Don't Miss!
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಟ್ಟುಹಬ್ಬ ಆಚರಣೆ ಬೇಡ ಎಂದಿದ್ದ ಸುದೀಪ್ ಕೊಟ್ಟರು ಸರ್ಪ್ರೈಸ್
ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಕೇವಲ ಎರಡು ದಿನ ಮಾತ್ರ ಬಾಕಿಯಿದೆ. ಸೆಪ್ಟೆಂಬರ್ 2 ರಂದು ಅಭಿನಯ ಚಕ್ರವರ್ತಿಯ ಜನುಮದಿನ. ಕಳೆದ ವರ್ಷ ಕೊರೊನಾದಿಂದ ಸಂಭ್ರಮಾಚರಣೆ ಮಾಡಲು ಸಾಧ್ಯವಾಗಲಿಲ್ಲ. ಈ ವರ್ಷವಾದರೂ ನೆಚ್ಚಿನ ನಟನನ್ನು ನೋಡಬಹುದು ಎಂದು ಕಾಯುತ್ತಿದ್ದ ಅಭಿಮಾನಿಗಳು ಸುದೀಪ್ ನಿರಾಸೆ ಮಾಡಿದ್ದರು.
ಈ ವರ್ಷವೂ ಹುಟ್ಟುಹಬ್ಬ ಆಚರಿಸುವುದು ಬೇಡ ಎಂದು ವಿನಂತಿಸಿದ್ದರು. ''ನನ್ನೆಲ್ಲಾ, ಪ್ರೀತಿಯ ಅಭಿಮಾನಿಗಳಿಗೆ ಸ್ನೇಹಿತರಲ್ಲಿ ಮನವಿ. ಕೋವಿಡ್ ಸಂಕಷ್ಟದ ಈ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ನಿಟ್ಟಿನಲ್ಲಿ ಈ ವರ್ಷವೂ ನಾನು ನನ್ನ ಹುಟ್ಟುಹಬ್ಬವನ್ನು ನಿಮ್ಮೊಂದಿಗೆ ಆಚರಿಸಿಕೊಳ್ಳಲು ಆಗುತ್ತಿಲ್ಲ. ನೀವು ಇದ್ದಲ್ಲಿಂದಲೇ ನಿಮ್ಮ ಪ್ರೀತಿ ತುಂಬಿದ ಶುಭಾಶಯಗಳನ್ನು ತಿಳಿಸಿ ಎಂದು ಕೋರುವ ನಿಮ್ಮ ಕಿಚ್ಚ. ಕ್ಷಮೆ ಇರಲಿ, ಮುಂದೆ ಪರಿಸ್ಥಿತಿ ಸುಧಾರಿಸಿದ ಬಳಿಕ ನಿಮ್ಮೆಲ್ಲರನ್ನು ಭೇಟಿಯಾಗುತ್ತೇನೆ" ಎಂದು ಸುದೀಪ್ ಮನವಿ ಮಾಡಿದ್ದರು.
ಅಭಿಮಾನಿಗಳಲ್ಲಿ ಕಿಚ್ಚನ ಪ್ರೀತಿಯ ಮನವಿ; ಏನದು?
ಈ ಸಲವೂ ಸುದೀಪ್ ಅವರನ್ನು ಭೇಟಿ ಮಾಡುವ ಅವಕಾಶ ಇಲ್ಲ ಎಂದು ನಿರಾಸೆಯಾಗಿದ್ದ ಅಭಿಮಾನಿಗಳಿಗೆ ಕಿಚ್ಚ ಸರ್ಪ್ರೈಸ್ ಕೊಟ್ಟಿದ್ದಾರೆ. ನೇರವಾಗಿ ಭೇಟಿ ಮಾಡದಿದ್ದರೂ ಫೇಸ್ಬುಕ್ ಲೈವ್ ಮೂಲಕ ಫ್ಯಾನ್ಸ್ ಜೊತೆ ಸಂವಾದ ನಡೆಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಡಿಜಿಟಲ್ ಒಟಿಟಿ ಫ್ಲಾಟ್ಫಾರ್ಮ್ (Digital_OTT) ಅಧಿಕೃತ ಟ್ವಿಟ್ಟರ್, ಫೇಸ್ಬುಕ್, ಇನ್ಸ್ಟಾಗ್ರಾಂ ಖಾತೆಯಲ್ಲಿ ಸುದೀಪ್ ಲೈವ್ ಬರಲಿದ್ದಾರೆ ಎಂದು ಪ್ರಕಟಿಸಿದೆ. ಸೆಪ್ಟೆಂಬರ್ 2 ರಂದು ಸಂಜೆ 6 ಗಂಟೆಗೆ ಲೈವ್ನಲ್ಲಿ ಸುದೀಪ್ ಜೊತೆ ಮಾತುಕತೆ ಮಾಡಬಹುದು.
ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ 'ವಿಕ್ರಾಂತ್ ರೋಣ' ಸಿನಿಮಾದ ಆಂಥೆಮ್ ಹಾಡು ಬಿಡುಗಡೆಯಾಗಲಿದೆ. ಕೋಟಿಗೊಬ್ಬ 3 ಚಿತ್ರತಂಡದಿಂದಲೂ ಉಡುಗೊರೆ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ. ಇದರ ಜೊತೆಗೆ ಹೊಸ ಸಿನಿಮಾಗಳು ಘೋಷಣೆಯಾಗಬಹುದು ಎನ್ನಲಾಗಿದೆ.
ಇನ್ನು ತಮಿಳು ನಿರ್ದೇಶಕ ವಿಕ್ರಂ ಪ್ರಭು ಜೊತೆ ಸುದೀಪ್ ಸಿನಿಮಾ ಮಾಡಲಿದ್ದಾರೆ. ಇತ್ತೀಚಿಗಷ್ಟೆ ವಿಕ್ರಂ ಪ್ರಭು ಬೆಂಗಳೂರಿಗೆ ಆಗಮಿಸಿ ಸುದೀಪ್ ಅವರನ್ನು ಭೇಟಿ ಮಾಡಿದರು. ಬಳಿಕ ಟ್ವಿಟ್ಟರ್ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದ ಪ್ರಭು, 'ಸದ್ಯದಲ್ಲೇ ಸಿನಿಮಾ ಮಾಡ್ತೇವೆ' ಎಂದು ಪ್ರಕಟಿಸಿದ್ದರು.