Don't Miss!
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟ್ರೋಲ್ ಗಳು, ವೈಯಕ್ತಿಕ ದಾಳಿಯ ವಿರುದ್ಧ ಸುದೀಪ್ ಕಿಡಿ
Recommended Video
ಸೋಷಿಯಲ್ ಮೀಡಿಯಾದಲ್ಲಿ ಆಗುತ್ತಿರುವ ಟ್ರೋಲ್ ಗಳು, ವೈಯಕ್ತಿಕ ದಾಳಿಗಳ ವಿರುದ್ಧ ನಟ ಸುದೀಪ್ ಕಿಡಿಕಾರಿದ್ದಾರೆ. ಇಂದು (ಸಪ್ಟೆಂಬರ್ 21) ಜೆ ಪಿ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆಗೆ ಸಂದರ್ಶನ ನೀಡಿರುವ ಸುದೀಪ್, ಸದ್ಯದ ಸ್ಯಾಂಡಲ್ ವುಡ್ ಬೆಳವಣಿಗೆಗಳ ಬಗ್ಗೆ ಮಾತನಾಡಿದ್ದಾರೆ.
''ನಾನು ಯಾವುದೇ ವಿಷಯವಾಗಿ ಮಾತನಾಡಿದರು, ಉದ್ದೇಶಪೂರ್ವಕವಾಗಿ ಅದನ್ನು ವಿರೋದಿಸುವುದು, ಅದನ್ನು ಟ್ರೋಲ್ ಮಾಡುವ ಘಟನೆಗಳು ಸೋಷಿಯಲ್ ಮೀಡಿಯಾದಲ್ಲಿ ಹಿಂದೆಯಿಂದಲು ನಡೆಯುತ್ತಿತ್ತು. ಆದರೆ, ಈ ಬಗ್ಗೆ ನಾನು ಹೆಚ್ಚು ಗಮನ ಕೊಡುತ್ತಿರಲಿಲ್ಲ. ನಾನು ಇಷ್ಟು ದಿನ ಸುಮ್ಮನೆ ಇದ್ದದ್ದು ನನಗೆ, ನನ್ನ ಸಿನಿಮಾಗಳಿಗೆ ಹಾನಿ ಆಗುತ್ತದೆ ಎಂದು ಭಾವಿಸಿರಲಿಲ್ಲ.'' ಎಂದು ಸುದೀಪ್ ಹೇಳಿದ್ದಾರೆ.
ಘಟನೆಯ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿರುವ ಸುದೀಪ್, 'ಪೈಲ್ವಾನ್' ಪೈರಸಿ ಮಾಡಿದವರು, ಟ್ರೋಲ್ ಮಾಡಿದರು, ವೈಯಕ್ತಿಕ ದಾಳಿ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ವೈರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿನ್ನೆ ಸುದೀಪ್ ಮಾಡಿದ ಟ್ವೀಟ್ ದೊಡ್ಡ ಚರ್ಚೆ ಆಗಿತ್ತು. ಕೈಗೆ ಬಳೆ ತೊಟ್ಟಿಲ್ಲ ಎಂದು ಟ್ವೀಟ್ ಮಾಡಿದ್ದ ಸುದೀಪ್ ಈ ಬಗ್ಗೆ ಸಂದರ್ಶನಗಳಲ್ಲಿ ಏನು ಮಾತನಾಡಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.