Don't Miss!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- News Snake Video: ವಿಮಾನದಲ್ಲಿ ಹಾವು ಬಿಟ್ಟ ವ್ಯಕ್ತಿ: ಬೆಂಗಳೂರಿನಲ್ಲಿ ಬಂಧನ- ಶಿವಪುರಿಯಲ್ಲಿ ಅಪರೂಪದ ಹಾವು ಪತ್ತೆ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಾಣಿಕ್ಯ' ಬಳಿಕ ನಲ್ಲ-ಮಲ್ಲರ 'ಅಪೂರ್ವ' ಸಂಗಮ
ಕಿಚ್ಚ ಸುದೀಪ್ ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ ಜೋಡಿಯ 'ಮಾಣಿಕ್ಯ' ಚಿತ್ರ ಬಾಕ್ಸಾಫೀಸಲ್ಲಿ ಭಾರಿ ಸದ್ದು ಮಾಡಿದ್ದು ಗೊತ್ತೇ ಇದೆ. ಆ ಚಿತ್ರದಲ್ಲಿ ಇದೇ ಮೊದಲ ಬಾರಿಗೆ ಸುದೀಪ್ ಗೆ ತಂದೆಯಾಗಿ ರವಿಚಂದ್ರನ್ ಕಾಣಿಸಿಕೊಂಡಿದ್ದರು. ಇವರಿಬ್ಬರ ಕಾಂಬಿನೇಷನನ್ನು ಪ್ರೇಕ್ಷಕರು ಇಷ್ಟಪಟ್ಟರು.
ಇದೀಗ ಮತ್ತೊಮ್ಮೆ ನಲ್ಲ-ಮಲ್ಲರು ಕೈಜೋಡಿಸುತ್ತಿದ್ದಾರೆ. ಆಗ 'ಮಾಣಿಕ್ಯ' ಚಿತ್ರದಲ್ಲಿ ಅಭಿನಯಿಸಲು ರವಿಚಂದ್ರನ್ ಅವರಿಗೆ ಸುದೀಪ್ ಆಹ್ವಾನಕೊಟ್ಟಿದ್ದರು. ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ರವಿ ಅವರ ಪಾತ್ರಕ್ಕೆ ಹೆಚ್ಚಿನ ಗಮನ ಕೊಡಲಾಗಿತ್ತು. [ಮಾಣಿಕ್ಯ ಚಿತ್ರ ವಿಮರ್ಶೆ]
ಇದೀಗ ರವಿಚಂದ್ರನ್ ಅವರು ಸುದೀಪ್ ಅವರಿಗೆ ತಮ್ಮ ಚಿತ್ರದಲ್ಲಿ ಅಭಿನಯಿಸಲು ಆಹ್ವಾನಕೊಟ್ಟಿದ್ದಾರೆ. ತಮ್ಮ ನಿರ್ದೇಶನದ 'ಅಪೂರ್ವ' ಚಿತ್ರದಲ್ಲಿ ನಲ್ಲನಿಗೆ ವಿಶೇಷ ಪಾತ್ರ ಕೊಟ್ಟಿದ್ದಾರೆ. ಎಲ್ಲವೂ ಅಂದುಕೊಂಡಿದ್ದರೆ ಒಂದೂವರೆ ವರ್ಷದ ಹಿಂದೆಯೇ ಸೆಟ್ಟೇರಬೇಕಾಗಿದ್ದ ಚಿತ್ರ ಇದು.
ಈಗ ಎಲ್ಲವೂ ಪಕ್ಕಾ ಸಿದ್ಧಮಾಡಿಕೊಂಡು ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಿದೆ. ಸುದೀಪ್ ಅವರು ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಲಿದ್ದಾರೆ. ಲಿಫ್ಟ್ ಒಂದರಲ್ಲಿ ನಡೆಯುವ ಕಥೆ ಇದಾಗಿದ್ದು, ಕೇವಲ ಎರಡೇ ಎರಡು ಪಾತ್ರಗಳ ನಡುವೆ 'ಅಪೂರ್ವ' ಕಥೆ ಸಾಗುತ್ತದೆ.
ಚಿತ್ರದಲ್ಲಿ ರವಿಚಂದ್ರನ್ ಅವರು 64 ವರ್ಷದ ವ್ಯಕ್ತಿಯಾಗಿ ಕಾಣಿಸಲಿದ್ದಾರೆ. ಅವರ ಮನೆಯಲ್ಲೇ ಲಿಫ್ಟ್ ಸೆಟ್ ಹಾಕಿ ಚಿತ್ರೀಕರಿಸಲಾಗುತ್ತಿದೆ. ಈ ರೀತಿಯ ಚಿತ್ರ ನಾನು ಹಿಂದೆ ಮಾಡಿಲ್ಲ ಮುಂದೆ ಮಾಡುತ್ತೇನೆ ಎಂಬ ನಂಬಿಕೆ ಇಲ್ಲ ಎನ್ನುವ ರವಿ, ಚಿತ್ರ ನೋಡಿದರೆ ನೀವು ಥಿಯೇಟರ್ ನಿಂದ ಹೊರ ಬರುವ ಮನಸ್ಸು ಬರಲ್ಲ. ಪ್ರೇಕ್ಷಕರ ಕಣ್ಣಂಚಲಿ ನೀರಿರುತ್ತದೆ. ಹಾಗಂತ ಇದು ಕಣ್ಣೀರಧಾರೆ ಕಥೆ ಎಂದುಕೊಳ್ಳಬೇಡಿ ಎನ್ನುತ್ತಾರೆ ರವಿಮಾಮ. (ಏಜೆನ್ಸೀಸ್)