Don't Miss!
- News Lok Sabha Election 2024: ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೈತರ ಹೋರಾಟಕ್ಕೆ ಜೈಕಾರ ಹಾಕಿದ ಕಿಚ್ಚ ಸುದೀಪ್
'ಅನ್ನದಾತರಿಗೆ ಅನ್ನದಾತ' ಅನ್ನುವ ಬಿರುದು ಕಿಚ್ಚ ಸುದೀಪ್ ಅವರಿಗೆ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ನಿನ್ನೆಯಷ್ಟೇ ಸಿಕ್ಕಿತ್ತು. ಇವತ್ತು ಖುದ್ದು ಅನ್ನದಾತರಿಗಾಗಿ ಕಿಚ್ಚ ಸುದೀಪ್ ಬೀದಿಗಿಳಿದು ಪ್ರತಿಭಟನೆ ಮಾಡಿದರು.
ಕನ್ನಡ ಚಿತ್ರರಂಗದಲ್ಲಿ ಅನೇಕ ನಿರ್ಮಾಪಕರಿಗೆ ಸುದೀಪ್ ಸಹಾಯ ಮಾಡಿದ್ದಾರೆ. ಕಷ್ಟದಲ್ಲಿದ್ದವರಿಗೆ ಆಪತ್ಭಾಂಧವರಾಗಿದ್ದಾರೆ. ಆದ್ರೆ, ಸುದೀಪ್ ಸಹಾಯ ಮನೋಭಾವ ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ. ನೀರಿಗಾಗಿ ರಾಜ್ಯಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸುದೀಪ್ ಸಾಥ್ ನೀಡಿದ್ದಾರೆ.
ಮಹದಾಯಿ-ಮಲಪ್ರಭ ನದಿ ಜೋಡಣೆಗೆ ಆಗ್ರಹಿಸಿ ರೈತರು ಗದಗ ಜಿಲ್ಲೆಯ ನರಗುಂದದಲ್ಲಿ ನಡೆಸುತ್ತಿರುವ ಹೋರಾಟ ಇಂದು 50ನೇ ದಿನಕ್ಕೆ ಕಾಲಿಟ್ಟಿದೆ. ಇದಕ್ಕಾಗಿ ಪ್ರತಿಭಟನೆಯಲ್ಲಿ ಇಂದು ಕಿಚ್ಚ ಸುದೀಪ್ ಭಾಗವಹಿಸಿದರು. ['ಅನ್ನದಾತರ ಅನ್ನದಾತ' ಅಂತೆ ಕಿಚ್ಚ ಸುದೀಪ್.!]
''ಊಟವಿಲ್ಲದೇ ಇದ್ದರೂ ಬದುಕಬಹುದು. ಆದ್ರೆ, ನೀರಿಲ್ಲದೇ ಬದುಕಲು ಸಾಧ್ಯವಿಲ್ಲ. ಸರ್ಕಾರ ಆದಷ್ಟು ಬೇಗ ಈ ಬಗ್ಗೆ ಕ್ರಮ ಕೈಗೊಳ್ಳಬೇಕು'' ಅಂತ ರೈತರ ಆಗ್ರಹಕ್ಕೆ ಕಿಚ್ಚ ಸುದೀಪ್ ದನಿಗೂಡಿಸಿದರು.
ಸದಾ ಶೂಟಿಂಗ್, ಮೇಕಪ್, ಪ್ಯಾಕಪ್ ಅಂತ ತಮ್ಮದೇ ಬಣ್ಣದ ಲೋಕದಲ್ಲಿ ಬಿಜಿಯಾಗಿರುವ ನಟರ ಮಧ್ಯೆ ರೈತರ ಕೂಗಿಗೆ ದನಿ ಸೇರಿಸಿರುವ ಕಿಚ್ಚ ಸುದೀಪ್ ಕೊಂಚ ವಿಭಿನ್ನ ಅಲ್ಲವೇ.?