Don't Miss!
- News ಮಳೆ.. ಮಳೆ.. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆ!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲುಗು ಸಿನಿಮಾ ಮಾಡಿ ಎಂದ ಅಭಿಮಾನಿಗೆ ಸುದೀಪ್ ಏನಂದ್ರು.?
ಕಿಚ್ಚ ಸುದೀಪ್ ಅವರಿಗೆ ಕರ್ನಾಟಕದಲ್ಲಿ ಮಾತ್ರವಲ್ಲ, ತಮಿಳುನಾಡು, ಆಂಧ್ರ, ತೆಲಂಗಾಣಗಳಲ್ಲೂ ಅಭಿಮಾನಿಗಳಿದ್ದಾರೆ. ತಮಿಳು ಮತ್ತು ತೆಲುಗು ಭಾಷೆಯಲ್ಲೂ ಸುದೀಪ್ ಅಭಿನಯಿಸಿ ಅಭಿಮಾನ ಗಳಿಸಿದ್ದಾರೆ.
ಸಾಮಾನ್ಯವಾಗಿ ಸುದೀಪ್ ಅವರ ಸಿನಿಮಾ ಬಂದಿಲ್ಲವಂದ್ರೆ ಸ್ಯಾಂಡಲ್ ವುಡ್ ಅಭಿಮಾನಿಗಳು ಕಿಚ್ಚನನ್ನ ಮಿಸ್ ಮಾಡಿಕೊಳ್ಳುತ್ತಾರೆ. ಆದ್ರೆ, ತೆಲುಗು ಫ್ಯಾನ್ಸ್ ಕೂಡ ಸುದೀಪ್ ಅವರ ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿ ಸಿಕ್ಕಿದೆ.
ಹೌದು, ತೆಲುಗು ಅಭಿಮಾನಿಯೊಬ್ಬ ಕಿಚ್ಚನಿಗೆ ಟ್ವೀಟ್ ಮಾಡಿದ್ದು, ''ಸುದೀಪ್ ಅಣ್ಣ ನಾನು ಆಂಧ್ರದವರು. ನಿಮ್ಮ ಸಿನಿಮಾಗಳನ್ನ ಹೆಚ್ಚು ಇಷ್ಟ ಪಡ್ತೀನಿ. ಅದರಲ್ಲೂ 'ಹೆಬ್ಬುಲಿ' ಅಂದ್ರೆ ತುಂಬ ಇಷ್ಟ. ದಯವಿಟ್ಟು ತೆಲುಗು ಸಿನಿಮಾ ಮಾಡಿ. ನಾವು ನಿಮ್ಮನ್ನ ಮತ್ತು ನಿಮ್ಮ ಧ್ವನಿಯನ್ನ ಹೆಚ್ಚು ಮಿಸ್ ಮಾಡಿಕೊಳ್ಳುತ್ತಿದ್ದೇವೆ'' ಎಂದು ಕೇಳಿಕೊಂಡಿದ್ದಾರೆ.
ಶಿವಣ್ಣ-ಅಪ್ಪು-ಸುದೀಪ್-ದರ್ಶನ್ ಈ ಗುಣಗಳನ್ನ ಬದಲಿಸಿಕೊಳ್ಳಬೇಕಂತೆ.!
ಇದಕ್ಕೆ ಪ್ರತಿಕ್ರಿಯಿಸಿರುವ ಸುದೀಪ್ ''ಒಳ್ಳೆ ಸ್ಕ್ರಿಪ್ಟ್ ಸಿಕ್ಕರೇ ಖಂಡಿತವಾಗಿಯೂ ತೆಲುಗು ಸಿನಿಮಾ ಮಾಡುತ್ತೇನೆ'' ಎಂದು ಅಭಿಮಾನಿಯ ಮನವಿಗೆ ಉತ್ತರಿಸಿದ್ದಾರೆ.
ಕಿಚ್ಚನಿಗೆ ಪೈಪೋಟಿ ನೀಡಿದ 'ಸೂಪರ್ ಸ್ಟಾರ್': ಸುದೀಪ್ ಫುಲ್ ಫಿದಾ
Wil surely do the moment I get a good script my friend. Thank u https://t.co/j1h6WIRbky
— Kichcha Sudeepa (@KicchaSudeep) March 22, 2018
ಎಸ್.ಎಸ್ ರಾಜಮೌಳಿ ನಿರ್ದೇಶನದ 'ಈಗ' ಚಿತ್ರದ ಮೂಲಕ ತೆಲುಗು ಸಿನಿರಂಗ ಪ್ರವೇಶಿಸಿದ್ದ ಸುದೀಪ್ ನಂತರ 'ಬಾಹುಬಲಿ ದಿ ಬಿಗಿನಿಂಗ್' ಚಿತ್ರದಲ್ಲಿ ವಿಶೇಷ ಪಾತ್ರ ನಿರ್ವಹಿಸಿದ್ದರು. 'ಕೋಟಿಗೊಬ್ಬ-2' ಸಿನಿಮಾ ತೆಲುಗಿನಲ್ಲಿ ಡಬ್ಬಿಂಗ್ ಆಗಿ ಯಶಸ್ಸು ಕಂಡಿತ್ತು. ಇದೀಗ, ಮೆಗಾಸ್ಟಾರ್ ಚಿರಂಜೀವಿ ಅವರ 151ನೇ ಚಿತ್ರ 'ಸೈರಾ ನರಸಿಂಹ ರೆಡ್ಡಿ'ಯಲ್ಲಿ ಸುದೀಪ್ ಅಭಿನಯಿಸುತ್ತಿದ್ದಾರೆ ಎನ್ನಲಾಗಿದೆ.