Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟ್ರೋಲ್ ಗಳು, ವೈಯಕ್ತಿಕ ದಾಳಿಯ ವಿರುದ್ಧ ಸುದೀಪ್ ಕಿಡಿ
Recommended Video
ಸೋಷಿಯಲ್ ಮೀಡಿಯಾದಲ್ಲಿ ಆಗುತ್ತಿರುವ ಟ್ರೋಲ್ ಗಳು, ವೈಯಕ್ತಿಕ ದಾಳಿಗಳ ವಿರುದ್ಧ ನಟ ಸುದೀಪ್ ಕಿಡಿಕಾರಿದ್ದಾರೆ. ಇಂದು (ಸಪ್ಟೆಂಬರ್ 21) ಜೆ ಪಿ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆಗೆ ಸಂದರ್ಶನ ನೀಡಿರುವ ಸುದೀಪ್, ಸದ್ಯದ ಸ್ಯಾಂಡಲ್ ವುಡ್ ಬೆಳವಣಿಗೆಗಳ ಬಗ್ಗೆ ಮಾತನಾಡಿದ್ದಾರೆ.
''ನಾನು ಯಾವುದೇ ವಿಷಯವಾಗಿ ಮಾತನಾಡಿದರು, ಉದ್ದೇಶಪೂರ್ವಕವಾಗಿ ಅದನ್ನು ವಿರೋದಿಸುವುದು, ಅದನ್ನು ಟ್ರೋಲ್ ಮಾಡುವ ಘಟನೆಗಳು ಸೋಷಿಯಲ್ ಮೀಡಿಯಾದಲ್ಲಿ ಹಿಂದೆಯಿಂದಲು ನಡೆಯುತ್ತಿತ್ತು. ಆದರೆ, ಈ ಬಗ್ಗೆ ನಾನು ಹೆಚ್ಚು ಗಮನ ಕೊಡುತ್ತಿರಲಿಲ್ಲ. ನಾನು ಇಷ್ಟು ದಿನ ಸುಮ್ಮನೆ ಇದ್ದದ್ದು ನನಗೆ, ನನ್ನ ಸಿನಿಮಾಗಳಿಗೆ ಹಾನಿ ಆಗುತ್ತದೆ ಎಂದು ಭಾವಿಸಿರಲಿಲ್ಲ.'' ಎಂದು ಸುದೀಪ್ ಹೇಳಿದ್ದಾರೆ.
ಘಟನೆಯ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿರುವ ಸುದೀಪ್, 'ಪೈಲ್ವಾನ್' ಪೈರಸಿ ಮಾಡಿದವರು, ಟ್ರೋಲ್ ಮಾಡಿದರು, ವೈಯಕ್ತಿಕ ದಾಳಿ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ವೈರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿನ್ನೆ ಸುದೀಪ್ ಮಾಡಿದ ಟ್ವೀಟ್ ದೊಡ್ಡ ಚರ್ಚೆ ಆಗಿತ್ತು. ಕೈಗೆ ಬಳೆ ತೊಟ್ಟಿಲ್ಲ ಎಂದು ಟ್ವೀಟ್ ಮಾಡಿದ್ದ ಸುದೀಪ್ ಈ ಬಗ್ಗೆ ಸಂದರ್ಶನಗಳಲ್ಲಿ ಏನು ಮಾತನಾಡಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.