Don't Miss!
- News 'ಅಖಾಡಕ್ಕೆ ರಾಹುಲ್ ಗಾಂಧಿ ಎಂಟ್ರಿ: ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲು'
- Automobiles 900 ಕಿ.ಮೀ ಕೇವಲ 3 ಗಂಟೆ ಪ್ರಯಾಣ: ಮತ್ತೆರಡು ನಗರಗಳಿಗೆ ಬುಲ್ಲೆಟ್ ರೈಲು, ಮುನ್ನುಗ್ಗುತ್ತಿದೆ ಭಾರತ!
- Lifestyle ಸನ್ ಟ್ಯಾನ್ ಸುಲಭವಾಗಿ ಹೋಗಲಾಡಿಸಲು ಅಡುಗೆ ಮನೆಯಲ್ಲಿರುವ ಈ ವಸ್ತುಗಳೇ ಸಾಕು
- Finance ದೀಪಿಕಾ ಪಡುಕೋಣೆಯೊಂದಿಗೆ ಅಂಬಾನಿ ಮಗಳು ಒಪ್ಪಂದ, ಇಲ್ಲಿದೆ ವಿವರ
- Technology Vivo: ಭಾರತದಲ್ಲಿ ವಿವೋ T3x 5G ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನು?, ಬೆಲೆ ಎಷ್ಟು?
- Sports RCB: ಇದೇ ಆರ್ಸಿಬಿ ಸಮಸ್ಯೆ ಮೂಲ; ವಿದೇಶಿ ಕೋಚಿಂಗ್ ಸ್ಟಾಫ್ ವಿರುದ್ಧ ಸಿಡಿಮಿಡಿಗೊಂಡ ವೀರೇಂದ್ರ ಸೆಹ್ವಾಗ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
''ನಾನು ಕೈಗೆ ಬಳೆ ಹಾಕಿಲ್ಲ'' : ಸಂಚಲನ ಮೂಡಿಸಿದ ಸುದೀಪ್ ಟ್ವೀಟ್
Recommended Video
'ಪೈಲ್ವಾನ್' ಸಿನಿಮಾದ ಪೈರಸಿ ವಿವಾದ ಈಗ ಬೇರೆಯದ್ದೇ ರೂಪ ಪಡೆದುಕೊಳ್ಳುತ್ತಿದೆ. ಇದೀಗ ನಟ ಕಿಚ್ಚ ಸುದೀಪ್ ಈ ಬಗ್ಗೆ ಖಡಕ್ ಆಗಿ ಟ್ವೀಟ್ ಮಾಡಿದ್ದಾರೆ.
''ನಾನು ಹಾಗೂ ನನ್ನ ಸ್ನೇಹಿತರು, ಕೈಗೆ ಹಾಕಿರುವುದು ಕಡಗ, ಬಳೆ ಅಲ್ಲ. ನನಗೆ ನನ್ನ ಸಿನಿಮಾ ಬಿಟ್ಟರೆ ಬೇರೆನುಗೊತಿಲ್ಲ. ನನ್ನ ಮೌನ, ನನ್ನ ತಾಳ್ಮೆ, ಎರಡನ್ನು ಪರೀಕ್ಷಿಸಿದ್ದಾರೆ. ಸಂಪೂರ್ಣ ಪೈಲ್ವಾನ್ ತಂಡದ ಶ್ರಮವನ್ನು ಹಾಳುಮಾಡಲು ತಮ್ಮ ಶಕ್ತಿಯನ್ನು ಹಾಕಿದ್ದಾರೆ. ಇದರ ಹಿಂದಿರುವ ವ್ಯಕ್ತಿಗಳ ನೆಮ್ಮದಿಯ ನಿದ್ರೆ, ಇನ್ನು ಕೆಲವು ದಿನಗಳು ಮಾತ್ರ.'' ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.
ನಿನ್ನೆ ರಾತ್ರಿ (ಸಪ್ಟೆಂಬರ್ 20) ಸುದೀಪ್ ಈ ಟ್ವೀಟ್ ಮಾಡಿದ್ದು, ಇಡೀ ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಮೂಡಿಸಿದೆ. ಇದ್ದಕ್ಕಿದ್ದ ಹಾಗೆ ಸುದೀಪ್ ಈ ಮಾತನ್ನು ಹೇಳಿದ್ದು, ಮುಂದೆ ಏನಾಗುತ್ತದೆ ಎನ್ನುವ ಪ್ರಶ್ನೆ ಮೂಡಿದೆ.
ಈಗಾಗಲೇ, ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ವಾರ್, ಫ್ಯಾನ್ಸ್ ವಾರ್ ಜೋರಾಗಿ ನಡೆಯುತ್ತಿದೆ. ಇದರ ಬಿಸಿಯನ್ನು ಸುದೀಪ್ ಟ್ವೀಟ್ ಮತ್ತಷ್ಟು ಹೆಚ್ಚು ಮಾಡಿದೆ.
ತಮ್ಮ 'ಪೈಲ್ವಾನ್' ಸಿನಿಮಾದ ಪೈರಸಿ ಮಾಡಿ, ಸಿನಿಮಾದ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸಿ, ಚಿತ್ರವನ್ನು ಸೋಲಿಸಲು ಪ್ರಯತ್ನ ಮಾಡುತ್ತಿರುವರ ವಿರುದ್ಧ ಸುದೀಪ್ ಸಮರ ಸಾರಿದ್ದಾರೆ.
ಪೈರಸಿ ವಿಷಯಕ್ಕೆ ಸಂಬಂಧಿಸಿದಂತೆ, ನಿನ್ನೆ (ಸಪ್ಟೆಂಬರ್ 20) ರಾಕೇಶ್ ವಿರಾಟ್ ಎಂಬ ನೆಲಮಂಗಲದ ಯುವಕನನ್ನು ಸೈಬಲ್ ಕ್ರೈಂ ಪೊಲೀಸರು ಬಂಧನ ಮಾಡಿದ್ದರು.