Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ತಿರುವು ಪಡೆದುಕೊಂಡ 'ಲೀಡರ್' ವಿವಾದ
ಕಿಚ್ಚ ಸುದೀಪ್ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 'ಲೀಡರ್' ಚಿತ್ರದ ವಿವಾದ ಹೊಸದೊಂದು ತಿರುವು ಪಡೆದುಕೊಂಡಿದೆ. ಒಂದೇ ಶೀರ್ಷಿಕೆಯಲ್ಲಿ ಇಬ್ಬರ ಚಿತ್ರಗಳೂ ಘೋಷಣೆಯಾಗಿದ್ದು ಬಳಿಕ ವಿವಾದ ತಣ್ಣಗಾಗಿದ್ದು ಗೊತ್ತೇ ಇದೆ.
ಇದೀಗ ಸುದೀಪ್ ಚಿತ್ರದ ನಿರ್ಮಾಪಕರಾದ ರಘುನಾಥ್ ಅವರು, ನನಗೆ ನ್ಯಾಯ ಸಿಗಲಿಲ್ಲ ಎಂದರೆ ಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ್ದಾರೆ. ಸುದೀಪ್ ಅವರ ಚಿತ್ರಕ್ಕೆ 'ದಿ ಲೀಡರ್' ಎಂದು ಹೆಸರಿಡಲಾಗಿತ್ತು. ಅದಾದ ಬಳಿಕ ಶಿವಣ್ಣ ಅವರ 'ದಿ ಲೀಡರ್ ಶಿವರಾಜ್ ಕುಮಾರ್' ಚಿತ್ರ ಅನೌನ್ಸ್ ಆಯಿತು. [ಸುದೀಪ್ 'ದಿ ಲೀಡರ್', ಶಿವಣ್ಣ 'ಮಾಸ್ ಲೀಡರ್']
ಮೂರು ವರ್ಷದ ಹಿಂದೆ ತಾವು 'ದಿ ಲೀಡರ್' ಶೀರ್ಷಿಕೆಯನ್ನು ನೋಂದಾಯಿಸಿಕೊಂಡಿದ್ದೆವು. ನಿಯಮಗಳ ಪ್ರಕಾರ, ನೋಂದಾಯಿಸಿಕೊಂಡ ಶೀರ್ಷಿಕೆಯೊಂದರ ಪೂರ್ವದಲ್ಲಾಗಲಿ, ಅಂತ್ಯದಲ್ಲಾಗಲಿ ಮತ್ತೊಂದು ಪದ ಬಳಸುವಂತಿಲ್ಲ. ಹಾಗಿದ್ದೂ 'ದಿ ಲೀಡರ್, ಶಿವರಾಜ್ ಕುಮಾರ್' ಎಂದು ಇದೀಗ 'ಮಾಸ್ ಲೀಡರ್' ಎಂದೂ ಶೀರ್ಷಿಕೆ ಬದಲಾಯಿಸಿಕೊಂಡು ಚಿತ್ರ ನಿರ್ಮಿಸಲು ಹೊರಟಿದ್ದಾರೆ.
ಇದನ್ನು ವಿರೋಧಿಸಿ ತಾವು ಫಿಲಂ ಚೇಂಬರ್ ಗೆ ಪತ್ರ ಬರೆಯುತ್ತೇನೆ. ನಾನು ಯಾರ ಪರವೂ ಅಲ್ಲ. ನನಗೆ ನ್ಯಾಯ ಬೇಕು. ಒಂದು ವೇಳೆ ಫಿಲಂ ಚೇಂಬರ್ ನಲ್ಲಿ ನ್ಯಾಯ ಸಿಗಲಿಲ್ಲ ಎಂದರೆ ನಮ್ಮ ವಕೀಲರಿಂದ ಕಾನೂನು ಸಲಹೆ ಪಡೆದು ಕೋರ್ಟ್ ಮೆಟ್ಟಿಲೇರುತ್ತೇನೆ ಎಂದಿದ್ದಾರೆ ಸುದೀಪ್ ಚಿತ್ರದ ನಿರ್ಮಾಪಕ ರಘುನಾಥ್.