Don't Miss!
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- News ಭಾರತೀಯ ರೈಲ್ವೆಗೆ 171 ವರ್ಷ: ಮೊದಲ ರೈಲು ಸಂಚಾರ ಎಲ್ಲಿಂದ ಎಲ್ಲಿಗೆ? ಪೋಸ್ಟ್ ಹಂಚಿಕೊಂಡ ರೈಲ್ವೆ
- Technology ಅಗ್ಗದ ದರದಲ್ಲಿ 5G ಫೋನ್ ಖರೀದಿಸಬೇಕೆ?..ಈ ಆಫರ್ ಮಿಸ್ ಮಾಡ್ಕೋಬೇಡಿ!
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಚ್ಚ ಸುದೀಪ್ ರಮ್ಮಿ ವಿವಾದ: ನಂದಕಿಶೋರ್ಗೆ ಯುವಕ ತಿರುಗೇಟು!
ಕಿಚ್ಚ ಸುದೀಪ್ಗೆ ವಿರುದ್ಧ ಅವಹೇಳನಕಾರಿ ವಿಡಿಯೋಗೆ ನಂದ ಕಿಶೋರ್ ಆಕ್ರೋಶ ವ್ಯಕ್ತಪಡಿಸಿದ್ದರು. ಕೆಲವು ದಿನಗಳ ಹಿಂದೆ ಚರಣ್ ಎಂಬುವ ವ್ಯಕ್ತಿ ಕಿಚ್ಚ ಸುದೀಪ್ ರಮ್ಮಿ ಜಾಹೀರಾತಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನಿರ್ದೇಶಕ ನಂದ ಕಿಶೋರ್ ಅಖಾಡಕ್ಕಿಳಿದಿದ್ದರು.
ನಿನ್ನೆ (ಜುಲೈ 03) ಕಿಚ್ಚ ಸುದೀಪ್ ವಿರುದ್ಧ ತಿರುಗಿಬಿದ್ದಿದ್ದ ವ್ಯಕ್ತಿಯ ವಿರುದ್ಧ ನಂದ ಕಿಶೋರ್ ಕಿಡಿಕಾರಿದ್ದರು. " ಸುದೀಪ್ ಅವರ ಸಾಧನೆ ದೊಡ್ಡದು. ಅಂಥಹವರ ಬಗ್ಗೆ ದಾರಿಯಲ್ಲಿ ಹೀಗುವವರೆಲ್ಲ ಏನೋ ಒಂದು ಮಾತಾಡುತ್ತಾರೆ ಎಂದರೆ ಬಹಳ ತಪ್ಪಾಗುತ್ತೆ. ಕನ್ನಡದ ನಟನಿಗೆ ನಪುಂಸಕ ಎಂದು ಹೇಳುವ ನಿನ್ನ ಭಾಷೆಯಲ್ಲಿಯೇ ಗೊತ್ತಾಗುತ್ತೆ. ನೀನು ಎಂಥಹ ಸಂಸ್ಕಾರದಿಂದ ಬಂದಿದ್ದೀಯಾ ಅಂತ. ನೀನು ನಪೂಂಸಕನಾಗಿಲ್ಲದೆ ಇದ್ದರೆ, ಈಗ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಎಲ್ಲಿದ್ದೀಯಾ? ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದರು.
ನಟ ಸುದೀಪ್ ಬಗ್ಗೆ ಅವಹೇಳನಕಾರಿ ಕಮೆಂಟ್: ಆಕ್ರೋಶಗೊಂಡ ನಿರ್ದೇಶಕ ನಂದ ಕಿಶೋರ್!
