Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬರೀಶ್ ಪುಣ್ಯಸ್ಮರಣೆ; ಅಂಬಿ ಮಾಮನನ್ನು ನೆನೆದ ಕಿಚ್ಚ ಸುದೀಪ್
ನಟ, ರೆಬಲ್ ಸ್ಟಾರ್ ಅಂಬರೀಶ್ ಅವರ ಎರಡನೇ ವರ್ಷದ ಪುಣ್ಯ ತಿಥಿಯನ್ನು ಇಂದು (ನವೆಂಬರ್ 24) ನೆರವೇರಿಸಲಾಗಿದೆ. ಇಂದು ಚಿತ್ರರಂಗದ ಅನೇಕ ಗಣ್ಯರು ಅಂಬರೀಶ್ ನೆನೆದು ಭಾವುಕ ಟ್ವೀಟ್ ಮಾಡಿದ್ದಾರೆ. ಪ್ರೀತಿಯ ಅಂಬಿಮಾಮನ ಬಗ್ಗೆ ನಟ ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
Recommended Video
'ನಿಮ್ಮ ಬಗ್ಗೆ ಏನೇ ಹೇಳಿದ್ರು ಕಡಿಮೆ ಆಗುತ್ತೆ ಮಾಮ. ನಿಮ್ಮ ಸುತ್ತ ಇದ್ದ ಪ್ರತಿಯೊಬ್ಬರು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ. ನಿಮ್ಮ ಸುತ್ತ ಇರುವುದನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ' ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಅಂಬರೀಶ್ ಮತ್ತು ಸುದೀಪ್ ಅಭಿನಯದ ಕೊನೆಯ ಸಿನಿಮಾ 'ಅಂಬಿ ನಿಂಗೆ ವಯಸ್ಸಾಯ್ತೋ' ಸಿಸಿನಿಮಾದ ಫೋಟೋವನ್ನು ಹಂಚಿಕೊಂಡಿದ್ದಾರೆ.
Big News: ಬಿಗ್ ಬಾಸ್ ಕನ್ನಡ ಹೊಸ ಆವೃತ್ತಿಗೆ ಕೆಲಸ ಆರಂಭಿಸಿದ ಸುದೀಪ್
ಫೋಟೋದಲ್ಲಿ 'ಪ್ರತಿಯೊಬ್ಬ ಕನ್ನಡಿಗನ ಮನಸ್ಸಿನಲ್ಲೂ ಚಿರಸ್ಥಾಯಿಯಾಗಿದ್ದೀರ. ನಿಮ್ಮ ನೆನಪು ಸದಾ ನಮ್ಮೊಂದಿಗೆ ಅಜರಾಮರ' ಎಂದು ಬರೆದಿದೆ.
ಅಂಬರೀಶ್ ಗೆ ಬಹಳ ಹತ್ತಿರವಾಗಿದ್ದ ಚಿತ್ರರಂಗದ ಕಲಾವಿದರಲ್ಲಿ ಸುದೀಪ್ ಕೂಡ ಒಬ್ಬರು. ಬಾಲ್ಯದಿಂದ ಅಂಬರೀಶ್ ಜೊತೆಗೆ ಸುದೀಪ್ ಗೆ ಉತ್ತಮ ಒಡನಾಡ ಇತ್ತು. ತಮ್ಮ ಕುಟುಂಬದ ಹಿರಿಯಣ್ಣನಂತೆ ಅಂಬರೀಶ್ ಇದ್ದರು.
ಅಂದಹಾಗೆ ಇಂದು ಅವರ ಪುಣ್ಯಸ್ಮರಣೆ ಅಂಗವಾಗಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಸಮಾಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಟಿ ಮತ್ತು ಸಂಸದೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್, ನಟ ದರ್ಶನ್ ಮತ್ತು ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಅನೇಕ ಗಣ್ಯರು ಸಮಾಧಿಗೆ ಪೂಜೆ ಮಾಡಿ, ಅಂಬರೀಶ್ ಗೆ ಗೌರವ ಸಲ್ಲಿಸಿದರು.