರಿದ್ದ ವೀರ ಸಿಂಧೂರ ಲಕ್ಷ್ಮಣ. ಈಗಿನ ಮಾಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಸಿಂಧೂರ್ ಗ್ರಾಮದಲ್ಲಿ ಲಕ್ಷ್ಮಣ, ಸಾಬಣ್ಣ ಮತ್ತು ನರಸವ್ವ ಎಂಬ ದಂಪತಿಗಳಿಗೆ ಜನಿಸಿದರು. ಈ ದಂಪತಿಗಳ ಮೊದಲ ಸಾಕು ಮಗನ ಹೆಸರು ರಾಮ ಇದ್ದುದರಿಂದ ನಂತರ ಹುಟ್ಟಿದ ತಮ್ಮ ಸ್ವಂತ ಸಂತಾನಕ್ಕೆ ರಾಮನ ತಮ್ಮ ಲಕ್ಷ್ಮಣ ಎಂದು ಹೆಸರಿಟ್ಟಿದ್ದರು ಎಂದು ಇತಿಹಾಸದಲ್ಲಿ ಉಲ್ಲೇಖವಾಗಿದೆ.
'ಮದಕರಿ' ಚಿತ್ರಕ್ಕಾಗಿ ಸುದೀಪ್ ಮತ್ತು ರಾಕ್ ಲೈನ್ ನಡುವೆ ಆಯ್ತು ಒಪ್ಪಂದ.!
ಬ್ರಿಟಿಷರಿಗೆ ಕಾಡಿದ ಲಕ್ಷ್ಮಣ
1920ರ ಅಸುಪಾಸಿನಲ್ಲಿ ಭಾರತದಾದ್ಯಂತ ಅಸಹಕಾರ ಚಳುವಳಿ ಆವರಿಸಿದಾಗ ಲಕ್ಷ್ಮಣನು ತನ್ನದೇ ಆದ ರೀತಿಯಲ್ಲಿ ಸ್ವಾತಂತ್ರ ಹೋರಾಟದಲ್ಲಿ ತೊಡಗಿದನು. ಐದು ಜನ ಸಮಾನ ಮನಸ್ಕರನ್ನು ಜೊತೆಗೂಡಿಸಿಕೊಂಡು ಒಂದು ಗುಂಪು ರಚಿಸಿ, ಆಂಗ್ಲ ಸರಕಾರವು ಶೇಖರಿಸಿದ್ದ ತೆರಿಗೆ ಹಣವನ್ನು ಖಜಾನೆಯಿಂದ ಲೂಟಿ ಮಾಡಲು ಪ್ರಾರಂಭಿಸಿದನು.
ಅಂಬಿ ಮೇಲೆಯೂ ಬಿತ್ತು ಖದೀಮರ ಕಣ್ಣು : ವಾರ್ನಿಂಗ್ ಕೊಟ್ಟ ಕಿಚ್ಚ!
ಶ್ರೀಮಂತರ ವಿರುದ್ಧವೂ ಸಮರ ಸಾರಿದ್ದ
ಲಕ್ಷ್ಮಣ ಕೇವಲ ಆಂಗ್ಲರ ವಿರುದ್ಧವಷ್ಟೇ ಅಲ್ಲದೇ ನಿರ್ದಯಿ ಶ್ರೀಮಂತರ ಹಣವನ್ನು ಕೂಡ ದೋಚುತ್ತಿದ್ದನು. ಈ ರೀತಿ ದೋಚಿದ ಹಣವನ್ನು ತನ್ನ ಸುತ್ತ ಇರುವ ಬಡವರಿಗೆ ಹಂಚಿ ಸಹಾಯ ಮಾಡುತ್ತಿದ್ದನು. ಈ ರೀತಿ ಸಹಾಯ ಪಡೆದ ಜನರೇ ಲಕ್ಷ್ಮಣನಿಗೆ ಅಡಗುದಾಣ ಮತ್ತು ಊಟದ ವ್ಯವಸ್ಥೆಯನ್ನು ಒದಗಿಸುತ್ತಿದರು. ಲಕ್ಷ್ಮಣ ನಿಜವಾಗಿಯೂ ಬಡವರ ಬಂಧುವಾಗಿದ್ದನು. ಆದರೆ ಅವನು ಆಂಗ್ಲ ಸರಕಾರಕ್ಕೆ ತಲೆ ನೋವಾಗಿದ್ದ ಕಾರಣ ಸರಕಾರ ಅವನ ವಿರುದ್ಧ ವಾರಂಟ್ ಹೊರಡಿಸಿತ್ತು.
'ಮದಕರಿ' ಗೊಂದಲಕ್ಕೆ ಬ್ರೇಕ್ ಹಾಕಿದ ಸುದೀಪ್: ರಾಕ್ಲೈನ್-ದರ್ಶನ್ ಚಿತ್ರಕ್ಕೆ ನೋ ಪ್ರಾಬ್ಲಂ.!