ನಂದ ಕಿಶೋರ್ ವಿಡಿಯೋ ವೈರಲ್ ಆಗುತ್ತಿದ್ದಂತೆ ಚರಣ್ ಎಂಬುವ ವ್ಯಕ್ತ ಫೇಸ್ಬುಕ್ ಲೈವ್ ಬಂದಿದ್ದಾರೆ. ನಿರ್ದೇಶಕ ನಂದ ಕಿಶೋರ್, ನಟ ಸುದೀಪ್ ಹಾಗೂ ಅವರ ಮ್ಯಾನೇಜರ್ ಕಮ್ ನಿರ್ಮಾಪಕ ಜಾಕ್ ಮಂಜು ಅವರ ವಿರುದ್ಧ ತಿರುಗಿಬಿದ್ದಿದ್ದಾನೆ. ಅಷ್ಟಕ್ಕೂ ಚರಣ್ ವಿಡಿಯೋದಲ್ಲಿ ಏನಿದೆ? ತಿಳಿಯಲು ಮುಂದೆ ಓದಿ.
ನಂದ ಕಿಶೋರ್ಗೆ ತಿರುಗೇಟು
"ಲೇ ನಂದ ಕಿಶೋರ. ಈಗ ಬಂದ್ಯ. ಈಗ ಬರಬೇಕು ಅನಿಸಿತಾ? ಬುಡಕ್ಕೆ ಮಣಸಿನಕಾಯಿ ಹಚ್ಚಿಕೊಂಡಾಗ ಡಾ.ರಾಜ್ಕುಮಾರ್ ಹೆಸರನ್ನು ತೆಗೆದುಕೊಂಡು ರಕ್ಷಣೆ ಮಾಡಿ ಅಂತ ಭಿಕ್ಷೆ ಬೇಡುವುದಕ್ಕೆ ಬಂದಿದ್ದೀಯಾ. ಕಲಾಭಿಮಾನಿಗಳೆಲ್ಲಾ ರಕ್ಷಣೆ ಮಾಡಬೇಕು ಎಂದಿದ್ದೀಯಲ್ಲಾ ನಾಚಿಕೆಯಾಗಬೇಕು. ಅದೇ ಕಲಾಭಿಮಾನಿಗಳಿಗೆ ಜೂಜು ಆಡಿಸಿದಾಗ ಎಲ್ಲೆ ಹೋಗಿದ್ರಿ ನೀವೆಲ್ಲ." ಎಂದು ಚರಣ್ ಕಿಡಿಕಾರಿದ್ದಾನೆ.
Exclusive: 'ಬಿಲ್ಲ ರಂಗ ಭಾಷಾ' 2 ಪಾರ್ಟ್ಗಳಲ್ಲಿ ಬರುತ್ತೆ: 'ವಿಕ್ರಾಂತ್ ರೋಣ' ಕಥೆಯೇನು?
ಫಿಲ್ಮ್ ಚೇಂಬರ್ಗೆ ಗೊತ್ತಿಲ್ವಾ?
"ಕನ್ನಡ ಚಿತ್ರರಂಗದಲ್ಲಿ ಫಿಲಂ ಚೇಂಬರ್ ಇದೆ. ಬಂದು ಕಂಪ್ಲೇಂಟ್ ಮಾಡು ಅಂತಿಯಲ್ಲ. ಕಂಪ್ಲೇಂಟ್ ಯಾಕೆ ಮಾಡಬೇಕು. ಕನ್ನಡ ಫಿಲ್ಮ್ ಚೇಂಬರ್ಗೆ ಗೊತ್ತಿಲ್ವಾ ಜೂಜು ಆಡಿಸಿದ್ದು. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದೀಯಾ ಅಂತಿಯಲ್ಲ. ಮಾತಾಡುವುದಕ್ಕಿಂತ ಮುಂಚಿತವಾಗಿ ಅಧ್ಯಯನ ಮಾಡಿಕೊಂಡು ಮಾತಾಡು. ದಿನಕ್ಕೆ ಏನಿಲ್ಲಾ ಅಂದರೂ ಒಂದು ಸಾವಿರ ಕಾಲ್ ಬರುತ್ತಿದೆ. ಸಾಧ್ಯವಾದಷ್ಟು ಕಾಲ್ ರಿಸೀವ್ ಮಾಡುತ್ತಿದ್ದೇನೆ. ಮಾತಾಡುತ್ತಿದ್ದೇನೆ. ಆ ಆಡಿಯೋ ಕಾಲ್ ಅನ್ನು ಕಿಚ್ಚ ಸುದೀಪ್ ಪಿ ಎ ಜಾಕ್ ಮಂಜುಗೆ ಕಳುಹಿಸಿದ್ದೀನಿ." ಎಂದಿದ್ದಾನೆ.
