Don't Miss!
- News ಮಳೆ.. ಮಳೆ.. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆ!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೂರು ನಾಯಕರು ಬೇಡವೆಂದಿದ್ದ 'ಹುಚ್ಚ' ಸಿನಿಮಾ ಸುದೀಪ್ ಜೀವನ ಬದಲಾಯಿಸಿತು!
ಸುದೀಪ್ ಮೊದಲು ನಾಯಕನಟನಾಗಿ ನಟಿಸಿದ ಸಿನಿಮಾ ಸ್ಪರ್ಷ. ಆ ಸಿನಿಮಾ ಅವರಿಗೆ ಗುರುತು ತಂದುಕೊಟ್ಟಿತಾದರೂ ಅದೇ ಸಮಯದಲ್ಲಿ ನಡೆದ ರಾಜ್ಕುಮಾರ್ ಅಪಹರಣದಿಂದಾಗಿ ಸಿನಿಮಾ ಚಿತ್ರಮಂದಿರಗಳಲ್ಲಿ ಹಿಟ್ ಎನಿಸಿಕೊಳ್ಳಲಿಲ್ಲ.
Recommended Video
ಸ್ಪರ್ಷ ಸಿನಿಮಾ ಬಗ್ಗೆ ಸಾಕಷ್ಟು ಒಳ್ಳೆಯ ಮಾತುಗಳು ಕೇಳಿಬಂದಿದ್ದವು. ಸುದೀಪ್ ನಟನೆ ಬಗ್ಗೆ ಸಹ ಮೆಚ್ಚುಗೆ ವ್ಯಕ್ತಪಡಿಸಲಾಯಿತು. ಆದರೇನು ಮಾಡುವುದು ಸಿನಿಮಾ ಓಡಲಿಲ್ಲ. ಅದಕ್ಕೆ ದುರಾದೃಷ್ಟವೊಂದೇ ಕಾರಣವಾಗಿತ್ತು.
ಇಂಥಹಾ ಸಮಯದಲ್ಲಿ ಸುದೀಪ್ಗೆ ಮಾಸ್ ಹೀರೋ ಲುಕ್ ಜೊತೆಗೆ ಸುದೀಪ್ ಎಲ್ಲ ರೀತಿಯ ಪಾತ್ರಗಳನ್ನೂ ಸಹ ನಿರ್ವಹಿಸಬಲ್ಲ ನಟ ಎಂದು ಚಿತ್ರರಂಗಕ್ಕೆ ತೋರಿಸಿಕೊಟ್ಟ ಸಿನಿಮಾ ಹುಚ್ಚ. ಆ ಸಿನಿಮಾದ ಕ್ರೇಜ್ ಈಗಲೂ ಚಾಲ್ತಿಯಲ್ಲಿದೆ. ಆ ಸಿನಿಮಾದ ಮೂಲಕವೇ ಸುದೀಪ್ ಹೆಸರಿನ ಮುಂದೆ 'ಕಿಚ್ಚ' ಉಪನಾಮ ಸೇರಿಕೊಂಡಿದ್ದು.
ಸುದೀಪ್ ಸಿನಿಮಾ ಜೀವನವನ್ನೇ ಬದಲಾಯಿಸಿದ ಹುಚ್ಚ ಸಿನಿಮಾದ ನಾಯಕನ ಪಾತ್ರಕ್ಕೆ ಸುದೀಪ್ ಮೊದಲ ಆಯ್ಕೆ ಆಗಿರಲಿಲ್ಲವೆಂದರೆ ನೀವು ನಂಬಲೇಬೇಕು. ಮೂವರು ಹೀರೋಗಳನ್ನು ದಾಟಿ ಆ ಸಿನಿಮಾ ಸುದೀಪ್ ಕೈಗೆ ಬಂತು. ಯಾರು ಆ ಹೀರೋಗಳು?
ಫೋಟೋ ಶೂಟ್ ಸಹ ಮಾಡಿಸಿಬಿಟ್ಟಿದ್ದರು!
