Don't Miss!
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಪವಾಸ ಕುಳಿತ ಅಭಿಮಾನಿಗೆ ಕಿಚ್ಚನ ಕಿವಿಮಾತು
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನ ಭೇಟಿ ಮಾಡಬೇಕು. ಅದಕ್ಕಾಗಿ ಉಪವಾಸ ಮಾಡುತ್ತೇನೆ ಎಂದು ನಿರ್ಧಾರ ಮಾಡಿ ಕಿಚ್ಚನ ಅಭಿಮಾನಿಯೊಬ್ಬರು ಉಪವಾಸ ಸತ್ಯಾಗ್ರಹ ಆರಂಭ ಮಾಡಿದ್ದಾರೆ. ಕನಕಪುರ ಬಳಿ ಇರುವ ಸಾತನೂರಿನ ನಾಗಸೊಂಡೆ ಗ್ರಾಮದಲ್ಲಿ ವಾಸವಾಗಿರುವ ಕಿಚ್ಚ ಶಿವು ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ.
ಈ ವಿಡಿಯೋ ನೋಡಿದ ಸುದೀಪ್ ಅಭಿಮಾನಿಗಳು ಹಾಗೂ ಸಾಮಾನ್ಯ ಜನರು ಇಂತಹ ಕೆಲಸ ಮಾಡುವುದರಿಂದ ನಿಮಗೂ ಹಾಗೂ ಸುದೀಪ್ ಅವರಿಗೂ ತೊಂದರೆ ಆಗುತ್ತದೆ. ಇವೆಲ್ಲವನ್ನು ಬಿಟ್ಟು ಬಿಡಿ ಎಂದು ಸಲಹೆ ನೀಡಿದ್ದರು.
ಕಿಚ್ಚ ಸುದೀಪ್ ಗಾಗಿ ಉಪವಾಸ ಕುಳಿತ ಅಭಿಮಾನಿ
ಈ ವಿಚಾರ ಅಭಿಮಾನಿಗಳ ಮೂಲಕ ಕಿಚ್ಚ ಸುದೀಪ್ ಅವರಿಗೆ ತಲುಪಿದೆ. ಉಪವಾಸ ಕೂರುತ್ತೇನೆ ಎಂದು ನಿರ್ಧಾರ ಮಾಡಿದ ಅಭಿಮಾನಿಗೆ ಕಿಚ್ಚ ಕಿವಿ ಮಾತು ಹೇಳಿದ್ದಾರೆ. ಹುಚ್ಚು ಅಭಿಮಾನಿಗೆ ಸುದೀಪ್ ಹೇಳಿದ ನೀತಿ ಪಾಠವೇನು? ಇಲ್ಲಿದೆ ಸಂಪೂರ್ಣ ಮಾಹಿತಿ ಮುಂದೆ ಓದಿ
ಕಿಚ್ಚ ಹುಟ್ಟು ಅಭಿಮಾನಿ
ತಮ್ಮನ್ನು ಭೇಟಿ ಮಾಡಲು ಉಪವಾಸ ಆರಂಭ ಮಾಡಿರುವ ಅಭಿಮಾನಿಯ ವಿಚಾರ ಸುದೀಪ್ ಅವರಿಗೆ ವಿಚಾರ ಮುಟ್ಟಿದೆ. ಅಭಿಮಾನಿಗಳಿಂದ ಈ ಬಗ್ಗೆ ತಿಳಿದುಕೊಂಡ ಕಿಚ್ಚ ಟ್ವಿಟ್ ಮೂಲಕ ತಿಳಿ ಹೇಳಿದ್ದಾರೆ.
ಕಿಚ್ಚನಿಂದ ಅಭಿಮಾನಿಗೆ ಕಿವಿ ಮಾತು
ಉಪವಾಸ ಮಾಡುತ್ತಿರುವ ಬಗ್ಗೆ ತಿಳಿದ ಸುದೀಪ್ ಅಭಿಮಾನಿಗೆ ತಿಳಿ ಹೇಳುವ ಕೆಲಸ ಮಾಡಿದ್ದಾರೆ. "ನೀವು ಚೆನ್ನಾಗಿದ್ದರೆ ನನಗೆ ಖುಷಿ ಉಪವಾಸ ಮಾಡಿ ನೋವು ನೀಡಬೇಡಿ" ಎಂದು ಟ್ವಿಟ್ ಮಾಡಿದ್ದಾರೆ.
ಪ್ರೀತಿ, ತಾಳ್ಮೆ ಸದಾ ಜೊತೆಯಲ್ಲಿರಲಿ
"ನನ್ನನ್ನು ಭೇಟಿ ಮಾಡಲು ಸಾಕಷ್ಟು ದಾರಿ ಇದೆ ಅದರಲ್ಲಿ ಉತ್ತಮವಾದುದ್ದನ್ನ ಮಾತ್ರ ಆಯ್ಕೆ ಮಾಡಿಕೊಳ್ಳಿ ಎಂದು ತಿಳಿಸಿರುವ ಸುದೀಪ್ ಪ್ರೀತಿ ಜೊತೆಯಲ್ಲಿ ತಾಳ್ಮೆ ಇರಲಿ. ಭೇಟಿ ಮಾಡಲು ನನಗೂ ಸಮಯ ಬೇಕಾಗಿದೆ. ನಿಮ್ಮೆಲ್ಲರ ಪ್ರೀತಿಗೆ ನಾನು ಚಿರರುಣಿ" ಎಂದಿದ್ದಾರೆ.
ಉಪವಾಸ ಕೈ ಬಿಡುವಂತೆ ಅಭಿಮಾನಿಗಳ ಮನವಿ
ಅಭಿಮಾನಿಯ ಬಗ್ಗೆ ಕಾಳಜಿ ವಹಿಸಿ ಸುದೀಪ್ ಟ್ವಿಟ್ ಮಾಡಿರುವುದನ್ನ ನೋಡಿರುವ ಅಭಿಮಾನಿಗಳು ಇನ್ನಾದರೂ ಉಪವಾಸ ಬಿಟ್ಟು ಜವಾಬ್ದಾರಿಯುತವಾಗಿ ನಡೆದುಕೊಳ್ಳುವಂತೆ ಕಿಚ್ಚ ಶಿವು ಅವರಿಗೆ ತಿಳಿಸಿದ್ದಾರೆ.
ಸ್ನೇಹಿತೆ ರಮ್ಯಾ ಹಾದಿಯಲ್ಲೇ ಹೆಜ್ಜೆ ಹಾಕಿದ ಐಂದ್ರಿತಾ