Don't Miss!
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಹೋದರನಂತಿದ್ದ ಚಿರು ಸರ್ಜಾರನ್ನು ಸ್ಮರಿಸಿದ ಕಿಚ್ಚ ಸುದೀಪ್
ದಿವಂಗತ ನಟ ಚಿರಂಜೀವಿ ಸರ್ಜಾ ಅವರಿಗೆ ಇಂದು ಹುಟ್ಟುಹಬ್ಬ. ಚಿರು ಇದ್ದಿದ್ರೆ ಸರ್ಜಾ ಕುಟುಂಬದಲ್ಲಿ ಹಾಗೂ ಅಭಿಮಾನಿ ವಲಯದಲ್ಲಿ ಬಹಳ ದೊಡ್ಡ ಮಟ್ಟದ ಸಂಭ್ರಮ ನಡೆಯುತ್ತಿತ್ತು. ವಿಧಿಯ ಆಟ ಚಿರು ಈಗಿಲ್ಲ. ಆದ್ರೆ, ಅವರ ಜೊತೆಗಿನ ನೆನಪು ಹಾಗೂ ಅವರ ಬಿಟ್ಟು ಹೋದ ನೆನಪುಗಳು ಎಲ್ಲರನ್ನು ಕಾಡಿದೆ. ಅದರಲ್ಲೂ ತುಂಬಾ ಆತ್ಮೀಯವಾಗಿದ್ದ ವ್ಯಕ್ತಿಗಳು ಚಿರು ಸರ್ಜಾ ಅವರನ್ನು ಈ ಸಂದರ್ಭದಲ್ಲಿ ಹೆಚ್ಚು ಮಿಸ್ ಮಾಡಿಕೊಳ್ಳುತ್ತಿದ್ದಾರೆ.
ಸಹೋದರನಂತಿದ್ದ ಚಿರು ಸರ್ಜಾ ಅವರನ್ನು ಕಿಚ್ಚ ಸುದೀಪ್ ಸ್ಮರಿಸಿಕೊಂಡಿದ್ದಾರೆ. ಚಿರಂಜೀವಿ ಸರ್ಜಾ ಅವರಿಗೆ ಬೆನ್ನೆಲುಬಾಗಿ ನಿಂತಿದ್ದವರಲ್ಲಿ ನಟ ಸುದೀಪ್ ಸಹ ಒಬ್ಬರು. ತನ್ನ ಸಿನಿಮಾದಲ್ಲಿ ಅವಕಾಶ ಕೊಟ್ಟರು. ಚಿರುಗಾಗಿ ಸಿನಿಮಾ ಮಾಡಿದ್ರು. ಮುಂದೆ ಓದಿ...
ಚಿರಂಜೀವಿ ಸರ್ಜಾ ಇಲ್ಲದ ಸಮಯದಲ್ಲಿ ಕಾಡುವ 'ದಿ ಬೆಸ್ಟ್' ಹಾಡುಗಳು
ಲವ್ ಯೂ ಸಹೋದರ
ಚಿರಂಜೀವಿ ಸರ್ಜಾ ಹುಟ್ಟುಹಬ್ಬದ ಹಿನ್ನೆಲೆ ಟ್ವಿಟ್ಟರ್ ಮೂಲಕ ಶುಭಕೋರಿರುವ ಸುದೀಪ್ ''ಅವರನ್ನು ಪ್ರೀತಿಸುತ್ತಿದ್ದ ಮತ್ತು ಅವರ ಬಗ್ಗೆ ತಿಳಿದಿದ್ದ ಎಲ್ಲರೂ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಸದಾ ನಗುತ್ತಿದ್ದ ವ್ಯಕ್ತಿ ಹಾಗೂ ವಿಷಯಗಳನ್ನು ಬಹಳ ಚೆನ್ನಾಗಿ ಸ್ವೀಕರಿಸುತ್ತಿದ್ದ. ಸ್ವರ್ಗದಲ್ಲಿ ಸ್ಥಾನ ಪಡೆದುಕೊಂಡಿದ್ದು, ಶಾಂತಿಯಿಂದ ನೆಲೆಸಿದ್ದಾನೆ ಎಂದು ನಂಬಿದ್ದೇನೆ. ಲವ್ ಯೂ ಸಹೋದರ'' ಎಂದು ಸುದೀಪ್ ಸ್ಮರಿಸಿಕೊಂಡಿದ್ದಾರೆ.
ಚಿರುಗಾಗಿ ವರದ ನಾಯಕ ಮಾಡಿದ್ದರು
ಸುದೀಪ್ ನಟಿಸಿದ್ದ 'ಕೆಂಪೇಗೌಡ' ಚಿತ್ರದಲ್ಲಿ ಸಣ್ಣದೊಂದು ಪಾತ್ರ ಮಾಡಿದ್ದರು ಚಿರು ಸರ್ಜಾ. ನಂತರ ಚಿರು ಸರ್ಜಾ ನಾಯಕನಾಗಿದ್ದ 'ವರದನಾಯಕ' ಚಿತ್ರದಲ್ಲಿ ಸುದೀಪ್ ಪ್ರಮುಖ ಪಾತ್ರ ಮಾಡಿದ್ದರು.
ಸಹೋದರನಂತರ ಕಂಡರು
ವೈಯಕ್ತಿಕವಾಗಿ ಸುದೀಪ್ ಮತ್ತು ಚಿರಂಜೀವಿ ಸರ್ಜಾ ಇಬ್ಬರು ಸಹೋದರರಂತಿದ್ದರು. ಸಿನಿಮಾ ಬಿಟ್ಟು ಸುದೀಪ್ ಅವರ ಜೊತೆಯಲ್ಲಿ ಬರ್ತಡೇ, ಸೆಲೆಬ್ರೆಷನ್, ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದರು.
Recommended Video
ಸಿಸಿಎಲ್ನಲ್ಲಿ ಆಡಿದರು
ಸಿಸಿಎಲ್ ಟೂರ್ನಿಯಲ್ಲಿ ಕಿಚ್ಚ ಸುದೀಪ್ ಸಾರಥ್ಯದ ಕರ್ನಾಟಕ ಬುಲ್ಡೋಜರ್ಸ್ ತಂಡದಲ್ಲಿ ಚಿರಂಜೀವಿ ಸರ್ಜಾ ಸಹ ಆಟಗಾರನಾಗಿ ಆಡಿದ್ದಾರೆ. ಕ್ರಿಕೆಟ್ ಮೇಲೆ ಹೆಚ್ಚು ಆಸಕ್ತಿ ಹೊಂದಿದ್ದ ಚಿರು ಸಿಸಿಎಲ್ನ ಹಲವು ಸೀಸನ್ನಲ್ಲಿ ಪಾಲ್ಗೊಂಡಿದ್ದರು.