ನಿರ್ಮಾಪಕ ಶಿಲ್ಪಾ ಶ್ರೀನಿವಾಸ್ ಅವರು ತಮಿಳಿನ ಸೇತು ಸಿನಿಮಾದ ಹಕ್ಕುಗಳನ್ನು ಖರೀದಿಸಿದ್ದರು. ತಾವೇ ನಾಯಕರಾಗಿ ನಟಿಸಲು ಸಹ ನಿರ್ಧರಿಸಿ ತಲೆ ಬೋಡು ಹೊಡೆಸಿ ಫೋಟೋ ಶೂಟ್ ಸಹ ಮಾಡಿಬಿಟ್ಟಿದ್ದರು. ಆದರೆ ಅವರಿಗೆ ಆಪ್ತರಾಗಿದ್ದ ನಿರ್ಮಾಪಕ ರೆಹಮಾನ್ ಬೈದ ಮೇಲೆ ಹಕ್ಕುಗಳನ್ನು ರೆಹಮಾನ್ಗೆ ಮಾರಿದರು ಶಿಲ್ಪಾ ಶ್ರೀನಿವಾಸ್.
ಶಿವರಾಜ್ ಕುಮಾರ್ ಮನೆಗೆ ಮೊದಲ ಭೇಟಿ
ಹಕ್ಕು ಖರೀದಿಸಿದ ರೆಹಮಾನ್, ಮೊದಲಿಗೆ ಭೇಟಿ ಕೊಟ್ಟಿದ್ದು ಶಿವರಾಜ್ ಕುಮಾರ್ ಮನೆಗೆ. ತಮಿಳು ಸಿನಿಮಾವನ್ನು ನೋಡಿದ ಗೀತಾ ಶಿವರಾಜ್ ಕುಮಾರ್. ನಮ್ಮವರ ಮೇಲೆ ನಿಮಗೆ ಸಿಟ್ಟೇ ಎಂದು ಬೈದರಂತೆ ನಿರ್ಮಾಪಕ ರೆಹಮಾನ್ಗೆ. ಅರ್ಧ ಸಿನಿಮಾ ಆದಮೇಲೆ ಶಿವಣ್ಣ ಗುಂಡು ಹೊಡೆಸಿಕೊಂಡು ಹುಚ್ಚನಂತಾದರೆ ಅಭಿಮಾನಿಗಳು ಸುಮ್ಮನಿರ್ತಾರಾ? ಎಂದು ಸಿನಿಮಾವನ್ನು ನಿರಾಕರಿಸಿದರಂತೆ ಗೀತಾ ಶಿವರಾಜ್ಕುಮಾರ್.
ಟೈಟಲ್ ಒಪ್ಪಿಕೊಳ್ಳಲಿಲ್ಲವಂತೆ ಉಪೇಂದ್ರ
ರೆಹಮಾನ್ ನಂತರ ಹೋಗಿದ್ದು ಉಪೇಂದ್ರ ಬಳಿ. ಹೈದರಾಬಾದ್ನಲ್ಲಿದ್ದ ಉಪೇಂದ್ರ ಸೇತು ರೀಮೇಕ್ ಎಂದ ಕೂಡಲೇ ಸಿನಿಮಾ ಮಾಡಲು ಒಪ್ಪಿದರಂತೆ. ಆದರೆ ಹುಚ್ಚ ಟೈಟಲ್ ಬದಲಾಯಿಸಬೇಕು ಎಂಬ ಷರತ್ತು ಹಾಕಿದ್ದಾರೆ. ಇದಕ್ಕೆ ಒಪ್ಪದ ರೆಹಮಾನ್ ಅಲ್ಲಿಂದಲೂ ವಾಪಸ್ ಬಂದು. ಸಿನಿಮಾ ಮಾಡುವುದೇ ಬೇಡವೆಂದು ಸುಮ್ಮನಾಗಿಬಿಟ್ಟಿದ್ದರಂತೆ.