ಕರ್ನಾಟಕದ ಪಾಲಿಗೆ ಐತಿಹಾಸಿಕ ವ್ಯಕ್ತಿ
ಈಗಿನ ಬಾಗಲಕೋಟೆ ಜಿಲ್ಲೆಯ ಬೀಳಗಿಯ ಹತ್ತಿರದ ತೆಗ್ಗಿಯ ವೆಂಕಪ್ಪಗೌಡರಿಗೂ ಮತ್ತು ಲಕ್ಷ್ಮಣನಿಗೂ ನಿಕಟವಾದ ಗೆಳೆತನವಿತ್ತು. ಲಕ್ಷ್ಮಣನಿಗೆ ಗೌಡರು ಸಹಾಯ ಮಾಡುವದನ್ನು ಅರಿತ ಆಂಗ್ಲರು, ಗೌಡರಿಗೆ ಸಂದಿಗ್ಧತೆಯಲ್ಲಿ ಸಿಲುಕಿಸಿ ಲಕ್ಷ್ಮಣನನ್ನು ಸೆರೆ ಹಿಡಿಯವ ಅಥವಾ ಕೊಲೆಗಯ್ಯುವ ಅನಿವಾರ್ಯ ಪರಿಸ್ಥಿತಿಯನ್ನು ನಿರ್ಮಿಸಿದರು. ಲಕ್ಷ್ಮಣನ ಜೊತೆ ಹೋರಾಡಿ ಗೆಲ್ಲುವದು ಅಸಾಧ್ಯವೆಂದು ಅರಿತ ಗೌಡರ ವಾಲಿಕಾರರು, ಅವನನ್ನು ಹತ್ಯೆ ಮಾಡುವ ಸಂಚನ್ನು ರೂಪಿಸಿದರು.
100 ಕೋಟಿ ಬಜೆಟ್ ಚಿತ್ರಕ್ಕೆ ಪ್ರಿಯಾ ಸುದೀಪ್ ನಿರ್ಮಾಪಕಿ!
ಮೋಸಕ್ಕೆ ಬಲಿಯಾಗಿದ್ದ ವೀರಾ
1922ರ ಮಣ್ಣೇತ್ತಿನ ಅಮಾವಾಸ್ಯೆಯ ದಿನ ಲಕ್ಷ್ಮಣ ಮತ್ತು ಅವನ ಸಂಗಡಿಗರಿಗೆ ಔತಣದ ಬಿನ್ನಹ ನೀಡಿದರು. ಲಕ್ಷ್ಮಣನು ಊಟ ಮಾಡುವಾಗ ಮೊದಲೇ ಮರೆಯಲ್ಲಿ ಅವಿತು ಕೂತಿದ್ದ ಬಂದೂಕುಧಾರಿ, ಲಕ್ಷ್ಮಣನ ಮುಂದೆ ಕಂದೀಲಿನ ನಿಶಾನೆ ಮಾಡಿದ ತಕ್ಷಣ ಗುಂಡು ಹಾರಿಸಿದನು. ಮೋಸದಿಂದ ಗುಂಡು ತಾಗಿದುದರಿಂದ ವೀರ ಸಿಂಧೂರ ಲಕ್ಷ್ಮಣ ಹತನಾದನು. ತನ್ನ ತರುಣ ವಯಸ್ಸಿನಲ್ಲಿಯೇ ಹುತಾತ್ಮನಾದ ಲಕ್ಷ್ಮಣ ಜನರ ಮನದಲ್ಲಿ ಅಮರನಾದನು. ಸಿಂಧೂರ ಲಕ್ಷ್ಮಣನನ್ನು ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಈಗಲೂ ಕೂಡ ಒಬ್ಬ ಜನಪ್ರಿಯ ಬಂಡಾಯ ನಾಯಕನಂತೆ ಜನ ನೆನೆಯುತ್ತಾರೆ.
ಆಲ್ ರೆಡಿ ಸಿನಿಮಾ ಬಂದಿದೆ
ಹುಣುಸೂರು ಕೃಷ್ಣಮೂರ್ತಿ ಅವರು 1977ರಲ್ಲೇ ಸಿಂಧೂರ ಲಕ್ಷ್ಣಣ ಅವರ ಕುರಿತು ''ವೀರಾ ಸಿಂಧೂರ ಲಕ್ಷ್ಣಣ'' ಸಿನಿಮಾ ಮಾಡಿದ್ದಾರೆ. ಬಸವರಾಜು, ಕೆಎಸ್ ಅಶ್ವತ್ಥ, ಸುಧೀರ್, ವಜ್ರಮುನಿ ಸೇರಿದಂತೆ ಹಲವರು ಅಭಿನಯಿಸಿದ್ದರು.