Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬರ್ತಡೇ ದಿನ ವಿಷ್ಣು ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಸುದೀಪ್
Recommended Video
ಡಾ.ವಿಷ್ಣುವರ್ಧನ್ ಅವರ ಹೆಸರಲ್ಲಿ ರಾಷ್ಟ್ರಮಟ್ಟದ ಹಬ್ಬವನ್ನ ಆಚರಿಸಿದ್ದ 'ಡಾ.ವಿಷ್ಣುವರ್ಧನ್ ರಾಷ್ಟ್ರೀಯ ಉತ್ಸವ' ಮತ್ತೆ ಬರ್ತಿದೆ. ಕಳೆದ ವರ್ಷ ದೆಹಲಿಯಲ್ಲಿ ಅದ್ಧೂರಿಯಾಗಿ ನಡೆದಿದ್ದ ಈ ಉತ್ಸವ ಈಗ 2018ನೇ ಸಾಲಿನಲ್ಲಿ ಮತ್ತೆ ನಡೆಯಲಿದೆ.
ಸೆಪ್ಟೆಂಬರ್ 16, 17 ಹಾಗೂ 18 ರಂದು ಮೂರು ದಿನಗಳ ಕಾಲ 'ಡಾ.ವಿಷ್ಣುವರ್ಧನ್ ರಾಷ್ಟ್ರೀಯ ಉತ್ಸವ' ನಡೆಯಲಿದ್ದು, ಈ ಬಾರಿ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. 'ಡಾ ವಿಷ್ಣು ಸೇನಾ ಸಮಿತಿ'ಯ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮ, ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ ಜರುಗಲಿದೆ.
ಡಾ ವಿಷ್ಣು ಸಾವಿಗೂ ಮುನ್ನ ಸುದೀಪ್ ಬಳಿ ಈ ವಿಷ್ಯವನ್ನ ಚರ್ಚಿಸಿದ್ರಂತೆ
ವಿಷ್ಣುದಾದ ಅವರು ಈ ರಾಷ್ಟ್ರೀಯ ಉತ್ಸವಕ್ಕೆ ಈ ಬಾರಿ ಕಿಚ್ಚ ಸುದೀಪ್ ಅವರ ಸಾಥ್ ಕೊಡ್ತಿದ್ದಾರೆ. ಹೌದು, ಡಾ.ವಿಷ್ಣುವರ್ಧನ ರಾಷ್ಟ್ರೀಯ ಉತ್ಸವದ ಗೀತೆಯನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಡ್ತಿದ್ದಾರೆ.
ಡಾ.ವಿಷ್ಣು ಸಾವಿನ ದಿನ ಅಂಬಿ ಆಡಿದ ಮಾತನ್ನ ಮರೆಯದ ಸಾಧುಕೋಕಿಲಾ
ಈ ಮೂಲಕ ಸಾಹಸ ಸಿಂಹ ಅಭಿಮಾನಿಗಳಿಗೆ ಇದು ಮತ್ತಷ್ಟು ಸ್ಪೆಷಲ್ ಆಗಲಿದೆ. ಹೇಳಿ ಕೇಳಿ ಸುದೀಪ್ ಅವರು ಮೊದಲೇ ವಿಷ್ಣುವರ್ಧನ್ ಅವರ ಅಭಿಮಾನಿ. ತನ್ನ ನೆಚ್ಚಿನ ನಟ ಉತ್ಸವದ ಗೀತೆಯನ್ನ ಹಾಡುತ್ತಿದ್ದಾರಂದ್ರೆ ಅದು ಹೇಗಿರಬೇಡ ಎಂಬ ಕುತೂಹಲ ಕನ್ನಡ ಕಲಾರಸಿಕರದ್ದು.
ಕಿಚ್ಚ ಸುದೀಪ್ 'ನಾಗರಹಾವು' ಚಿತ್ರವನ್ನ ಯಾವುದಕ್ಕೆ ಹೋಲಿಸಿದ್ರು.?
ಇಂದು ಸುದೀಪ್ ಅವರ 45ನೇ ಹುಟ್ಟುಹಬ್ಬ. ಈ ವಿಶೇಷವಾಗಿ ಈ ವಿಷ್ಯವನ್ನ ವಿಷ್ಣು ಸೇನಾ ಸಮಿತಿ ಬಹಿರಂಗಪಡಿಸಿದೆ. ಆದ್ರೆ, ಡಾ.ವಿಷ್ಣುವರ್ಧನ ರಾಷ್ಟ್ರೀಯ ಉತ್ಸವದ ಗೀತೆ ಯಾವಾಗ ಬಿಡುಗಡೆಯಾಗುತ್ತೆ ಎಂಬುದು ಕಾದು ನೋಡಬೇಕಿದೆ.