ಸುದೀಪ್ ತಂದೆಗೆ ಹೇಳಿದ್ದರು ರೆಹಮಾನ್
ಆ ವೇಳೆಗೆ ರಾಜ್ಕುಮಾರ್ ಅಪಹರಣದ ಸಂದಂರ್ಭ ಸಿನಿಮಾ ನಟ-ನಿರ್ಮಾಪಕರೆಲ್ಲರೂ ಪ್ರತಿಭಟನೆ ಮಾಡುವಾಗ ಸುದೀಪ್ ಅವರ ತಂದೆ ಸಿಕ್ಕಾಗ, ನಿಮ್ಮ ಮಗನನ್ನು ಹಾಕಿಕೊಂಡು ಸಿನಿಮಾ ಮಾಡುತ್ತೇನೆ ಎಂದರಂತೆ ರೆಹಮಾನ್. ಸ್ಪರ್ಷ ಸಿನಿಮಾ ಮೆಚ್ಚಿಕೊಂಡಿದ್ದರಂತೆ ರೆಹಮಾನ್.
ಎಸ್.ಮಹೇಂದರ್ ನಿರ್ದೇಶಿಸಬೇಕಿದ್ದ ಸಿನಿಮಾ
ಎಸ್.ಮಹೇಂದರ್ ಆ ಸಿನಿಮಾ ನಿರ್ದೇಶಿಸಬೇಕೆಂದು 3.50 ಲಕ್ಷ ಅಡ್ವಾನ್ಸ್ ಸಹ ಕೊಟ್ಟಿದ್ದರು ರೆಹಮಾನ್. ಆದರೆ ಸುದೀಪ್ ಒತ್ತಾಯದ ಮೇರೆಗೆ ಓಂ ಪ್ರಕಾಶ್ ರಾವ್ ಅವರಿಗೆ ನಿರ್ದೇಶನದ ಜವಾಬ್ದಾರಿ ನೀಡಲಾಯಿತು. ಚೆನ್ನಾಗಿ ವಾರ್ನಿಂಗ್ ಕೊಟ್ಟ ನಂತರವೇ ಓಂ ಪ್ರಕಾಶ್ ರಾವ್ ಗೆ ನಿರ್ದೇಶನ ಮಾಡುವ ಅವಕಾಶ ಕೊಡಲಾಯಿತಂತೆ. ಸಿನಿಮಾದ ಎಲ್ಲಾ ನಟ-ನಟಿಯರನ್ನೂ ನಿರ್ಮಾಪಕರೇ ಆಯ್ಕೆ ಮಾಡಿದರಂತೆ.
ಸಿನಿಮಾ ಪಕ್ಕಾ ಫ್ಲಾಫ್ ಎಂದಿದ್ದರಂತೆ
ಹಲವಾರು ಅಡೆ-ತಡೆಗಳ ನಡುವೆ ಚಿತ್ರೀಕರಣ ಪ್ರಾರಂಭವಾಯಿತು ಹಾಗೂ ಸಾಗಿತು ಕೂಡ. ಸಿನಿಮಾ ಖಂಡಿತ ಫ್ಲಾಪ್ ಆಗುತ್ತದೆ ಎಂದೇ ಎಲ್ಲರೂ ಮಾತನಾಡಿಕೊಂಡಿದ್ದರಂತೆ. ಆದರೆ ಎಲ್ಲರ ನಿರೀಕ್ಷೆ ಹುಸಿ ಮಾಡಿ ಸಿನಿಮಾ ಸೂಪರ್ ಡೂಪರ್ ಹಿಟ್ ಆಯಿತು. ಸುದೀಪ್ ಎಂಬ ಹೊಸ ಸೂಪರ್ ಸ್ಟಾರ್ ಕನ್ನಡಕ್ಕೆ ಸಿಕ್ಕಿಬಿಟ್ಟರು.