Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೀದರ್ ನಲ್ಲಿ ನಟ ಕಿಚ್ಚ ಸುದೀಪ್ ರೋಡ್ ಶೋ
ಕರ್ನಾಟಕ ಮಕ್ಕಳ ಪಕ್ಷದ ಸೂತ್ರಧಾರ ಅಶೋಕ್ ಖೇಣಿ ಪರ ಬೀದರ್ ನಲ್ಲಿ ಸುದೀಪ್ ರೋಡ್ ಶೋ ಮಾಡಿ ಮತಯಾಚಿಸಿದರು. ತಾವು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲ. ಒಬ್ಬ ಒಳ್ಳೆಯ ವ್ಯಕ್ತಿಗೆ ಪ್ರಚಾರಕೊಡುತ್ತಿದ್ದೇನೆ ಅಷ್ಟೇ ಎಂದು ಸುದೀಪ್ ಈ ಸಂದರ್ಭದಲ್ಲಿ ಹೇಳಿದರು.
ಬೀದರ್ ತಾಲೂಕಿನ ಅಮಲಾಪುರ, ಮರ್ಜಾಪುರ, ಯಾಕತಪುರ, ಮನ್ನಳ್ಳಿ, ಹೊಕ್ರಾಣಾ, ಚಿಂತಲಗೇರಾ, ರಾಜಗೀರಾ, ಪಾತರಹಳ್ಳಿ, ಬೇಮಳಖೇಡ, ಕಾರಕಮಪಳ್ಳಿ, ಸಿಂಧೋಲ ಮುಂತಾದ ಕಡೆ ರೋಡ್ ಶೋ ನಡೆಸಿ ಖೇಣಿ ಪರ ಮತಯಾಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್ ನನಗೆ ಪಕ್ಷಕ್ಕಿಂತ ವ್ಯಕ್ತಿ ಮುಖ್ಯ. ಖೇಣಿ ಅವರು ನೈಸ್ ಕಂಪನಿ ಮೂಲಕ ಅನೇಕ ಜನೋಪಯೋಗಿ ಕೆಲಸಕಾರ್ಯಗಳನ್ನು ಮಾಡಿದ್ದಾರೆ. ರಂಜೋಳ ಖೇಣಿ ಗ್ರಾಮದವರಾದ ಅವರು ಜಿಲ್ಲೆಯ ಕೀರ್ತಿಪತಾಕೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಹಾರಿಸಿದ್ದಾರೆ.
ಜಿಲ್ಲೆಯ 105 ಹಳ್ಳಿಗಳ ಅಭಿವೃದ್ಧಿಗೆ ಅವರು ದೃಢಸಂಕಲ್ಪ ಮಾಡಿದ್ದು, ತಮ್ಮ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿ ಮಾಡಲು ಪಣತೊಟ್ಟಿದ್ದಾರೆ. ಖೇಣಿ ಅವರಿಗೆ ಮತ ನೀಡಿ ಎಂದು ಅವರು ಪ್ರಚಾರದ ವೇಳೆ ತಿಳಿಸಿದರು. (ಏಜೆನ್ಸೀಸ್)