ಗಲೀಜು ಕ್ಲೀನ್ ಮಾಡುತ್ತೇನೆ
" ಡಾ. ರಾಜ್ಕುಮಾರ್ ಕಲಾಭಿಮಾನಿಗಳಿಗೆ ಒಂದೇ ಒಂದು ಕೆಟ್ಟ ಚಟವನ್ನಾದರೂ ಹೇಳಿಕೊಟ್ಟಿದ್ದಾರಾ? ನೀವು ಚಿತ್ರರಂಗದ ಒಂದು ಕುಟುಂಬ ಅಂತ ಹೇಳಿದ್ರಲ್ಲ. ಈ ಕುಟುಂಬದವರು ಸುದೀಪ್ ಜೂಜು ಆಡಿಸಿದಾಗ ಕೇಳಿದಿದ್ದರೆ ನಾವ್ಯಾಕೆ ಬರುತ್ತಿದ್ದೆವು? ನಿಮ್ಮ ಮನೆಯಲ್ಲಿ ಗಲೀಜು ಮಾಡಿಕೊಂಡಿದ್ದಕ್ಕೆ ನಾನು ಇವತ್ತು ಗಲೀಜು ಕ್ಲೀನ್ ಮಾಡುವುದಕ್ಕೆ ಬಂದಿರುವುದು. ರಮ್ಮಿ ಆಡಿ, ಎಲ್ಲಾ ಹಣವನ್ನು ಹಂಚಿ, ಈ ತರ ಆದರೆ ಯಾರು ಬಂದು ಸಿನಿಮಾ ನೋಡುವವರು. " ಎಂದು ಹೇಳಿದ್ದಾನೆ.
1 ಗಂಟೆಯಲ್ಲಿ 'ವಿಕ್ರಾಂತ್ ರೋಣ' ಟ್ರೈಲರ್ ರೆಕಾರ್ಡ್: ಯಾವ ಭಾಷೆಯಲ್ಲಿ ಎಷ್ಟು ವೀಕ್ಷಣೆ?
ಬೀದಿಗೆ ಬಂದ ಜನರು: ಹೊಣೆ ಯಾರು?
"ಅಲ್ಯಾರೋ ಜೂಜಿನಿಂದ ಸತ್ತು ಹೋದರೆ, ಅದು ಸುದೀಪ್ಯಿಂದಲೇ ಸತ್ತು ಹೋದ ಅಂತ ಬರೆದಿಡಬೇಕಾ ಅವನು? ಜೂಜಿನಿಂದ ಸತ್ತಿರುವುದು. ಸರ್ಕಾರ ಅಪ್ಲಿಕೇಶನ್ ಅನ್ನು ಬ್ಯಾನ್ ಮಾಡಬೇಕಿತ್ತು. ಅದು ಖಂಡಿತಾ ತಪ್ಪು. ಆದರೆ ಎಲ್ಲೂ ಪ್ರಚಾರ ಮಾಡಿರಲಿಲ್ಲ. ನೀನು ಹೇಳಿದ್ಯಲ್ಲಾ ಮೇರು ನಟ ಅಂತ. ಆ ಮೇರು ನಟನಿಗೆ ಬುದ್ದಿ ಬೇಕು. ನಾನು ಏನಾದರೂ ಕೆಟ್ಟ ಕೆಲಸ ಮಾಡಿದರೆ, ನನ್ನ ಅಭಿಮಾನಿಗಳೂ ಕೂಡ ಅದೇ ಕೆಲಸ ಮಾಡುತ್ತಾರೆ ಅಂತ. ಸ್ಕಿಲ್ ಗೇಮ್ ಅಂತ ಸಾವಿರಾರು ಜನ ಜನ ಬೀದಿಗೆ ಬಂದಿದ್ರಲ್ಲ. ಹೊಣೆ ತೆಗೆದುಕೊಳ್ಳುವುದು ಯಾರು?" ಎಂದು ಯುವಕ ಕಿಡಿ ಕಾರಿದ್ದಾನೆ.