Don't Miss!
- News ಕಾಂಗ್ರೆಸ್ ಸರ್ಕಾರ ನೀಡಿತ್ತು ಖಾಲಿ ಚೊಂಬು; ಮೋದಿ ಅದನ್ನು ಅಕ್ಷಯವನ್ನಾಗಿಸಿದ್ದಾರೆ: ಎಚ್ಡಿಡಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೂನ್ ತಿಂಗಳಲ್ಲೇ ಕಿಚ್ಚ ಸುದೀಪ್ ಹೊಸ ಚಿತ್ರ
ಇದೊಂದು ಹೊಸ ಪ್ರಾಜೆಕ್ಟ್ ಆಗಿದ್ದು ಸುದೀಪ್ ಅವರೇ ಸ್ವತಃ ಕಥೆಯನ್ನು ಆಯ್ಕೆ ಮಾಡಿದ್ದಾರಂತೆ. ಚಿತ್ರಕ್ಕೆ ಬಂಡವಾಳ ಹೂಡುತ್ತಿರುವವರು ಎಂಎನ್ ಕುಮಾರ್. ಇದೊಂದು ಹಳೆಯ ಕಮಿಟ್ ಮೆಂಟ್. ಈಗ ಅದಕ್ಕೆ ರೆಕ್ಕೆಪುಕ್ಕ ಬಂದಿದೆ.
ಕುಮಾರ್ ನಿರ್ಮಾಣದಲ್ಲಿ ಚಿತ್ರ ಮಾಡುವುದಾಗಿ ಸುದೀಪ್ ಜೊತೆ ಮಾತುಕತೆಯಾಗಿತ್ತಂತೆ. ಆದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಿರಲಿಲ್ಲ. ಈಗ ಶುಭ ಮುಹೂರ್ತ ಕೂಡಿಬಂದಿದೆ. ಇನ್ನೇನು 'ಬಿಗ್ ಬಾಸ್' ಕಾರ್ಯಕ್ರಮ ಮುಗಿಯುತ್ತದೆ. ಅದಾದ ಬಳಿಕ ಈ ಹೊಸ ಚಿತ್ರ ಸೆಟ್ಟೇರುತ್ತಿದೆ.
ತಾಂತ್ರಿಕ ಬಳಗ ಹಾಗೂ ಇತರೆ ಕಲಾವಿದರ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಶೀರ್ಷಿಕೆಯೂ ಇನ್ನೂ ಅಂತಿಮವಾಗಿಲ್ಲ. ಸದ್ಯಕ್ಕೆ ಸುದೀಪ್ ಅತ್ತ ಕಿರುತೆರೆ ಇತ್ತ ಕನ್ನಡ, ಇನ್ನೊಂದು ಕಡೆ ತೆಲುಗು ಚಿತ್ರರಂಗದಲ್ಲಿ ಬಿಜಿಯಾಗಿದ್ದಾರೆ.
ಇನ್ನು ಸುದೀಪ್ ಅಭಿನಯದ 'ಬಚ್ಚನ್' ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭಾರಿ ಸದ್ದು ಮಾಡುವುದರ ಜೊತೆಗೆ ಐವತ್ತು ದಿನಗಳನ್ನು ಪೂರೈಸಿದೆ. ಉದಯ್ ಕೆ ಮೆಹ್ತಾ ನಿರ್ಮಾಣದ ಚಿತ್ರ ಈ ವರ್ಷದ ಹಿಟ್ ಚಿತ್ರಗಳ ಸಾಲಿಗೆ ಸೇರಿದ್ದು 20 ಚಿತ್ರಮಂದಿರಗಳಲ್ಲಿ ಅರ್ಧ ಸೆಂಚುರಿ ಬಾರಿಸಿದೆ. ಬಚ್ಚನ್ ಚಿತ್ರದ ವಿಮರ್ಶೆ ಓದಿ. (ಏಜೆನ್ಸೀಸ್)