Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಗಂಡಸು ಎಂದು ಸಾಬೀತು ಮಾಡಲು ಕತ್ತಲಾಗಬೇಕಿಲ್ಲ': ಕಿಚ್ಚನ ಟಾಂಗ್ ಯಾರಿಗೆ?
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ ಪೈಲ್ವಾನ್ ಚಿತ್ರದ ರಿಲೀಸ್ ಗೆ ಕಾಯುತ್ತಿದ್ದಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ.
ಅಭಿಮಾನಿಗಳ ಪ್ರಶ್ನೆಗೆ, ಅಭಿಮಾನಿಗಳ ಹುಟ್ಟುಹಬ್ಬಕ್ಕೆ ಹೀಗೆ ಪ್ರತಿಯೊಂದಕ್ಕು ಪ್ರತಿಕ್ರಿಯೆ ನೀಡುತ್ತಿರುತ್ತಾರೆ ಸುದೀಪ್.ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಆಗಿರುವ ಕಿಚ್ಚ ಇತ್ತೀಚಿಗೆ ಪೋಸ್ಟ್ ಮಾಡಿರುವ ಒಂದು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.
'ನಾನ್ ಯಾವಾಗ ಏನ್ ಕೇಳಿದ್ರು ಸುದೀಪ್ ಇಲ್ಲ ಎಂದಿಲ್ಲ' ರವಿಚಂದ್ರನ್
ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವಾಗಿ ಮಾತ್ರ ಟ್ವೀಟ್ ಮಾಡುತ್ತಿದ್ದ ಮಾಣಿಕ್ಯ ಈಗ ಮಾಡಿರುವ ಟ್ವೀಟ್ ಅಚ್ಚರಿ ಮೂಡಿಸಿದೆ. ಆದ್ರೆ ಸುದೀಪ್ ಟ್ವೀಟ್ ಗೆ ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಲೈಕ್ಸ್ ಹರಿದು ಬರುತ್ತಿದೆ.
ಗಂಡಸು ಎನಿಸಿಕೊಳ್ಳಲು ಕತ್ತಲಾಗಬೇಕಿಲ್ಲ
ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಹೇಳುತ್ತ "ಗಂಡಸು ಎನಿಸಿಕೊಳ್ಳಲು ಮದ್ಯಪಾನ ಮಾಡಬೇಕಾಗಿಲ್ಲ ಮತ್ತು ಕತ್ತಲು ಆಗಲಿ ಎಂದು ಕಾಯಬೇಕಾಗಿಲ್ಲ" ಎಂದು ಬರೆದುಕೊಂಡಿದ್ದಾರೆ. ಸುದೀಪ್ ಪೋಸ್ಟ್ ನೋಡಿದ ಅನೇಕರು ಅಚ್ಚರಿ ಪಡುತಿದ್ದಾರೆ.
ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟ ಸುನೀಲ್ ಶೆಟ್ಟಿಗೆ ಸುದೀಪ್ ಹೇಳಿದ್ದೇನು?
ಎದುರಾಳಿ ಯೋಗ್ಯನಾಗಿದ್ರೆ ಮಾತ್ರ ಫೈಟ್ ಮಾಡುವೆ
ಅಷ್ಟೆಯಲ್ಲ ಇದರ ಜೊತೆಗೆ ಒಂದು ಫೊಟೋವನ್ನು ಶೇರ್ ಮಾಡಿ ಮತ್ತೊಂದು ಸಂದೇಶವನ್ನು ರವಾನಿಸಿದ್ದಾರೆ. "ಕೇವಲ ಏನನ್ನೋ ಸಾಬೀತು ಪಡಿಸಲು ನಾನು ಫೈಟ್ ಮಾಡುವುದಿಲ್ಲ. ನನ್ನ ಎದುರಾಳಿ ಫೈಟ್ ಮಾಡಲು ಯೋಗ್ಯನಾಗಿದ್ದಾಗ ಮಾತ್ರ ನಾನು ಫೈಟ್ ಮಾಡುತ್ತೇನೆ" ಎಂದು ಹೇಳಿದ್ದಾರೆ. ಕಿಚ್ಚ ಯಾರಿಗೆ ಹೀಗೆ ಹೇಳಿದ್ದಾರೆ. ಯಾಕೆ ದಿಢೀರನೆ ಹೀಗೆ ಫೋಸ್ಟ್ ಮಾಡಿದ್ದಾರೆ ಎನ್ನುವುದು ಅಚ್ಚರಿ ಮೂಡಿಸುತ್ತಿದೆ.
ಯಾರಿಗೆ ಸುದೀಪ್ ಟಾಂಗ್?
ಸುದೀಪ್ ದಿಢೀರನೆ ಹೀಗೆ ಪೋಸ್ಟ್ ಮಾಡಿರುವುದು ಯಾರಿಗೆ ಎನ್ನುವ ಅನುಮಾನ ಮೂಡುತ್ತಿದೆ. ಸಾಧಾರಣವಾಗಿ ಸುದೀಪ್ ಇಷ್ಟು ಖಡಕ್ ಆದ ಸಾಲುಗಳನ್ನು ಟ್ವೀಟ್ ಮಾಡುವುದು ತುಂಬ ಕಡಿಮೆ. ಕಡಿಮೆ ಎನ್ನುವುದಕ್ಕಿಂತನು ಮಾಡುವುದೆ ಇಲ್ಲ. ಆದ್ರೀಗ ಕಿಚ್ಚನ ಟ್ವೀಟ್ ಎಲ್ಲರ ಗಮನ ಸೆಳೆಯುತ್ತಿದೆ.
ಪೈಲ್ವಾನ್ ರಿಲೀಸ್ ಗೆ ಕಾಯುತ್ತಿದ್ದಾರೆ
ಸುದೀಪ್ ಸದ್ಯ ಬಹು ನಿರೀಕ್ಷೆಯ ಪೈಲ್ವಾನ್ ಚಿತ್ರದ ರಿಲೀಸ್ ಗೆ ಕಾಯುತ್ತಿದ್ದಾರೆ. ಕನ್ನಡ ಮಾತ್ರವಲ್ಲದೆ ಐದು ಭಾಷೆಯಲ್ಲಿ ಪೈಲ್ವಾನ್ ತೆರೆಗೆ ಬರುತ್ತಿದೆ. ಪೈಲ್ವಾನ್ ರಿಲೀಸ್ ನ ತಯಾರಿಯಲ್ಲಿರುವ ಸುದೀಪ್ ದಿಢೀರನೆ ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಪೋಸ್ಟ್ ಮಾಡಿರುವುದು ಈಗ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.