Don't Miss!
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- News ಬೆಂಗಳೂರಿನಲ್ಲಿ ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಜಿಎಫ್, ಬಾಹುಬಲಿ ಗಳಿಕೆ ಬಗ್ಗೆ ಆಸಕ್ತಿಕರ ವಿಷಯ ಬಿಚ್ಚಿಟ್ಟ ಸುದೀಪ್
ಎಸ್ ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ ಸಿನಿಮಾ ಭಾರತೀಯ ಇತಿಹಾಸದಲ್ಲಿ ಹೊಸ ಮೈಲಿಗಲ್ಲು. 250 ಕೋಟಿ ಬಜೆಟ್ ನಲ್ಲಿ ತಯಾರಾಗಿದ್ದ ಈ ಸಿನಿಮಾ 1810 ಕೋಟಿ ಗಳಿಕೆ ಕಂಡಿತ್ತು.
ಅದೇ ರೀತಿ ದೊಡ್ಡ ಬಜೆಟ್ ನಲ್ಲಿ ಸಿದ್ಧವಾಗಿದ್ದ ಕನ್ನಡ ಕೆಜಿಎಫ್ ಸಿನಿಮಾ ನೂರು ಕೋಟಿಗೂ ಅಧಿಕ ಹಣ ಗಳಿಸಿತ್ತು. 'ಇಂತಹ ದೊಡ್ಡ ಬಜೆಟ್ ನಲ್ಲಿ ನಿರ್ಮಾಣವಾದ ಚಿತ್ರಗಳು ಲಾಭ ಮಾಡಲು ಅಥವಾ ಹೆಚ್ಚು ಕಲೆಕ್ಷನ್ ಮಾಡಬೇಕಾದರೆ ಪ್ಯಾನ್ ಇಂಡಿಯಾ ಹೋಗಬೇಕಾಗಿರುವುದು ಅಗತ್ಯ' ಎಂದು ಸುದೀಪ್ ಅಭಿಪ್ರಾಯಪಟ್ಟಿದ್ದಾರೆ.
ಸುದೀಪ್ 'ಕನ್ವರ್ ಲಾಲ್' ಸಿನಿಮಾ ನಿಂತಿದ್ಯಾಕೆ?
''ಬಾಹುಬಲಿ ಸಿನಿಮಾ ಬರಿ ಆಂಧ್ರದಲ್ಲಿ ರಿಲೀಸ್ ಆಗಿದ್ದರೆ ಅಷ್ಟು ಹಣ ಗಳಿಸುತ್ತಿರಲಿಲ್ಲ. ಕೆಜಿಎಫ್ ಸಿನಿಮಾ ಬರಿ ಕರ್ನಾಟಕದಲ್ಲಿ ತೆರೆಕಂಡಿದ್ದರೆ ಅಷ್ಟು ಲಾಭ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಬಿಸಿನೆಸ್ ಚೆನ್ನಾಗಿರುತ್ತೆ, ಆದರೆ ಬಜೆಟ್ ಚಿಕ್ಕದಾಗಿರಬೇಕು'' ಎಂದು ಸುದೀಪ್ ತಿಳಿಸಿದರು.
ಅಂಬಿ ಬಯೋಪಿಕ್ ನಲ್ಲಿ ಸುದೀಪ್: ಕಿಚ್ಚ ಹೇಳಿದ್ದೇನು?
ಈ ವೇಳೆ ಡಬ್ಬಿಂಗ್ ಬಗ್ಗೆ ಮಾತನಾಡಿದ ಸುದೀಪ್ ''ಡಬ್ಬಿಂಗ್ ಸಿನಿಮಾಗಳು ಬರುವುದರಿಂದ ತೊಂದರೆಯಾಗುತ್ತಿದೆ ಎನ್ನುವುದಕ್ಕಿಂತ ನಮ್ಮ ಭಾಷೆ ಬೆಳೆಯುತ್ತಿದೆ ಎಂಬುದನ್ನ ಗಮನಿಸಬೇಕಿದೆ. ನಮ್ಮ ಭಾಷೆ ಇರುವವರೆಗೂ ಮಾತ್ರ ನಮ್ಮ ಚಿತ್ರರಂಗ. ಆರಂಭದಲ್ಲಿ ಥಿಯೇಟರ್ ಕೊಡ್ತಿಲ್ಲ ಎನ್ನಬಹುದು. ಆದರೆ, ಮುಂದಿನ ದಿನದಲ್ಲಿ ಅದು ಬದಲಾಗುತ್ತೆ'' ಎಂದು ಬೆಂಬಲ ನೀಡಿದ್ದಾರೆ.
ಮೆಗಾಸ್ಟಾರ್ ಚಿರಂಜೀವಿ ನಟಿಸಿದ್ದ ಸೈರಾ ನರಸಿಂಹ ರೆಡ್ಡಿ ಸಿನಿಮಾ ಕನ್ನಡದಲ್ಲಿ ಬಿಡುಗಡೆಯಾಗಿತ್ತು. ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಕನ್ನಡ ವರ್ಷನ್ ಸೈರಾ ಚಿತ್ರದಲ್ಲಿ ಸುದೀಪ್ ಪಾತ್ರಕ್ಕೆ ಸ್ವತಃ ಸುದೀಪ್ ಅವರೇ ಡಬ್ ಮಾಡಿದ್ದಾರೆ.