Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬರ್ತಡೇ ದಿನ ವಿಷ್ಣು ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಸುದೀಪ್
Recommended Video
ಡಾ.ವಿಷ್ಣುವರ್ಧನ್ ಅವರ ಹೆಸರಲ್ಲಿ ರಾಷ್ಟ್ರಮಟ್ಟದ ಹಬ್ಬವನ್ನ ಆಚರಿಸಿದ್ದ 'ಡಾ.ವಿಷ್ಣುವರ್ಧನ್ ರಾಷ್ಟ್ರೀಯ ಉತ್ಸವ' ಮತ್ತೆ ಬರ್ತಿದೆ. ಕಳೆದ ವರ್ಷ ದೆಹಲಿಯಲ್ಲಿ ಅದ್ಧೂರಿಯಾಗಿ ನಡೆದಿದ್ದ ಈ ಉತ್ಸವ ಈಗ 2018ನೇ ಸಾಲಿನಲ್ಲಿ ಮತ್ತೆ ನಡೆಯಲಿದೆ.
ಸೆಪ್ಟೆಂಬರ್ 16, 17 ಹಾಗೂ 18 ರಂದು ಮೂರು ದಿನಗಳ ಕಾಲ 'ಡಾ.ವಿಷ್ಣುವರ್ಧನ್ ರಾಷ್ಟ್ರೀಯ ಉತ್ಸವ' ನಡೆಯಲಿದ್ದು, ಈ ಬಾರಿ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. 'ಡಾ ವಿಷ್ಣು ಸೇನಾ ಸಮಿತಿ'ಯ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮ, ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ ಜರುಗಲಿದೆ.
ಡಾ ವಿಷ್ಣು ಸಾವಿಗೂ ಮುನ್ನ ಸುದೀಪ್ ಬಳಿ ಈ ವಿಷ್ಯವನ್ನ ಚರ್ಚಿಸಿದ್ರಂತೆ
ವಿಷ್ಣುದಾದ ಅವರು ಈ ರಾಷ್ಟ್ರೀಯ ಉತ್ಸವಕ್ಕೆ ಈ ಬಾರಿ ಕಿಚ್ಚ ಸುದೀಪ್ ಅವರ ಸಾಥ್ ಕೊಡ್ತಿದ್ದಾರೆ. ಹೌದು, ಡಾ.ವಿಷ್ಣುವರ್ಧನ ರಾಷ್ಟ್ರೀಯ ಉತ್ಸವದ ಗೀತೆಯನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಡ್ತಿದ್ದಾರೆ.
ಡಾ.ವಿಷ್ಣು ಸಾವಿನ ದಿನ ಅಂಬಿ ಆಡಿದ ಮಾತನ್ನ ಮರೆಯದ ಸಾಧುಕೋಕಿಲಾ
ಈ ಮೂಲಕ ಸಾಹಸ ಸಿಂಹ ಅಭಿಮಾನಿಗಳಿಗೆ ಇದು ಮತ್ತಷ್ಟು ಸ್ಪೆಷಲ್ ಆಗಲಿದೆ. ಹೇಳಿ ಕೇಳಿ ಸುದೀಪ್ ಅವರು ಮೊದಲೇ ವಿಷ್ಣುವರ್ಧನ್ ಅವರ ಅಭಿಮಾನಿ. ತನ್ನ ನೆಚ್ಚಿನ ನಟ ಉತ್ಸವದ ಗೀತೆಯನ್ನ ಹಾಡುತ್ತಿದ್ದಾರಂದ್ರೆ ಅದು ಹೇಗಿರಬೇಡ ಎಂಬ ಕುತೂಹಲ ಕನ್ನಡ ಕಲಾರಸಿಕರದ್ದು.
ಕಿಚ್ಚ ಸುದೀಪ್ 'ನಾಗರಹಾವು' ಚಿತ್ರವನ್ನ ಯಾವುದಕ್ಕೆ ಹೋಲಿಸಿದ್ರು.?
ಇಂದು ಸುದೀಪ್ ಅವರ 45ನೇ ಹುಟ್ಟುಹಬ್ಬ. ಈ ವಿಶೇಷವಾಗಿ ಈ ವಿಷ್ಯವನ್ನ ವಿಷ್ಣು ಸೇನಾ ಸಮಿತಿ ಬಹಿರಂಗಪಡಿಸಿದೆ. ಆದ್ರೆ, ಡಾ.ವಿಷ್ಣುವರ್ಧನ ರಾಷ್ಟ್ರೀಯ ಉತ್ಸವದ ಗೀತೆ ಯಾವಾಗ ಬಿಡುಗಡೆಯಾಗುತ್ತೆ ಎಂಬುದು ಕಾದು ನೋಡಬೇಕಿದೆ.