Don't Miss!
- Technology
ಬ್ಯಾಂಕ್ ಹೆಸರಲ್ಲಿ ಬಂದ ಎಸ್ಎಮ್ಎಸ್ನಲ್ಲಿನ ಲಿಂಕ್ ಕ್ಲಿಕ್ ಮಾಡಿದ ಮಹಿಳೆ; ಮುಂದಾಗಿದ್ದೇನು?
- Sports
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಭಾರತ ತಂಡದ ಆರಂಭಿಕ ಬ್ಯಾಟರ್
- News
ಬೆಂಗಳೂರು: ಮುಂದಿನ 4 ದಿನಗಳಲ್ಲಿ ಕನಿಷ್ಠ ತಾಪಮಾನ, ಮೋಡ ಕವಿದ ವಾತವರಣ, ಎರಡು ದಿನ ಮಳೆ- ಇಲ್ಲಿದೆ ಮಾಹಿತಿ
- Automobiles
130 km ರೇಂಜ್ ನೀಡುವ 'ecoDryft' ಬೈಕ್ ಬಿಡುಗಡೆ... .ರೂ.99,999ಕ್ಕೆ ಸಿಗುತ್ತೆ!
- Lifestyle
ಒಂಟಿಯಾಗಿ ಅಂಟಾರ್ಟಿಕಾ ಯಾತ್ರೆ ಮಾಡಿದ ಮೊದಲ ಮಹಿಳೆ: ಕ್ಯಾಪ್ಟನ್ ಪ್ರೀತ್ ಚಾಂದಿ, ಇವರ ಸ್ಟೋರಿಯೇ ಸ್ಪೂರ್ತಿದಾಯಕ
- Finance
Budget 2023 Expectations: ಸಾಮಾನ್ಯ ಜನರ ಬಜೆಟ್ ನಿರೀಕ್ಷೆಗಳೇನು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಕಾಶಿ ವಿಶ್ವೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸುದೀಪ್ ಭೇಟಿ: ಕಿಚ್ಚನನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇತ್ತೀಚಿಗೆ ಕೋಲಾರ ಜಿಲ್ಲೆಯ ಕೋರಗೊಂಡಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಗ್ರಾಮದ ಪುರಾತನ ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ದಾರ ಹಾಗೂ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಖ್ಯಾತ ನಟ ಕಿಚ್ಚ ಸುದೀಪ್ ಭೇಟಿ ನೀಡಿದ್ದರು.
ಬೆಂಗಳೂರು ದಕ್ಷಿಣ ವಲಯದ ಡಿಸಿಪಿ ದೇವರಾಜ್, ಸುದೀಪ್ ಅವರ ಆಪ್ತ. ತನ್ನ ಹುಟ್ಟೂರಿನ ಕಾರ್ಯಕ್ರಮಕ್ಕೆ ಕಿಚ್ಚನನ್ನು ಆಹ್ವಾನಿಸಿದ್ದರು. ಗೆಳೆಯ ಪ್ರೀತಿಯ ಆಹ್ವಾನಕ್ಕೆ ಗೌರವ ನೀಡಿ ಸುದೀಪ್ ದೇವಸ್ಥಾನದ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
ಉಪೇಂದ್ರ
'ಕಬ್ಜ'
ಚಿತ್ರೀಕರಣ:
ಸುದೀಪ್
ಎಂಟ್ರಿಗೆ
ಸಮಯ
ನಿಗದಿ
ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ದೇವಸ್ಥಾನದ ಆಡಳಿತ ಮಂಡಳಿ ಜೊತೆ ಕೆಲವು ಸಮಯ ಮಾತನಾಡಿದ್ದಾರೆ.
ಇನ್ನು ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಪೀಠಾಧಿಪತಿಯಾದ ಶ್ರೀ ಶ್ರೀ ನಿರ್ಮಲಾನಂದ ಸ್ವಾಮಿಗಳು ಕೂಡ ಆಗಮಿಸಿದ್ದರು. ಕಾಶಿವಿಶ್ವೇಶ್ವರ ಸ್ವಾಮಿ ಲಿಂಗಕ್ಕೆ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದ್ದಾರೆ. ನೂನಾರು ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಿದ್ದರು.

Recommended Video
ಸುದೀಪ್ ಬರ್ತಿದ್ದಾರೆ ಎನ್ನುವ ವಿಚಾರ ಗೊತ್ತಾಗುತ್ತಿದಂತೆ ಅಭಿಮಾನಿಗಳು ದೇವಸ್ಥಾನದ ಬಳಿ ಬಂದು ಜಮಾಯಿಸಿದ್ದರು. ಸುದೀಪ್ ಕಾರು ಎಂಟ್ರಿ ಕೊಡುತ್ತಿದ್ದಾರೆ ಪ್ರೀತಿಯ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಒಮ್ಮೆಗೆ ಮುತ್ತಿಗೆ ಹಾಕಿದ ಅಭಿಮಾನಿಗಳು ಸುದೀಪ್ ಗೆ ಜೈಕಾರ ಕೂಗಿದರು. ಬಳಿಕ ಸುದೀಪ್ ಕಾರಿನ ಮೇಲೆ ಹತ್ತಿ ಅಭಿಮಾನಿಗಳತ್ತ ಕೈ ಬೀಸಿದ್ದಾರೆ.