Don't Miss!
- News 21 ರಾಜ್ಯ, 102 ಲೋಕಸಭಾ ಸ್ಥಾನ, 1625 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲು ಮತದಾರ ಪ್ರಭು ಸಿದ್ಧ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಶಿ ವಿಶ್ವೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸುದೀಪ್ ಭೇಟಿ: ಕಿಚ್ಚನನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇತ್ತೀಚಿಗೆ ಕೋಲಾರ ಜಿಲ್ಲೆಯ ಕೋರಗೊಂಡಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಗ್ರಾಮದ ಪುರಾತನ ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ದಾರ ಹಾಗೂ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಖ್ಯಾತ ನಟ ಕಿಚ್ಚ ಸುದೀಪ್ ಭೇಟಿ ನೀಡಿದ್ದರು.
ಬೆಂಗಳೂರು ದಕ್ಷಿಣ ವಲಯದ ಡಿಸಿಪಿ ದೇವರಾಜ್, ಸುದೀಪ್ ಅವರ ಆಪ್ತ. ತನ್ನ ಹುಟ್ಟೂರಿನ ಕಾರ್ಯಕ್ರಮಕ್ಕೆ ಕಿಚ್ಚನನ್ನು ಆಹ್ವಾನಿಸಿದ್ದರು. ಗೆಳೆಯ ಪ್ರೀತಿಯ ಆಹ್ವಾನಕ್ಕೆ ಗೌರವ ನೀಡಿ ಸುದೀಪ್ ದೇವಸ್ಥಾನದ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
ಉಪೇಂದ್ರ 'ಕಬ್ಜ' ಚಿತ್ರೀಕರಣ: ಸುದೀಪ್ ಎಂಟ್ರಿಗೆ ಸಮಯ ನಿಗದಿ
ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ದೇವಸ್ಥಾನದ ಆಡಳಿತ ಮಂಡಳಿ ಜೊತೆ ಕೆಲವು ಸಮಯ ಮಾತನಾಡಿದ್ದಾರೆ.
ಇನ್ನು ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಪೀಠಾಧಿಪತಿಯಾದ ಶ್ರೀ ಶ್ರೀ ನಿರ್ಮಲಾನಂದ ಸ್ವಾಮಿಗಳು ಕೂಡ ಆಗಮಿಸಿದ್ದರು. ಕಾಶಿವಿಶ್ವೇಶ್ವರ ಸ್ವಾಮಿ ಲಿಂಗಕ್ಕೆ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದ್ದಾರೆ. ನೂನಾರು ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಿದ್ದರು.
Recommended Video
ಸುದೀಪ್ ಬರ್ತಿದ್ದಾರೆ ಎನ್ನುವ ವಿಚಾರ ಗೊತ್ತಾಗುತ್ತಿದಂತೆ ಅಭಿಮಾನಿಗಳು ದೇವಸ್ಥಾನದ ಬಳಿ ಬಂದು ಜಮಾಯಿಸಿದ್ದರು. ಸುದೀಪ್ ಕಾರು ಎಂಟ್ರಿ ಕೊಡುತ್ತಿದ್ದಾರೆ ಪ್ರೀತಿಯ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಒಮ್ಮೆಗೆ ಮುತ್ತಿಗೆ ಹಾಕಿದ ಅಭಿಮಾನಿಗಳು ಸುದೀಪ್ ಗೆ ಜೈಕಾರ ಕೂಗಿದರು. ಬಳಿಕ ಸುದೀಪ್ ಕಾರಿನ ಮೇಲೆ ಹತ್ತಿ ಅಭಿಮಾನಿಗಳತ್ತ ಕೈ ಬೀಸಿದ್ದಾರೆ.